AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ: ಹೈಕಮಾಂಡ್ ಮೊರೆ ಹೋಗಲಿದ್ದಾರೆ ಕಾಂಗ್ರೆಸ್ ಲಿಂಗಾಯತ ನಾಯಕರು

ಹೈಕಮಾಂಡ್ ನಾಯಕರೇ ಜಾತಿಗಣತಿ ಬಗ್ಗೆ ಮರುಪರಿಶೀಲನೆಗೆ ಸರ್ಕಾರಕ್ಕೆ ಸೂಚಿಸುವಂತೆ ಒತ್ತಡ ಹಾಕುವುದು ಲಿಂಗಾಯತ ಮುಖಂಡರ ಯೋಜನೆಯಾಗಿದೆ. ಎರಡು ಬಾರಿ ಮುಖಾಮುಖಿಯಾದಾಗಲೂ ವೀರಶೈವ ಮಹಾಸಭಾ ಅಧ್ಯಕ್ಷರಿಗೆ ಸಿಎಂ ಯಾವುದೇ ಭರವಸೆ ನೀಡಿಲ್ಲ. ಇದು ಸಮುದಾಯದ ಮುಖಂಡರ ನಿರಾಸೆಗೆ ಕಾರಣವಾಗಿದೆ.

ಜಾತಿ ಗಣತಿ: ಹೈಕಮಾಂಡ್ ಮೊರೆ ಹೋಗಲಿದ್ದಾರೆ ಕಾಂಗ್ರೆಸ್ ಲಿಂಗಾಯತ ನಾಯಕರು
ಸಾಂದರ್ಭಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Jan 02, 2024 | 9:02 AM

Share

ಬೆಂಗಳೂರು, ಜನವರಿ 2: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ (Congress Government) ಜಾತಿ ಗಣತಿ (Caste Census) ಕಗ್ಗಂಟು ಮುಂದುವರಿದಿದ್ದು, ಈ ವಿಚಾರವಾಗಿ ಹೈಕಮಾಂಡ್ ಮೊರೆ ಹೋಗಲು ಕಾಂಗ್ರೆಸ್​​ನ ಲಿಂಗಾಯತ (Lingayat) ನಾಯಕರು ತೀರ್ಮಾನಿಸಿದ್ದಾರೆ. ಜಾತಿ ಜನಗಣತಿ ಮರು ಪರಿಶೀಲನೆಗೆ ಹೈಕಮಾಂಡ್ ಮೇಲೆ ಒತ್ತಡ ಹಾಕಲು ಪಕ್ಷದ ಲಿಂಗಾಯತ ನಾಯಕರು ನಿರ್ಧಾರ ಕೈಗೊಂಡಿದ್ದಾರೆ.

ಸದ್ಯ, ಜಾತಿ ಗಣತಿ ವಿಚಾರದಲ್ಲಿ ಲಿಂಗಾಯತ ನಾಯಕರ ಮನವಿಗೆ ಸ್ಪಂದನೆ ಸಿಗುತ್ತಿಲ್ಲ ಎಂಬ ಬೇಸರ ಸಮುದಾಯದ ನಾಯಕರಲ್ಲಿದೆ. ವೀರಶೈವ ಮಹಾಸಭಾ ನಿರ್ಣಯದ ಬಳಿಕವೂ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವಿಚಾರವಾಗಿ ಅವರಿಗೆ ಯಾವುದೇ ಉತ್ತರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ವೀರಶೈವ ಮಹಾಸಭಾ ನಿರ್ಣಯಗಳೊಂದಿಗೆ ದೆಹಲಿಗೆ ತೆರಳಲು ಲಿಂಗಾಯತ ನಾಯಕರು ಮುಂದಾಗಿದ್ದಾರೆ.

ಹೈಕಮಾಂಡ್ ನಾಯಕರೇ ಜಾತಿಗಣತಿ ಬಗ್ಗೆ ಮರುಪರಿಶೀಲನೆಗೆ ಸರ್ಕಾರಕ್ಕೆ ಸೂಚಿಸುವಂತೆ ಒತ್ತಡ ಹಾಕುವುದು ಲಿಂಗಾಯತ ಮುಖಂಡರ ಯೋಜನೆಯಾಗಿದೆ. ಎರಡು ಬಾರಿ ಮುಖಾಮುಖಿಯಾದಾಗಲೂ ವೀರಶೈವ ಮಹಾಸಭಾ ಅಧ್ಯಕ್ಷರಿಗೆ ಸಿಎಂ ಯಾವುದೇ ಭರವಸೆ ನೀಡಿಲ್ಲ. ಇದು ಸಮುದಾಯದ ಮುಖಂಡರ ನಿರಾಸೆಗೆ ಕಾರಣವಾಗಿದೆ.

ಪ್ರಸ್ತುತ ಜಾತಿ ಗಣತಿ ವರದಿಗೆ ವೀರಶೈವ ಮಹಾಸಭಾ ಮತ್ತು ಒಕ್ಕಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅಂತೂ ಬಹಿರಂಗವಾಗಿಯೇ ಹಲವು ಬಾರಿ ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ವರದಿಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ ಈಗಿನ ವರದಿ ಅವೈಜ್ಞಾನಿಕವಾಗಿದೆ. ಅದನ್ನು ಸರ್ಕಾರ ಅಂಗೀಕರಿಸಬಾರದು ಎಂದು ಅವರು ಹಲವು ಬಾರಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿ ಜಾರಿಗೆ ಒತ್ತಾಯಿಸಿ ಶೋಷಿತ ಸಮುದಾಯಗಳ ಸಮಾವೇಶಕ್ಕೆ ಮುಹೂರ್ತ ಫಿಕ್ಸ್, ಸಿಎಂಗೆ ಆಹ್ವಾನ

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಜಾತಿ ಗಣತಿ ವರದಿ ಜಾರಿಗೆ ಒತ್ತಾಯಿಸಿ ಅಹಿಂದ ವರ್ಗ ಸಿಡಿದೆದ್ದಿದ್ದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಮಾಡಲು ತೀರ್ಮಾನಿಸಿದೆ. ಜನವರಿ 28 ರಂದು ಸಮಾವೇಶಕ್ಕೆ ದಿನ ನಿಗದಿಪಡಿಸಲಾಗಿದೆ. ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ಈ ಎಲ್ಲ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ