AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಯತ್ನಾಳ್​ ಆರೋಪಗಳ ಬಗ್ಗೆ ಪ್ರಸ್ತಾಪ, ಇದಕ್ಕೆ ವಿಜಯೇಂದ್ರ ಹೇಳಿದ್ದು ಒಂದೇ ಮಾತು

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆ ಅಂತ್ಯವಾಗಿದ್ದು, ಸಭೆಯಲ್ಲಿ ವಿಜಯೇಂದ್ರ ಅವರು ಪದಾಧೀಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇನ್ನು ಪ್ರಮುಖವಾಗಿ ಈ ಸಭೆಯಲ್ಲಿ ಬಸನಗೌಡ ಪಾಟೀಲ್​ ಯತ್ನಾಳ್ ಬಹಿರಂಗ ಹೇಳಿಕೆಗಳ ಬಗ್ಗೆ ಪ್ರಸ್ತಾಪವಾಗಿದ್ದು, ಯತ್ನಾಳ್​ ಹೇಳಿಕೆ ಬಗ್ಗೆ ವರಿಷ್ಠರ ಗಮನಕ್ಕೆ ತರಲೇಬೇಕು ಎಂದು ಕೆಲ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಯತ್ನಾಳ್​ ಆರೋಪಗಳ ಬಗ್ಗೆ ಪ್ರಸ್ತಾಪ, ಇದಕ್ಕೆ ವಿಜಯೇಂದ್ರ ಹೇಳಿದ್ದು ಒಂದೇ ಮಾತು
ಬಿಜೆಪಿ ಸಭೆ
ಕಿರಣ್​ ಹನಿಯಡ್ಕ
| Edited By: |

Updated on: Dec 27, 2023 | 2:55 PM

Share

ಬೆಂಗಳೂರು, (ಡಿಸೆಂಬರ್ 27): ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಬಿ.ವೈ.ವಿಜಯೇಂದ್ರ (BY Vijayendra)ಇಂದು(ಡಿಸೆಂಬರ್ 27) ರಾಜ್ಯ ಪದಾಧಿಕಾರಿಗಳ ತಂಡದ ಸಭೆ ಮಾಡಿದರು. ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಮಾಡಿದರು. ಅಲ್ಲದೇ ಪ್ರಮುಖವಾಗಿ ಪಕ್ಷಕ್ಕೆ ಮುಜುಗರ ತರುವಂತೆ ಬಹಿರಂಗ ಹೇಳಿಕೆಗಳನ್ನು ಕೊಡದಂತೆ ಪದಾಧಿಕಾರಿಗಳಿಗೆ ಸೂಚ್ಯವಾಗಿ ಸೂಚನೆ ನೀಡಿದ್ದಾರೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ವಿರುದ್ಧ 40 ಸಾವಿರ ಕೋಟಿ ರೂ. ಮೊತ್ತದ ಕೋವಿಡ್ ಅಕ್ರಮದ ಬಗ್ಗೆ ಮಾಡಿರುವ ಆರೋಪ ಈ ಸಭೆಯಲ್ಲಿ ಪ್ರಸ್ತಾಪವಾಯ್ತು. ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಬಹಳ ಡ್ಯಾಮೇಜ್ ಆಗುವ ಬಗ್ಗೆ ಸಭೆಯಲ್ಲಿ ಕೆಲವು ಪದಾಧಿಕಾರಿಗಳಿಂದ ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಯತ್ನಾಳ್ ಹೇಳಿಕೆಗಳ ಬಗ್ಗೆ ಕೆಲವು ಪದಾಧಿಕಾರಿಗಳಿಂದ ಸಭೆಯಲ್ಲಿ ಖಂಡನೆ ವ್ಯಕ್ತವಾಗಿದ್ದು, ಇದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿ, ಪಕ್ಷಕ್ಕೆ ಮುಜುಗರ ತರುವಂತೆ ಬಹಿರಂಗ ಹೇಳಿಕೆಗಳನ್ನು ಕೊಡದಂತೆ ಪದಾಧಿಕಾರಿಗಳಿಗೆ ಸೂಚ್ಯವಾಗಿ ಹೇಳಿದ್ದು.ಯತ್ನಾಳ್ ಹೇಳಿಕೆ ಬಗ್ಗೆ ಹೈಕಮಾಂಡ್ ನೋಡಿಕೊಳ್ಳಲಿದೆ‌ ಹೇಳಿದರು.

ಇದನ್ನೂ ಓದಿ: ಬಾಯಿಗೆ ಬಂದಂತೆ ಮಾತಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ತಾಕತ್ ಇಲ್ಲ: ಸ್ವಪಕ್ಷದ ನಾಯಕರ ನಡೆಗೆ ಡಿವಿಎಸ್ ಬೇಸರ

2024ರ ಲೋಕಸಭಾ ಚುನಾವಣೆವರೆಗೂ ಯಾವೊಬ್ಬ ಪದಾಧಿಕಾರಿಗಳೂ ವಿಶ್ರಮಿಸುವಂತಿಲ್ಲ. ಪದಾಧಿಕಾರಿಗಳ ವರ್ತನೆ ಸೂಕ್ತವಾಗಿರಬೇಕು. ಹಿರಿಯರು, ಬೂತ್ ಕಾರ್ಯಕರ್ತರು, ವರಿಷ್ಠರನ್ನು ಸಮಾನವಾಗಿ ನೋಡಿಕೊಳ್ಳಬೇಕು. ಎಲ್ಲರನ್ನೂ ಒಂದೇ ರೀತಿಯ ವಿಶ್ವಾಸದಿಂದ ನೋಡಬೇಕು. ಹಾಗೇ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಬೇಕು ಎಂದು ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೂಚನೆಗಳನ್ನು ನೀಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ