AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ ಈಶ್ವರಪ್ಪ ಅವಾಚ್ಯ ಪದ ಬಳಕೆ; ಸಿಡಿ, ದಿನಪತ್ರಿಕೆ ಸಹಿತ ಶಿವಮೊಗ್ಗ ಎಸ್​ಪಿಗೆ ದೂರು

KS Eshwarappa: ಈಶ್ವರಪ್ಪ ನವರು ಇಂತಹ ಮಾತು ಬಳಸಬಾರದು. ಅಧಿಕಾರದಲ್ಲಿ ಇರುವಾಗ ಮಾದರಿ ಆಗಬೇಕು. ಈಶ್ವರಪ್ಪ ತಮ್ಮ ನಡತೆ ಬದಲಿಸಿಕೊಳ್ಳಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸುತ್ತಾರೆ ಎಂದು ಕಾಗೋಡು ತಿಮ್ಮಪ್ಪ ಈಶ್ವರಪ್ಪಗೆ ಎಚ್ಚರಿಕೆ ನೀಡಿದ್ದಾರೆ.

ಕೆಎಸ್ ಈಶ್ವರಪ್ಪ ಅವಾಚ್ಯ ಪದ ಬಳಕೆ; ಸಿಡಿ, ದಿನಪತ್ರಿಕೆ ಸಹಿತ ಶಿವಮೊಗ್ಗ ಎಸ್​ಪಿಗೆ ದೂರು
ಸಚಿವ ಈಶ್ವರಪ್ಪ
TV9 Web
| Edited By: |

Updated on: Aug 11, 2021 | 3:21 PM

Share

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಮಾಜಿ ಶಾಸಲ ಪ್ರಸನ್ನ ಕುಮಾರ್, ಶಿವಮೊಗ್ಗ ಎಸ್‌ಪಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಹಿನ್ನೆಲೆಯಲ್ಲಿ, ಸಿಡಿ, ದೂರಿನ ಪ್ರತಿ, ದಿನಪತ್ರಿಕೆ ಸಹಿತ ಎಸ್‌ಪಿಗೆ ಕಾಂಗ್ರೆಸ್ ಶಾಸಕ ಪ್ರಸನ್ನ ಕುಮಾರ್ ದೂರು ನೀಡಿದ್ದಾರೆ. ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಅವರು ದೂರು ನೀಡಿದ್ದಾರೆ.

ಸಚಿವ ಕೆ.ಎಸ್. ಈಶ್ವರಪ್ಪ ಪ್ರಚೋದನಾಕಾರಿ, ಅಶ್ಲೀಲ ಪದ ಬಳಕೆ ಹಿನ್ನೆಲೆಯಲ್ಲಿ, ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಚೇರಿ ಬಳಿ ಕಾಂಗ್ರೆಸ್ ಧರಣಿ ನಡೆಸಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ.

ಈಶ್ವರಪ್ಪ ನವರು ಇಂತಹ ಮಾತು ಬಳಸಬಾರದು. ಅಧಿಕಾರದಲ್ಲಿ ಇರುವಾಗ ಮಾದರಿ ಆಗಬೇಕು. ಈಶ್ವರಪ್ಪ ತಮ್ಮ ನಡತೆ ಬದಲಿಸಿಕೊಳ್ಳಬೇಕು. ಇಲ್ಲದಿದ್ದರೆ ಪರಿಣಾಮ ಎದುರಿಸುತ್ತಾರೆ ಎಂದು ಕಾಗೋಡು ತಿಮ್ಮಪ್ಪ ಈಶ್ವರಪ್ಪಗೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ಮಾಡಲಿ ಬಿಡ್ರೀ ಬೇಡ ಅಂದವರು ಯಾರು ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ವಿಚಾರವಾಗಿ ಇಂದು (ಆಗಸ್ಟ್ 11) ಕೆಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾಗ್ಪುರದಲ್ಲಿ ಟ್ರೈನಿಂಗ್ ಪಡೆದಿದ್ದಕ್ಕೆ ಆ ಪದ ನನ್ನ ಬಾಯಲ್ಲಿ ಬರಬಾರದಿತ್ತು ಅಂತಾ ಹೇಳಿದ್ದೇನೆ. ಆದ್ರೆ ಹರಿಪ್ರಸಾದ್ ನನಗೆ ಜೋಕರ್ ಅಂದ್ರು, ಪ್ರಧಾನಿ ಮೋದಿಗೆ ಸುಲಭ ಶೌಚಾಲಯಕ್ಕಿಡಬೇಕು ಅಂದ್ರು, ಇದನ್ನು ಕಾಂಗ್ರೆಸ್​ನವರು ಒಪ್ಪುವುದಾದರೆ ಸರಿ. ಇಲ್ಲ ಅಂದ್ರೆ ಇಟಲಿ ಯೂನಿವರ್ಸಿಟಿಯಲ್ಲಿ ಅವರಿಗೆ ಕೊಟ್ಟ ಟ್ರೈನಿಂಗ್​ನಿಂದ ಕ್ಷಮೆ ಕೇಳಲ್ಲಾ ಅಂದುಕೊಳ್ತೀನಿ ಎಂದು ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್​ನವರು ಪ್ರತಿಭಟನೆ ಮಾಡಲಿ ಬಿಡ್ರೀ ಬೇಡ ಅಂದವರು ಯಾರು. ಕೆಟ್ಟ ಕನಸು ಬೀಳ್ತಿರುವುದು ಸಿದ್ದರಾಮಯ್ಯಗೆ, ನನಗೆ ಕನಸು ಬೀಳ್ತಿಲ್ಲ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ಆಗುವುದಕ್ಕೆ ಕಾಂಗ್ರೆಸ್, ಜೆಡಿಎಸ್​ನಿಂದ ಬಂದವರು ಕಾರಣ; ಅವರ ಋಣ ತೀರಿಸಬೇಕು: ಕೆಎಸ್ ಈಶ್ವರಪ್ಪ

ಸಚಿವ ಈಶ್ವರಪ್ಪ ಹರಕುಬಾಯಿ ದಾಸ, ನಾಗಪುರ ವಿವಿ ದ್ವೇಷ, ಅಸೂಯೆ ತುಂಬಿ ರಸ್ತೆಗೆ ಬಿಡುತ್ತಾರೆ: ಬಿ.ಕೆ.ಹರಿಪ್ರಸಾದ್

(Case Filed against KS Eshwarappa on Bad Word used on Congress Party Members)

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?