AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Babu: ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್​ ಬಾಬುಗೆ ಎದುರಾಯ್ತು ಇಡಿ ಸಂಕಷ್ಟ

ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಿ ಕುಬೇರ ಕೆಜಿಎಫ್ ಬಾಬುಗೆ (KGF Babu) ಸಂಕಷ್ಟ ಎದುರಾಗಿದೆ.

KGF Babu: ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್​ ಬಾಬುಗೆ ಎದುರಾಯ್ತು ಇಡಿ ಸಂಕಷ್ಟ
ಕೆಜಿಎಫ್​ ಬಾಬು
ರಮೇಶ್ ಬಿ. ಜವಳಗೇರಾ
|

Updated on: May 17, 2023 | 9:08 AM

Share

ಮುಖ್ಯಾಂಶಗಳು

  • ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್​ ಬಾಬುಗೆ ಇಡಿ ಸಂಕಷ್ಟ
  • ವಿಚಾರಣೆಗೆ ಹಾಜರಾಗುವಂತೆ KGF ಬಾಬುಗೆ ಇಡಿ ನೋಟಿಸ್​​
  • ಇಂದು ಇಡಿ ವಿಚಾರಣೆಗೆ ಹಾಜರಾಗಲಿರುವ ಕೆಜಿಎಫ್​ ಬಾಬು

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ​​ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್​ ಬಾಬುಗೆ (KGF Babu) ಇಡಿ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಕೆಜಿಎಫ್​ ಬಾಬುಗೆ ಇಡಿ ನೋಟಿಸ್ ನೀಡಿದ್ದು, ಇಂದುಶ್ರ(ಮೇ 17) ದೆಹಲಿಯ ಇಡಿ ಕಚೇರಿಯಲ್ಲಿ ಕೆಜಿಎಫ್​ ಬಾಬು ವಿಚಾರಣೆಗೆ ಹಾಜರಾಗಲಿದ್ದಾರೆ.  ಕೆಜಿಎಫ್ ಬಾಬು ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.

ಇದನ್ನೂ ಓದಿ: KGF Babu: ಮನೆ ಮನೆಗೆ ಕೆಜಿಎಫ್ ಬಾಬು ಕಳುಹಿಸಿದ್ದ 30 ಲಕ್ಷದ ಡಿಡಿ ಜಪ್ತಿ ಮಾಡಿದ ಪೊಲೀಸರು

ಬಾಬು ಅವರ ಹಲವು ಕಡೆಗಳ ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್‌ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ. ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.

ಇಡಿ ಅಕ್ರಮ ಹಣದ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿದೆ. ಈ ಹಿಂದೆ 4 ಸಾವಿರ ಕೋಟಿ ರೂ.ಗೂ ಹೆಚ್ಚಿನ ಸಂಪತ್ತನ್ನು ಹೊಂದಿರುವುದಾಗಿ ಬಾಬು ಹೇಳಿಕೆ ಕೊಟ್ಟಿದ್ದರು. ರಾಜಕೀಯವಾಗಿ ಮಹತ್ವಾಕಾಂಕ್ಷಿಯಾಗಿದ್ದ ಬಾಬು ಇತ್ತೀಚೆಗೆ ಕಾಂಗ್ರೆಸ್​ನಿಂದ ಉಚ್ಛಾಟನೆಗೊಂಡಿದ್ದರು. ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳಿಗೆ ಕಳೆದ ಬಾರಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ ಸೋಲು ಕಂಡಿದ್ದರು. ಅಲ್ಲದೇ ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!