AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವೀಕ್ ಆಗಿದೆ ಎಂದು ಬಿಎಸ್ ಯಡಿಯೂರಪ್ಪರಿಂದ ಒಂದು ದೊಡ್ಡ ಸಂದೇಶ; ಡಿಕೆ ಶಿವಕುಮಾರ್ ಹೇಳಿಕೆ

ಅರುಣ್ ಸಿಂಗ್ ಜೆಡಿಎಸ್ ಬಗ್ಗೆ ಬಾಯಿಗೆಬಂದಂತೆ ಮಾತಾಡಿದ್ದರು. ಆದರೆ ನಾವು ಮಾತ್ರ ಬಿಜೆಪಿಯಿಂದ ದೂರವಾಗಿ ಇದ್ದೇವೆ. ಜೆಡಿಎಸ್ ಜೊತೆ ನಾವು ಕೆಲವು ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಬಿಜೆಪಿ ಸದ್ಯಕ್ಕೆ ಮರ್ಯಾದೆಗೆ ಸೀಟ್ ಉಳಿಸಿಕೊಳ್ಳಬೇಕಿದೆ.

ಬಿಜೆಪಿ ವೀಕ್ ಆಗಿದೆ ಎಂದು ಬಿಎಸ್ ಯಡಿಯೂರಪ್ಪರಿಂದ ಒಂದು ದೊಡ್ಡ ಸಂದೇಶ; ಡಿಕೆ ಶಿವಕುಮಾರ್ ಹೇಳಿಕೆ
ಡಿಕೆ ಶಿವಕುಮಾರ್
TV9 Web
| Edited By: sandhya thejappa|

Updated on: Dec 07, 2021 | 2:12 PM

Share

ಬೆಂಗಳೂರು: ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಬಿಎಸ್ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಈ ಮೂಲಕ ಬಿಎಸ್ ಯಡಿಯೂರಪ್ಪರಿಂದ ಭಾರತೀಯ ಜನತಾ ಪಾರ್ಟಿ ವೀಕ್ ಆಗಿದೆ ಎಂಬ ಸಂದೇಶ ರವಾನೆಯಾಗಿದೆ ಅಂತ ಕೆಪಿಸಿಸಿ ಅಧಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೇಂದ್ರ, ರಾಜ್ಯದಲ್ಲಿ ಎರಡೂ ಕಡೆ ಅವರದ್ದೇ ಸರ್ಕಾರವಿದೆ. ಆದರೂ ಅವರ ಅಭ್ಯರ್ಥಿ ಸೋಲುತ್ತಾರೆಂಬ ಭಯ ಬಂದಿದೆ. ಅವರ ಭಯಕ್ಕೆ ಇದಕ್ಕಿಂತಲೂ ಬೇರೆ ಸಾಕ್ಷಿ ಮತ್ತೊಂದಿಲ್ಲ ಅಂತ ಡಿಕೆಶಿ ಹೇಳಿದ್ದಾರೆ.

ಅರುಣ್ ಸಿಂಗ್ ಜೆಡಿಎಸ್ ಬಗ್ಗೆ ಬಾಯಿಗೆಬಂದಂತೆ ಮಾತಾಡಿದ್ದರು. ಆದರೆ ನಾವು ಮಾತ್ರ ಬಿಜೆಪಿಯಿಂದ ದೂರವಾಗಿ ಇದ್ದೇವೆ. ಜೆಡಿಎಸ್ ಜೊತೆ ನಾವು ಕೆಲವು ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಬಿಜೆಪಿ ಸದ್ಯಕ್ಕೆ ಮರ್ಯಾದೆಗೆ ಸೀಟ್ ಉಳಿಸಿಕೊಳ್ಳಬೇಕಿದೆ. ಕೋಲಾರದಲ್ಲಿ ಮನೆ ಮನೆಗೆ ಹೋಗಿ ಪ್ರಚಾರ ಮಾಡುತ್ತಿದ್ದಾರೆ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯಪಟ್ಟರು.

ಡಿಕೆ ಶಿವಕುಮಾರ್ ವಿರುದ್ಧ ಸಿಟಿ ರವಿ ವಾಗ್ದಾಳಿ ಕಾಂಗ್ರೆಸ್​ನಲ್ಲಿ ಇದ್ದಾಗ ಅಕ್ರಮ ಆಸ್ತಿ ಮಾಡಿದ್ರು ಅಂತ ಶಿವಕುಮಾರ್ ಒಪ್ಪಿಕೊಂಡಿದ್ದಾರೆ ಅಂತ ಸಿಟಿ ರವಿ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರು ಬಿಜೆಪಿ ಸೇರಲಿಲ್ಲ ಅಂತ ಚಾರ್ಜ್ ಶೀಟ್ ಆಗಿಲ್ಲ. ಅಕ್ರಮ ಆಸ್ತಿ ಸಂಬಂಧಿಸಿದಂತೆ ಚಾರ್ಜ್ ಶೀಟ್ ಆಗಿದೆ. ನಾಯಕತ್ವಕ್ಕಾಗಿ ಕಾಂಗ್ರೆಸ್ನಲ್ಲಿ ಅಂತರ್ಯುದ್ದ ಆಗುತ್ತಿದೆ. ವಿಚಾರವನ್ನ ವಿಷಯಾಂತರ ಮಾಡಲು ಈ ರೀತಿ ಹೇಳಿಕೆ ನೀಡಿದ್ದಾರೆ. ಅವರ ಪಾಲಿಟಿಕ್ಸ್ ಬೇರೆ, ಅವರ ನಾಯಕತ್ವವೇ ಬೇರೆ. ಗೂಂಡಾಗಿರಿ ಮಾಡುವುದೇ ಡಿಕೆ ಶಿವಕುಮಾರ್ ಸಂಸ್ಕೃತಿ ಅಂತ ರವಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ

ಮುಂದಿನ ಕೊರೊನಾ ರೂಪಾಂತರಿ ವೈರಸ್ ಹೆಚ್ಚು ಮಾರಕ, ಸಾಂಕ್ರಾಮಿಕವಾಗಿರಲಿದೆ; ಆಕ್ಸ್​ಫರ್ಡ್​ ವಿಜ್ಞಾನಿ ಎಚ್ಚರಿಕೆ

17 ಬಾಲಕಿಯರಿಗೆ ಮಾದಕ ದ್ರವ್ಯ ಕೊಟ್ಟು ಕಿರುಕುಳ; ಮಾಡಿದ್ದ ಕಿಚಡಿ ಎಸೆದ ಶಾಲಾ ವ್ಯವಸ್ಥಾಪಕರು, ತನಿಖೆಗೆ ಆದೇಶಿಸಿದ ಬಿಜೆಪಿ ಶಾಸಕ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ