AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್ ಅವಧಿ ವಿಸ್ತರಣೆ, ಗೃಹ ಬಳಕೆ ನೀರಿನ ದರ ಹೆಚ್ಚಳ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. 2024ರ ಜೂನ್ 30ರವರೆಗೆ ಒನ್ ಟೈಂ ಸೆಟಲ್‌ಮೆಂಟ್ ಅವಧಿ ವಿಸ್ತರಣೆ ಮಾಡಲಾಗಿದೆ.

ಬಿಬಿಎಂಪಿ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್ ಅವಧಿ ವಿಸ್ತರಣೆ, ಗೃಹ ಬಳಕೆ ನೀರಿನ ದರ ಹೆಚ್ಚಳ
ಬಿಬಿಎಂಪಿ
ಕಿರಣ್​ ಹನಿಯಡ್ಕ
| Edited By: |

Updated on: Dec 21, 2023 | 9:58 PM

Share

ಬೆಂಗಳೂರು, ಡಿಸೆಂಬರ್​ 21: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಾಕಿ ತೆರಿಗೆ ಸಂಗ್ರಹಕ್ಕೆ ಒನ್ ಟೈಂ ಸೆಟಲ್‌ಮೆಂಟ್​ ಅವಧಿ ವಿಸ್ತರಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ (HK Patil), 2024ರ ಜೂನ್ 30ರವರೆಗೆ ಒನ್ ಟೈಂ ಸೆಟಲ್‌ಮೆಂಟ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ನೀರಿನ ಕರ ದರ ಇನ್ನು ಮುಂದೆ ವಾರ್ಷಿಕ ಹಣದುಬ್ಬರ ಸೂಚ್ಯಂಕಕ್ಕೆ ಸಂವಾದಿಯಾಗಿ ಹೆಚ್ಚಳ ಮಾಡುವ ಷರತ್ತಿನೊಂದಿಗೆ ನೀರಿನ ಕರ ವಿಧಿಸುವಿಕೆ ನಿಯಮಕ್ಕೆ ತಿದ್ದುಪಡಿ ಮಾಡಲಾಗಿದೆ. ಪ್ರತಿ ಎಂಸಿಎಫ್​ಟಿ ನೀರಿಗೆ ಮೂರು ಲಕ್ಷ ರೂಪಾಯಿ ರಾಜಧನ ನಿಗದಿ ಮಾಡಲಾಗಿದೆ. ಈ ಹಿಂದೆ ಎಂಸಿಎಫ್​ಟಿಗೆ ಒಂದು ಲಕ್ಷ ರೂ. ಗೂ ಕಡಿಮೆ ರಾಜಧನ ನಿಗದಿಯಾಗಿತ್ತು.

ಇದನ್ನೂ ಓದಿ: 2024ರ ಫೆಬ್ರವರಿಯಲ್ಲಿ ವಿಧಾನಮಂಡಲ ಜಂಟಿ ಮತ್ತು ಬಜೆಟ್ ಅಧಿವೇಶನ: H​K ಪಾಟೀಲ್

ಕಾಲುವೆ, ಕೆರೆ, ಜಲಾಶಯಗಳಿಂದ ಒದಗಿಸುವ ನೀರಿಗೆ ಪ್ರತಿ‌ ಎಂಸಿ‌ಎಫ್​ಟಿ ಗೆ 3 ಲಕ್ಷ ರೂ. ರಾಜಧನ, ನೈಸರ್ಗಿಕ ಜಲಮಾರ್ಗ, ನದಿ, ಹಳ್ಳಗಳಿಂದ ಪ್ರತಿ ಎಸಿಎಫ್​ಟಿ ಗೆ 1.50 ಲಕ್ಷ ರೂ. ರಾಜಧನ ನಿಗದಿಗೊಳಿಸಲಾಗಿದೆ.

ಎಡಿಬಿ ಯೋಜನೆಯಡಿ ಮಂಗಳೂರು ನಗರದಲ್ಲಿ 24/7 ನೀರು ಸರಬರಾಜು ಕಾಮಗಾರಿಯಲ್ಲಿ ಹೊಸದಾಗಿ 125 ಎಂಎಲ್​ಡಿ ನೀರು ಶುದ್ದೀಕರಣ ಘಟಕ 127.70 ಕೋಟಿ‌ ರೂ. ವೆಚ್ಚದಲ್ಲಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

ಇದನ್ನೂ ಓದಿ: ಬುಡಕಟ್ಟು ಪಂಗಡಗಳ ಜನರಿಗೆ ಉಚಿತ ಪೌಷ್ಟಿಕ ಆಹಾರ, ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಇಲ್ಲಿವೆ

ಸರ್ಕಾರದ ಹಣ ಬೇರೆ ಬೇರೆ ಬ್ಯಾಂಕ್​ಗಳಲ್ಲಿ ಠೇವಣಿ ಇಟ್ಟಿರುವ ವಿಚಾರವಾಗಿ ಮಾತನಾಡಿದ್ದು, ಠೇವಣಿ ಹಣ ಗುರುತಿಸಿ ವಾಪಸ್ ತರಲು ಸಂಪುಟ ಉಪಸಮಿತಿ ರಚನೆ ಮಾಡಲಾಗಿದೆ. ಕೋಟ್ಯಂತರ ಹಣ ಅಧಿಕಾರಿಗಳು ದುರುಪಯೋಗ ಮಾಡಿರುವ ಮಾಹಿತಿ ಇದೆ. ಹಿಂದೆ 680 ಕೋಟಿ ರೂ.‌ ಇದೇ ರೀತಿ ಪತ್ತೆ ಹಚ್ಚಲಾಗಿತ್ತು. ಈಗ ಮತ್ತೆ ಅಂತಹ ಪ್ರಕರಣಗಳನ್ನು ತನಿಖೆ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Haniyadka
Kiran Haniyadka
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ