AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BY Vijayendra: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ, ಹಲವು ನಾಯಕರು ಗೈರು

BY Vijayendra Takes Charge as Karnataka BJP President: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು (ನವೆಂಬರ್ 15) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡರು. ಆದ್ರೆ, ಪದಗ್ರಹಣ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ.

BY Vijayendra: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ, ಹಲವು ನಾಯಕರು ಗೈರು
ಬಿವೈ ವಿಜಯೇಂದ್ರ
TV9 Web
| Edited By: |

Updated on:Nov 15, 2023 | 10:58 AM

Share

ಬೆಂಗಳೂರು, (ನವೆಂಬರ್ 15): ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಆದ್ರೆ, ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ. ಹೌದು.. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರ ಗೈರು ಎದ್ದು ಕಾಣುತ್ತಿತ್ತು.

ಸಿ.ಟಿ.ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ.ಸುಧಾಕರ್​, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕಕರು ವಿಜಯೇಂದ್ರ ಕಾರ್ಯಕ್ರಮದಿಂದ ದೂರು ಉಳಿದಿದ್ದಾರೆ. ಇದರೊಂದಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಆರಂಭದಲ್ಲೇ ಬಂಡಾಯದ ಬಿಸಿ ತಟ್ಟಿದೆ.

ಇದನ್ನೂ ಓದಿ: Karnataka Breaking Kannada News Live: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಇನ್ನು ಪದಗ್ರಹಣ ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್​.ಯಡಿಯೂರಪ್ಪ, ಡಿವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

ಅಧಿಕಾರ ಸ್ವೀಕಾರಕ್ಕೂ ಮೊದಲು ವಿಜಯೇಂದ್ರ ಇಂದು ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮ ಮತ್ತು ಗೌರಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದರು. ನಿನ್ನೆ ರಾತ್ರಿಯಿಂದ ಪುರೋಹಿತರಾದ ನಾಗೇಂದ್ರ ಭಾರದ್ವಾಜ್ ತಂಡದಿಂದ ಬಿಜೆಪಿ ಕಚೇರಿಯಲ್ಲಿ ನಡೆದ ವಾಸ್ತು ಪೂಜೆ, ಗಣ ಹೋಮ, ದುರ್ಗಾ ಹೋಮ, ಸುದರ್ಶನ ಹೋಮ ಮತ್ತು ತ್ರೈಲೋಕ್ಯ ಸುಂದರಿ ಹೋಮ ಮತ್ತು ಪೂಜಾ ಕಾರ್ಯಗಳು ನಡೆದಿದ್ದವು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:39 am, Wed, 15 November 23

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು