AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ತಲುಪಿದ ಬಿಎಸ್ ಯಡಿಯೂರಪ್ಪ; ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಹೇಳಿದ್ದೇನು?

ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಅವರೇ. ಮೈತ್ರಿ ಬಗ್ಗೆ ನಾನೇನು ಪ್ರಸ್ತಾಪ ಮಾಡುವುದಿಲ್ಲ. ಮೈತ್ರಿ ಬಗ್ಗೆ ವರಿಷ್ಠರೇ ಕೇಳಿದರೆ ನಮ್ಮ ಅಭಿಪ್ರಾಯ ಹೇಳುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ದೆಹಲಿ ತಲುಪಿದ ಬಿಎಸ್ ಯಡಿಯೂರಪ್ಪ; ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಹೇಳಿದ್ದೇನು?
ಬಿಎಸ್ ಯಡಿಯೂರಪ್ಪ
ಹರೀಶ್ ಜಿ.ಆರ್​.
| Edited By: |

Updated on: Sep 13, 2023 | 4:33 PM

Share

ನವದೆಹಲಿ, ಸೆಪ್ಟೆಂಬರ್ 13: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಬುಧವಾರ ಮಧ್ಯಾಹ್ನ ದೆಹಲಿ ತಲುಪಿದ್ದಾರೆ. ಸಂಜೆ 7 ಗಂಟೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ಅವರು ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ (BJP JDS Alliance) ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ ನಾವು ಚರ್ಚಿಸುವುದು ಸರಿಯಲ್ಲ. ಇಂದಿನ ಸಭೆಯಲ್ಲಿ ಹೈಕಮಾಂಡ್ ಪ್ರಸ್ತಾಪಿಸಿದರೆ ನಾವು ನಮ್ಮ ಅಭಿಪ್ರಾಯ ಹೇಳಬಹುದು. ರಾಜ್ಯಾಧ್ಯಕ್ಷರ ಮತ್ತು ಪ್ರತಿಪಕ್ಷ ನಾಯಕರ ಆಯ್ಕೆ ಆಗಬೇಕು ಎಂಬ ಬೇಡಿಕೆ ಇದೆ. ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರವಾಗಿ ಮಾತುಕತೆ ಆಗದೆ ಪ್ರತಿಕ್ರಿಯೆ ನೀಡಲು ಇಷ್ಟಪಡಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಅವರೇ. ಮೈತ್ರಿ ಬಗ್ಗೆ ನಾನೇನು ಪ್ರಸ್ತಾಪ ಮಾಡುವುದಿಲ್ಲ. ಮೈತ್ರಿ ಬಗ್ಗೆ ವರಿಷ್ಠರೇ ಕೇಳಿದರೆ ನಮ್ಮ ಅಭಿಪ್ರಾಯ ಹೇಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಕಾರಣ ನಿಂತ ನೀರಲ್ಲ, ಕೆಲ ಸಂದರ್ಭದಲ್ಲಿ ಕೆಲ ನಿರ್ಧಾರ ಅನಿವಾರ್ಯ; ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಾತು

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಬಗ್ಗೆ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಸುಳಿವು ನೀಡಿದ್ದರು. ಅದು ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅತ್ತ ಜೆಡಿಎಸ್​ ಪ್ರಮುಖರೂ ಸಹ ಮೈತ್ರಿ ವಿಚಾರವಾಗಿ ಸಕಾರಾತ್ಮಕ ಹೇಳಿಕೆ ನೀಡುತ್ತಿದ್ದಾರೆ.

ಮತ್ತಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ