AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Dispute: ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ: ಡಿಕೆ ಶಿವಕುಮಾರ್

ರೈತರ ಪ್ರತಿಭಟನೆಯ ನಡುವೆಯೂ ಕರ್ನಾಟಕ ಕಾಂಗ್ರೆಸ್ ಸರ್ಕಾರವು ತಮಿಳುನಾಡಿಗೆ ಹರಿಸುತ್ತಿರುವ ನೀರಿನ ಪ್ರಮಾಣವನ್ನು ಹೆಚ್ಚಿಸಿದೆ. ಈ ಬಗ್ಗೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಟೀಕೆಗಳನ್ನು ನಡೆಸುತ್ತಿದೆ. ಆದರೆ, ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Cauvery Dispute: ವಿಪಕ್ಷದವರು ಹೇಳಿದ ಪ್ರಕಾರ ನೀರು ನಿಲ್ಲಿಸಲು ಆಗುವುದಿಲ್ಲ: ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್Image Credit source: PTI
ಪ್ರಸನ್ನ ಗಾಂವ್ಕರ್​
| Edited By: |

Updated on: Sep 01, 2023 | 5:58 PM

Share

ಬೆಂಗಳೂರು, ಸೆ.1: ವಿಪಕ್ಷದವರು ಹೇಳಿದ ಪ್ರಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು ಆಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ. ಕಾನೂನು ತಜ್ಞರ ಜೊತೆಗೆ ನಾನು ಮಾತನಾಡಿದ್ದೇನೆ. ಈ ಬಾರಿ ಸರಿಯಾಗಿ ಮಳೆ ಇಲ್ಲ. ಕೇವಲ ಬೆಂಗಳೂರಿಗೆ ಮಳೆ ಬಂದಿದೆ. ಕಾವೇರಿ (Cauvery) ಬೇಸಿಸ್​ಗೆ ಮಳೆ ಬಂದಿಲ್ಲ. ಹೀಗಾಗಿ ವಾಸ್ತವಾಂಶದ ಬಗ್ಗೆ ಎರಡೂ ಕಮಿಟಿಗಳ ಮುಂದೆ ನಮ್ಮ ವಾದ ಮಂಡಿಸಲು ತೀರ್ಮಾನ ಮಾಡಿದ್ದೇವೆ ಎಂದರು.

ಕಾವೇರಿ ವಿಚಾರ ಸಂಬಂಧಿಸಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆ ನಡೆದಾಗ 24 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಬೇಕು ಅಂತ ಒತ್ತಾಯ ಮಾಡಿತ್ತು. ಅಷ್ಟು ನೀರು ಬಿಡಲು ಸಾಧ್ಯವಿಲ್ಲ ಅಂತ ವಾದ ಮಾಡಿದೆವು. ಹೀಗಾಗಿ 5 ಸಾವಿರ ಕ್ಯುಸೆಕ್ ಬಿಡಬೇಕು ಅಂಯ ಆದೇಶ ಮಾಡಿದರು. ನಾವು 3 ಸಾವಿರ ಕ್ಯುಸೆಕ್ ಬಿಡುತ್ತೇವೆ ಅಂತ ಹೇಳಿದ್ದಾಗಿ ತಿಳಿಸಿದರು.

ಈಗ ನಾವು ಮತ್ತೆ ಕರ್ನಾಟಕದ ಪರಿಸ್ಥಿತಿ ಸುಪ್ರಿಂ ಕೋರ್ಟ್​​​ಗೆ ಮನವರಿಕೆ ಮಾಡಿದ್ದೇವೆ. ನೀರು ಬಿಡಬೇಕಾಗಿದ್ದನ್ನು ಹಿಂದೆ ಬಿಟ್ಟಿದ್ದೇವೆ. ನಮ್ಮ ರೈತರನ್ನು ನಾವು ಕಾಪಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ವಿವಾದ; ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್​

ತಮಿಳುನಾಡಿನವರು ಬೆಳೆಗಳನ್ನು ನಿಯಂತ್ರಿಸುತ್ತಿಲ್ಲ. 93 ಟಿಎಂಸಿ ನೀರು ಈ ಬಾರಿ ತಮಿಳುನಾಡು ಬಳಸಿಕೊಂಡಿದೆ. ಹೆಚ್ಚೆಚ್ಚು ನೀರನ್ನು ತಮಿಳುನಾಡು ಬಳಸಿಕೊಂಡಿದೆ. ಸಂಕಷ್ಟ ಸಮಯದಲ್ಲಿ ಎಷ್ಟು ಕಡಿಮೆ ಬಳಸಿಕೊಳ್ಳಬೇಕಿತ್ತೋ ಅದಕ್ಕಿಂತ ಹೆಚ್ಚು ಬಳಸಿಕೊಂಡಿದ್ದಾರೆ. ಈ ಅಂಶವನ್ನು ನಾವು ಸುಪ್ರಿಂಗೆ ಮನವರಿಕೆ ಮಾಡಿದ್ದೇವೆ. ವಾಸ್ತವಾಂಶ ಬಂದು ನೋಡಿ ಅಂತ ನಾವು ಮನವಿ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ತೂಕಕ್ಕೆ ತಕ್ಕಂತೆ ಬಿಎಲ್ ಸಂತೋಷ್ ಮಾತನಾಡಲಿ: ಡಿಕೆ ಶಿವಕುಮಾರ್

ಕಾವೇರಿ ವಿಚಾರದಲ್ಲಿ ಯಾಕೆ ನಾವು ರಾಜಕೀಯ ತರಬೇಕು? ಬಿಜೆಪಿ ಜೆಡಿಎಸ್ ರಾಜಕೀಯ ನಿಲುವಿಗೆ ನಾನು ಯಾಕೆ ಮಧ್ಯಪ್ರವೇಶ ಮಾಡಲಿ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಎಲ್ ಸಂತೋಷ್ ರಾಷ್ಟ್ರೀಯ ನಾಯಕರು ಅಂತ ಭಾವಿಸಿದ್ದೇನೆ. ಸಿಟಿ ರವಿ, ಕೆಎಸ್ ಈಶ್ವರಪ್ಪ ಅವರಂತೆ ಮಾತನಾಡಿದರೆ ನಾನು ಏನೂ ಮಾಡಲು ಆಗುವುದಿಲ್ಲ. ಅವರಂತೆ ಸಂತೋಷ್ ಮಾತನಾಡುವುದು ಬೇಡ. ಸ್ಟೇಟಸ್ ಹಾಳಾಗುವುದು ಬೇಡ. ಅವರ ತೂಕಕ್ಕೆ ತಕ್ಕಂತೆ ಮಾತನಾಡಲಿ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ