AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಯಡಿಯೂರಪ್ಪ, ಕುತೂಹಲ ಮೂಡಿಸಿದ ಬಿಎಸ್​ವೈ ಹೇಳಿಕೆ

ಲೋಕಸಭಾ ಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳಲಿವೆ ಎಂದು ಕೇವಲ ಅಂತೆ-ಕಂತೆ ಸುದ್ದಿ ಹಬ್ಬಿತ್ತು. ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿ ಮೈತ್ರಿ ಬಗ್ಗೆ ಚರ್ಚೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ಸೂಚಿಸಿದ್ದಾರೆ ಅಂತೆಲ್ಲ ಹೇಳಿ ಮೈತ್ರಿ ಸುದ್ದಿ ಖಚಿತಪಡಿಸಿದ್ದರು. ಆದ್ರೆ, ಇದೀಗ ಯಡಿಯೂರಪ್ಪ ಯುಟರ್ನ್​ ಹೊಡೆದಿದ್ದಾರೆ.

ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಯಡಿಯೂರಪ್ಪ, ಕುತೂಹಲ ಮೂಡಿಸಿದ ಬಿಎಸ್​ವೈ ಹೇಳಿಕೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Edited By: |

Updated on: Sep 10, 2023 | 5:27 PM

Share

ಬೆಂಗಳೂರು, (ಸೆಪ್ಟೆಂಬರ್ 10): ಜೆಡಿಎಸ್​ ಜೊತೆ (JDS BJP alliance ) ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, JDS ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಖುದ್ದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಸ್ಪಷ್ಟಪಡಿಸಿದ್ದರು. ಆದ್ರೆ, ಇದೀಗ ಏಕಾಏಕಿ ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ ಎಂದು ಯಡಿಯೂರಪ್ಪ ಯುಟರ್ನ್​ ಹೊಡೆದಿದ್ದಾರೆ.

ಈ ಬಗ್ಗೆ ಇಂದು(ಸೆಪ್ಟೆಂಬರ್ 10) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಪ್ರಧಾನಿ ನರೇಂದ್ರ ಮೋದಿ ಬೇರೆ ವಿಷಯದಲ್ಲಿ ಬ್ಯುಸಿಯಾಗಿದ್ದಾರೆ. ಬಹುಶ ನಾಳೆ ಅಥವಾ ನಾಡಿದ್ದು ನಂತರ ಮಾತುಕತೆ ಆಗಬಹುದು. ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ, ಕಾದು ನೋಡುತ್ತೇವೆ.ಈ ಹಿಂದೆ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ. ಈಗಲೂ ಅಷ್ಟೇ ಮೈತ್ರಿ ವಿಚಾರ ಯಾವುದೇ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಜೆಡಿಎಸ್​ ಜತೆ ಮೈತ್ರಿ ಖಚಿತಪಡಿಸಿದ ಬೊಮ್ಮಾಯಿ, ಶಾ ರವಾನಿಸಿದ ಮಾಹಿತಿ ಬಿಚ್ಚಿಟ್ಟ ಯಡಿಯೂರಪ್ಪ

JDS ಬಿಜೆಪಿಯ ಬಿ ಟೀಂ ಎನ್ನುವುದು ನಿಜವಾಯ್ತು ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ನಾನು ಮಾತಾಡಲು ಹೋಗಲ್ಲ. ಅಮಿತ್ ಶಾ ಜೊತೆ ನಾನು ಇನ್ನೂ ಮಾತಾಡಿಲ್ಲ ಎಂದರು.

ಮೊನ್ನೆ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರಿನಲ್ಲಿ ಈ ಮೈತ್ರಿ ಬಗ್ಗೆ ಸೆಪ್ಟೆಂಬರ್ 08 ಸುದ್ದಿಗಾರರೊಂದಿಗೆ ಮಾತನಾಡಿದ್ದ ಯಡಿಯೂರಪ್ಪ, ಜೆಡಿಎಸ್​ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, JDS ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದ್ದರು. ಇದರೊಂದಿಗೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗುವುದನ್ನು ಖಚಿತಪಡಿಸಿದ್ದರು. ಆದ್ರೆ, ಇದೀಗ ಬಿಎಸ್​ವೈ ಉಲ್ಟಾ ಹೊಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು