AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BY Vijayendra: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಬಿವೈ ವಿಜಯೇಂದ್ರ ಘೋಷಣೆ

ಬಿವೈ ವಿಜಯೇಂದ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇಷ್ಟು ದಿನ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ವೈ ವಿಜಯೇಂದ್ರ ಅಧಿಕೃತವಾಗಿ ರಾಜಕಾರಣದ ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

BY Vijayendra: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಬಿವೈ ವಿಜಯೇಂದ್ರ ಘೋಷಣೆ
ಬಿ.ವೈ ವಿಜಯೇಂದ್ರ
TV9 Web
| Edited By: |

Updated on:Nov 27, 2021 | 4:28 PM

Share

ತುಮಕೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ (Family Politics) ಬಗ್ಗೆ ಟೀಕಿಸುತ್ತಿದ್ದ ಬಿಜೆಪಿಯಲ್ಲೂ ಈಗ ಕುಟುಂಬ ರಾಜಕಾರಣ ಹೆಚ್ಚುತ್ತಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಮಗ ಬಿವೈ ರಾಘವೇಂದ್ರ (BY Raghavendra) ಸಂಸದರಾಗಿದ್ದಾರೆ. ಇದೀಗ ಅವರ ಇನ್ನೋರ್ವ ಮಗ ಬಿವೈ ವಿಜಯೇಂದ್ರ (BY Vijayendra) ಕೂಡ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇಷ್ಟು ದಿನ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ವೈ ವಿಜಯೇಂದ್ರ ಅಧಿಕೃತವಾಗಿ ರಾಜಕಾರಣದ ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಬಿ.ವೈ. ವಿಜಯೇಂದ್ರ ತಮ್ಮ ತಂದೆ ಯಡಿಯೂರಪ್ಪನವರ ಅಧಿಕಾರಾವಧಿಯಲ್ಲಿ ಆಡಳಿತದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂಬ ಆರೋಪವನ್ನು ಎದುರಿಸಿದ್ದರು. ಇದೇ ಕಾರಣಕ್ಕೆ ಅನೇಕ ಬಿಜೆಪಿ ನಾಯಕರು ಹೈಕಮಾಂಡ್​ಗೂ ದೂರು ನೀಡಿದ್ದರು. ಇಂದು ತುಮಕೂರಿನಲ್ಲಿ ಮಾತನಾಡಿರುವ ಬಿ.ವೈ. ವಿಜಯೇಂದ್ರ, ನಾನು 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಪ್ರವಾಸ ಮಾಡುತ್ತಿದ್ದೇನೆ. ನಾನು ರಾಜಕೀಯ ಸನ್ಯಾಸಿಯಲ್ಲ. ಮುಂದಿನ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯಿದೆ. ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಾಗಿನಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಬಯಕೆಯನ್ನು ಹೊಂದಿದ್ದೇನೆ. ನಾನು ಯವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸಲಿದೆ ಎಂದು ತಮ್ಮ ಚುನಾವಣಾ ಸ್ಪರ್ಧೆಯ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ತುಮಕೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ ಜೆಡಿಎಸ್​ ಬೆಂಬಲ ಕೋರಿದ್ದಾರೆ ಎಂದರೆ ಬಿಜೆಪಿ ವೀಕ್ ಆಗಿದೆ ಎಂದು ಅರ್ಥವಲ್ಲ. ಹೆಚ್ಚಿನ ಅಂತರದಿಂದ ಗೆಲ್ಲಬೇಕೆಂಬ ಉದ್ದೇಶದಿಂದ ಅವರು ಬೆಂಬಲ ಕೇಳಿದ್ದಾರೆ. ಒಳ್ಳೆಯ ಉದ್ದೇಶದಿಂದ ಬಿಎಸ್​ವೈ ಬೆಂಬಲ ಕೋರಿರುತ್ತಾರೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಾತಾವರಣವಿದೆ. ಬಿಜೆಪಿ ಸ್ಪರ್ಧಿಸಿರುವ 20 ಕ್ಷೇತ್ರಗಳ ಪೈಕಿ 15ರಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬೆಂಬಲ ನೀಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ: ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ

Published On - 4:24 pm, Sat, 27 November 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ