AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರ ಪ್ರತಿಪಕ್ಷ ನಾಯಕನ ಆಯ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ; ಬಿಎಸ್ ಯಡಿಯೂರಪ್ಪ

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

ಶೀಘ್ರ ಪ್ರತಿಪಕ್ಷ ನಾಯಕನ ಆಯ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ; ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on: Sep 07, 2023 | 2:47 PM

Share

ಬೆಂಗಳೂರು, ಸೆಪ್ಟೆಂಬರ್ 7: ‘ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದಾರೆ. ಪ್ರತಿಪಕ್ಷ ನಾಯಕರು ಇಲ್ಲ ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ. ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22-23 ಸೀಟು ಗೆಲ್ಲಿಸುವ ವಿಶ್ವಾಸವಿದೆ’ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸ್ತಿದ್ದಾರೆ. ನಾಳೆ 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಈ ಎಚ್ಚರಿಕೆಯನ್ನು ಸರ್ಕಾರಕ್ಕೆ ಕೊಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ರೈತರ ಆತ್ಮಹತ್ಯೆ ಬಗ್ಗೆ ಸಚಿವ ಶಿವಾನಂದ ಪಾಟೀಲ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಶಿವಾನಂದ ಪಾಟೀಲ್​ರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂಬ ಎಂಪಿ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೇಣುಕಾಚಾರ್ಯ ಜೊತೆ ಮಾತಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ FIR ದಾಖಲಾಗಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಪ್ರತಿಕ್ರಿಯೆ

ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ. ವಲಸಿಗ ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲಾ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಇನ್ನು ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ಬಗ್ಗೆ ಬುಧವಾರವೇ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಸಚಿವ ಜಿ ಪರಮೇಶ್ವರ ಅವರು ಹಿಂದೂ ಧರ್ಮದ ಬಗ್ಗೆ ನೀಡಿದ್ದ ಹೇಳಿಕೆಯನ್ನೂ ಖಂಡಿಸಿದ್ದರು. ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಪರಮೇಶ್ವರ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ. ರಾಷ್ಟ್ರಗೀತೆಯ ಅಂತ್ಯದಲ್ಲಿ ‘ಜೈ ಹಿಂದ್’ ಎನ್ನುವ ಜಯಘೋಷ, ನಮ್ಮ ತಾಯ್ನೆಲ, ಇಲ್ಲಿನ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ರಾಷ್ಟ್ರಧರ್ಮ, ಜೀವನ ಪದ್ಧತಿಯ ಸಂಕೇತವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಹೊಣೆಗೇಡಿತನದ ಮಾತುಗಳನ್ನಾಡಿ ಪರಮೇಶ್ವರ್ ಅವರು ತಮ್ಮ ಘನತೆಗೆ ತಾವೇ ಕುಂದು ತಂದುಕೊಂಡಿದ್ದಾರೆ. ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಘಾಸಿಯುಂಟು ಮಾಡುವ, ರಾಷ್ಟ್ರದ ಅಸ್ಮಿತೆಯಂತಹ ವಿಷಯಗಳ ಬಗ್ಗೆ ತಿಳಿದುಕೊಳ್ಳದೆ, ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ