AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ

ಪ್ರತಿಪಕ್ಷ ನಾಯಕ ಎನ್ನುವುದನ್ನ ಮರೆತು ಹೇಳಿಕೆ ನೀಡುತ್ತಿದ್ದಾರೆ. ಮೈಸೂರನಲ್ಲಿಯೇ ಸೋತು ಹೀಗೆ ಮಾತಾಡುವುದು ಸರಿಯಲ್ಲ. ಇವರ ಸೊಕ್ಕಿನ ದಿಮಾಕಿನ ಮಾತುಗಳಿಗೆ ಚುನಾವಣೆ ಉತ್ತರ ನೀಡಲಿದೆ ಅಂತ ಅಭಿಪ್ರಾಯಪಟ್ಟರು.

ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತೆ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ
ಬಿಎಸ್ ಯಡಿಯೂರಪ್ಪ
TV9 Web
| Edited By: sandhya thejappa|

Updated on: Dec 04, 2021 | 12:58 PM

Share

ದಾವಣಗೆರೆ: ಈಗಾಗಲೇ ನಾನು ಬಹಿರಂಗವಾಗಿಯೇ ಹೇಳಿದ್ದೇನೆ. ಕುಮಾರಸ್ವಾಮಿ ಅವರೊಂದಿಗೆ ಮಾತಾಡಿರುವೆ. ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಇಲ್ಲಾ ಅಲ್ಲಿ ಬಿಜೆಪಿಗೆ ಸಹಕಾರ ನೀಡಬೇಕು ಎಂದಿದ್ದೇನೆ. ನೂರಕ್ಕೆ ನೂರು ಸಹಕಾರ ನೀಡುತ್ತಾರೆ ಅಂತ ದಾವಣಗೆರೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurapppa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಸಿದ್ದರಾಮಯ್ಯ ಜೆಡಿಎಸ್ -ಬಿಜೆಪಿ ಬಿ ಟೀಮ್ ಹೇಳಿಕೆಗೆ ತಿರುಗೇಟು ನೀಡಿದ ಬಿಎಸ್​ವೈ​, ಪ್ರತಿಪಕ್ಷ ನಾಯಕ ಎನ್ನುವುದನ್ನ ಮರೆತು ಹೇಳಿಕೆ ನೀಡುತ್ತಿದ್ದಾರೆ. ಮೈಸೂರನಲ್ಲಿಯೇ ಸೋತು ಹೀಗೆ ಮಾತಾಡುವುದು ಸರಿಯಲ್ಲ. ಇವರ ಸೊಕ್ಕಿನ ದಿಮಾಕಿನ ಮಾತುಗಳಿಗೆ ಚುನಾವಣೆ ಉತ್ತರ ನೀಡಲಿದೆ ಅಂತ ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸುಳಿವು ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಿಎಸ್ ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಉತ್ತರಿಸಲಿದ್ದಾರೆ. ಇಷ್ಟರಲ್ಲೇ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ನನಗೂ ಇದೆ ಅಂತ ದಾವಣಗೆರೆ ತಾಲೂಕಿನ ಆನಗೋಡದಲ್ಲಿ ಬಿಎಸ್​ವೈ ಹೇಳಿಕೆ ನೀಡಿದ್ದಾರೆ.

ಮೋದಿಯನ್ನು ಹೆಚ್ಡಿ ದೇವೇಗೌಡರು ಆತ್ಮೀಯವಾಗಿ ಭೇಟಿ ಆಗಿದ್ದಾರೆ. ಪರಿಷತ್ ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಮಾಡುತ್ತೇವೆ ಅಂತ ಈ ಹಿಂದೆ ಯಡಿಯೂರಪ್ಪ ಹೇಳಿದ್ದರು. ಅದರಂತೆ ಇಂದು ಜಿಲ್ಲೆಯಲ್ಲಿ ನೂರಕ್ಕೆ ನೂರು ಜೆಡಿಎಸ್ ಪಕ್ಷ ಸಹಕಾರ ನೀಡುತ್ತದೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ

ಒಮಿಕ್ರಾನ್ ಸೋಂಕಿತ ವಿದೇಶಕ್ಕೆ ಎಸ್ಕೇಪ್! ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಿದ ಬಿಬಿಎಂಪಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ