AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ನೀರು ವಿವಾದ: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಹೇಳಿದ್ದಿಷ್ಟು

ಮಳೆ ಕಡಿಮೆ ಆದಾಗ ಕಾವೇರಿ ನದಿ ನೀರು ವಿವಾದ ಸದ್ದು ಮಾಡುತ್ತೆ. ಕರ್ನಾಟಕದ ನಿರ್ಧಾರವನ್ನು ನಾನು ಸಮರ್ಥನೆ ಮಾಡುತ್ತೇನೆ. ಆದರೆ 4 ರಾಜ್ಯಗಳ ಸಿಎಂಗಳು ಸೇರಿ ಸಮಸ್ಯೆ ಬಗ್ಗೆ ಸಮಾಲೋಚಿಸಬೇಕು. ಸಂಕಷ್ಟ ಸೂತ್ರದಡಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್​​.ಎಂ.ಕೃಷ್ಣ ಹೇಳಿದ್ದಾರೆ.

ಕಾವೇರಿ ನದಿ ನೀರು ವಿವಾದ: ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಹೇಳಿದ್ದಿಷ್ಟು
ಮಾಜಿ ಮುಖ್ಯಮಂತ್ರಿ ಎಸ್​​.ಎಂ.ಕೃಷ್ಣ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 01, 2023 | 2:59 PM

Share

ಬೆಂಗಳೂರು, ಅಕ್ಟೋಬರ್​ 01: ಮಳೆ ಕಡಿಮೆ ಆದಾಗ ಕಾವೇರಿ ನದಿ ನೀರು ವಿವಾದ ಸದ್ದು ಮಾಡುತ್ತೆ. ಕರ್ನಾಟಕದ ನಿರ್ಧಾರವನ್ನು ನಾನು ಸಮರ್ಥನೆ ಮಾಡುತ್ತೇನೆ. ಆದರೆ 4 ರಾಜ್ಯಗಳ ಸಿಎಂಗಳು ಸೇರಿ ಸಮಸ್ಯೆ ಬಗ್ಗೆ ಸಮಾಲೋಚಿಸಬೇಕು. ಸಂಕಷ್ಟ ಸೂತ್ರದಡಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಸ್​​.ಎಂ.ಕೃಷ್ಣ (SM Krishna) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗಲೂ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ.

ಅಂದು ವಾಜಪೇಯಿ ಸಿಎಂಗಳ ಸಭೆ ಕರೆದು ಸಂಧಾನಕ್ಕೆ ಯತ್ನಿಸಿದ್ದರು. ಆದರೆ ಅಂದಿನ ಪ್ರಧಾನಿ ವಾಜಪೇಯಿ ಕರೆದಿದ್ದ ಸಭೆ ಸಫಲವಾಗಲಿಲ್ಲ. ಅಂತಿಮವಾಗಿ ಅಂದು ಸುಪ್ರೀಂಕೋರ್ಟ್​ ಮೆಟ್ಟಿಲೇರಬೇಕಾಯಿತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಜತೆ ಜೆಡಿಎಸ್​ ಮೈತ್ರಿಗೆ ಬಹುಪರಾಕ್, ತಮ್ಮದೇ ಮುಸ್ಲಿಂ ನಾಯಕರಿಗೆ ಟಾಂಗ್ ಕೊಟ್ಟ ಫಾರೂಕ್

ನಮ್ಮ ಜನ ಸ್ವಯಂಪ್ರೇರಿತರಾಗಿ ತಮ್ಮ ನಿಲುವು ವ್ಯಕ್ತಪಡಿಸುತ್ತಿದ್ದಾರೆ. ನ್ಯಾ.ರವೀಂದ್ರ ಸಲಹೆ ಪಡೆಯುತ್ತಿರುವುದು ಉತ್ತಮ ನಿರ್ಧಾರ. ವಿವಾದ ಬಗೆಹರಿಸಲು ಸಂಕಷ್ಟ ಸೂತ್ರದಡಿ ಚರ್ಚೆ ಆಗಬೇಕು ಎಂದಿದ್ದಾರೆ.

ನನ್ನ ನಿಲುವು ಅಪ್ರಸ್ತುತ ಎಂದ ಎಸ್​​.ಎಂ.ಕೃಷ್ಣ

ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ನಾನು ರಾಜಕಾರಣದಲ್ಲಿ ಇಲ್ಲ. ಈ ಸಂದರ್ಭದಲ್ಲಿ ನನ್ನ ನಿಲುವು ಅಪ್ರಸ್ತುತ ಎಂದು ಹೇಳಿದ್ದಾರೆ.

ಎಸ್​​.ಎಂ.ಕೃಷ್ಣರನ್ನು ಹಾಡಿಹೊಗಳಿದ ಡಿಸಿಎಂ ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್​​ ಮಾತನಾಡಿ, ಕೃಷ್ಣ ಅವರ ಒಡನಾಟ 35 ವರ್ಷಗಳದ್ದು. ಅವರು ಕಷ್ಟದ ಕಾಲದಲ್ಲಿ ಅಧಿಕಾರ ಹಿಡಿದರು. ಬರ, ಕಾವೇರಿ ವಿವಾದ, ರಾಜ್ ಕುಮಾರ್ ಘಟನೆ ಮತ್ತು ಆರ್ಥಿಕ ಸಂಕಷ್ಟ. ಇದೆಲ್ಲವನ್ನೂ ಮೆಟ್ಟಿ ನಿಂತು ಕೃಷ್ಣ ಅವರ ಕಾಲ ಅಂತ ಹೆಸರು ಮಾಡಿದರು. ಕೃಷ್ಣ ಅವರ ಕಾಲದಲ್ಲಿ ‌ಇದ್ದ ಬಜೆಟ್ 34 ಸಾವಿರ ಕೋಟಿ ರೂ. ಹೆಚ್ಚಳ ಮಾಡಿದರು. ಈಗ 3.5 ಲಕ್ಷ ಕೋಟಿ ರೂ. ಇದೆ. ಕೃಷ್ಣ ಅವರು ಬೆಂಗಳೂರನ್ನು ಇಂಟರ್ ನ್ಯಾಷನಲ್ ಮಾರ್ಕೆಟ್ ಮಾಡಿದರು. ವಿಕಾಸಸೌಧ, ಉದ್ಯೋಗ ಸೌಧ ಮಾಡಿದ್ದು ಕೃಷ್ಣ ಅವರು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ