Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ, ಈಗ ಮಾಜಿ ಸಿಎಂ ವಾಸ್ತವ್ಯ ಎಲ್ಲಿ?

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸರ್ಕಾರಿ ನಿವಾಸ ಕಾವೇರಿಯನ್ನು ತೊರೆದಿದ್ದಾರೆ.

ಸರ್ಕಾರದ ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ, ಈಗ ಮಾಜಿ ಸಿಎಂ ವಾಸ್ತವ್ಯ ಎಲ್ಲಿ?
Follow us
ರಮೇಶ್ ಬಿ. ಜವಳಗೇರಾ
| Updated By: Ganapathi Sharma

Updated on:Jun 01, 2023 | 4:09 PM

ಬೆಂಗಳೂರು: 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(bs yediyurappa) ಅವರು ಸರ್ಕಾರದ ಕಾವೇರಿ ನಿವಾಸವನ್ನು ಖಾಲಿ ಮಾಡಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾವೇರಿ ನಿವಾಸದಲ್ಲಿ ಇದ್ದರು. ಬಳಿಕ ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಕಾವೇರಿಯಲ್ಲೇ ವಾಸ್ತವ್ಯ ಹೂಡಿದ್ದರು. ಇದೀಗ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸವನ್ನು ತೊರೆದಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಧವಳಗಿರಿ ಖಾಸಗಿ ನಿವಾಸಕ್ಕೆ ಶಿಫ್ಟ್ ಆಗಿದ್ದಾರೆ. ಇದೀಗ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಫ್ಟ್ ಆಗಲಿದ್ದಾರೆ.

ಇದನ್ನೂ ಓದಿ: ಜ್ಯೋತಿಷಿ ಸಲಹೆಯಂತೆ ಲಕ್ಕಿ ನಂಬರ್​ ಕೊಠಡಿ ಪಡೆದುಕೊಂಡ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಿವಾಸದ ಮೇಲೂ ಕಣ್ಣು

ಇನ್ನು ಸಿದ್ದರಾಮಯ್ಯನವರ ಅದೃಷ್ಟ ಮನೆ ಎಂದೇ ಹೇಳಲಾದ ಕುಮಾರಕೃಪಾ ಸರ್ಕಾರಿ ನಿವಾಸವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಹಂಚಿಕೆ ಮಾಡಲಾಗಿದೆ. ಸಿದ್ದರಾಮಯ್ಯನವರು ಈಗ ಕಾವೇರಿಗೆ ಶಿಫ್ಟ್ ಆಗಲಿದ್ದು, ಬಳಿಕ ಸಿದ್ದರಾಮಯ್ಯನವರ ನಿವಾಸಕ್ಕೆ ಡಿಕೆ ಶಿವಕುಮಾರ್​ ಗೃಹ ಪ್ರವೇಶ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರು ಈಗ ವಾಸವಿರುವ ನಿವಾಸ ಅದೃಷ್ಟದ ಮನೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ಡಿಕೆ ಶಿವಕುಮಾರ್ ಅವರು ಜ್ಯೋತಿಷಿಯವರ ಸಲಹೆ ಮೇರೆಗೆ ಈಗಿರುವ ಸಿದ್ದರಾಮಯ್ಯನವರ ಮನೆಯನ್ನು ಆಯ್ಕೆ ಮಾಡಿದ್ದರು. ಅದರಂತೆ ಆ ಅದೃಷ್ಟದ ಮನೆ ಡಿ.ಕೆ ಶಿವಕುಮಾರ್ ಪಾಲಾಗಿದೆ.

ಕಾವೇರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ. ಅದರ ಪಕ್ಕದಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾ ಇದೆ. ಸಹಜವಾಗಿ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕಾರ ಮಾಡಿದರವರು ಈ ನಿವಾಸದಲ್ಲಿ ವಾಸ್ತವ್ಯ ಹೂಡುತ್ತಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ದರು. ಬಳಿಕ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಸಿಎಂ ಹೆಚ್​ .ಡಿ ಕುಮಾರಸ್ವಾಮಿ ಖಾಸಗಿ ಹೋಟೆಲ್‌ ಒಂದರಲ್ಲಿ ವಾಸ್ತವ್ಯ ಹೂಡಿದ್ದರೆ ಸಿದ್ದರಾಮಯ್ಯನವರು ಕಾವೇರಿ ನಿವಾಸದಲ್ಲಿ ವಾಸ್ತವ್ಯ ಮುಂದುವರಿಸಿದ್ದರು.

ಸಮ್ಮಿಶ್ರ ಸರ್ಕಾರದ ಪತನವಾದ ಬಳಿಕವೂ ಸಿದ್ದರಾಮಯ್ಯ ಅವರ ಕಾವೇರಿ ತೊರೆಯಲು ಮನಸ್ಸು ಮಾಡಿರಲಿಲ್ಲ. ಅಂದು ಸಿಎಂ ಆಗಿದ್ದ ಬಿಎಸ್‌ ಯಡಿಯೂರಪ್ಪ ಅವರು ಧವಳಗಿರಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿಂದಲೇ ಗೃಹ ಕಚೇರಿ ಕೃಷ್ಣಾಗೆ ಆಗಮಿಸುತ್ತಿದ್ದರು. ಆದರೆ ಇದು ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂಬ ಕಾರಣಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕುಮಾರಕೃಪಾ ನಿವಾಸವನ್ನು ನೀಡಿ ಕಾವೇರಿಗೆ ಯಡಿಯೂರಪ್ಪ ಶಿಫ್ಟ್ ಆಗಿದ್ದರು. ಆದ್ರೆ, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲೇ ತಮ್ಮ ವಾಸ್ತವ್ಯವನ್ನು ಮುಂದುವರಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆಯೇ ಯಡಿಯೂರಪ್ಪ ತಾವೇ ಕಾವೇರಿ ನಿವಾಸ ತೊರೆದಿದ್ದಾರೆ.

Published On - 3:58 pm, Thu, 1 June 23

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ