AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಬಗ್ಗೆ ಆಗಲೇ ಭವಿಷ್ಯ ನುಡಿದಿದ್ದರು ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ

Astrologer Venu Swamy: ಆಂಧ್ರ-ತೆಲಂಗಾಣದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಡಿ.ಕೆ.ಶಿವಕುಮಾರ್ ಅವರೊಟ್ಟಿಗಿನ ವಿಡಿಯೋ ಒಂದನ್ನು ಹಂಚಿಕೊಂಡು, ಡಿಕೆಶಿ ಬಗ್ಗೆ ಮಾತೊಂದು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಬಗ್ಗೆ ಆಗಲೇ ಭವಿಷ್ಯ ನುಡಿದಿದ್ದರು ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ
ಡಿಕೆಶಿ-ವೇಣು ಸ್ವಾಮಿ
ಮಂಜುನಾಥ ಸಿ.
|

Updated on: May 16, 2023 | 9:22 PM

Share

ವೇಣುಸ್ವಾಮಿ (Venu Swamy), ತೆಲುಗು ಚಿತ್ರರಂಗ ಹಾಗೂ ರಾಜಕೀಯ ರಂಗದ ಸೆಲೆಬ್ರಿಟಿ ಜ್ಯೋತಿಷಿ (celebrity astrologer). ತೆಲುಗು ಚಿತ್ರರಂಗ ಹಾಗೂ ರಾಜಕೀಯ ರಂಗದೊಟ್ಟಿಗೆ ಸುಮಾರು ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಸಂಪರ್ಕದಲ್ಲಿರುವ ವೇಣುಸ್ವಾಮಿಯನ್ನು ಹಲವು ಸಿನಿಮಾ ತಾರೆಯರು, ರಾಜಕಾರಣಿಗಳು ನಂಬುತ್ತಾರೆ. ಹಲವು ಸಿನಿಮಾ ನಟರ ಜಾತಕವನ್ನು ವಿಶ್ಲೇಷಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುತ್ತಾರೆ ವೇಣುಸ್ವಾಮಿ, ಬಹುತೇಕ ಸಂದರ್ಭಗಳಲ್ಲಿ ಅವರ ಭವಿಷ್ಯ ನಿಜವಾಗಿದೆ. ರಶ್ಮಿಕಾ ಮಂದಣ್ಣ ಸ್ಟಾರ್ ಆಗುವ ಮುನ್ನ ವಿಶೇಷ ಪೂಜೆ ಮಾಡಿಸಿದ್ದು ಇವರ ಬಳಿಯೇ. ಈಗ ಇದೇ ವೇಣುಸ್ವಾಮಿ ಡಿಕೆ.ಶಿವಕುಮಾರ್ (DK Shivakumar) ಜೊತೆಗಿನ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ ಬಹಳ ಹಿಂದೆಯೇ ಡಿಕೆಶಿ ಬಗ್ಗೆ ಮಾತೊಂದನ್ನು ಆಡಿದ್ದಾರೆ. ಅದು ಈಗ ನಿಜವಾಗಿದೆ.

ಡಿಕೆ ಶಿವಕುಮಾರ್ ಅವರೊಟ್ಟಿಗೆ ಸೆಲ್ಫಿ ವಿಡಿಯೋ ಮಾಡಿರುವ ವೇಣುಸ್ವಾಮಿ, ”ಡಿಕೆ ಶಿವಕುಮಾರ್ ಅವರು ಕರ್ನಾಟಕದಲ್ಲಿ ಸರ್ಕಾರ ತರಲು ಪೂರ್ಣಶಕ್ತಿ ತೊಡಗಿಸಿ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ಕಿಂಗ್ ಮೇಕರ್ ಡಿಕೆ ಶಿವಕುಮಾರ್” ಎಂದಿದ್ದಾರೆ. ವಿಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಸಹ ಇದ್ದಾರೆ. ಈ ಕೆಲವೇ ಸೆಕೆಂಡ್​ಗಳ ವಿಡಿಯೋವನ್ನು ವೇಣು ಸ್ವಾಮಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೇಣುಸ್ವಾಮಿ ಹಂಚಿಕೊಂಡಿರುವುದು ಹಳೆಯ ವಿಡಿಯೋ ಆಗಿದೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅವಧಿಯ ವಿಡಿಯೋ ಇದಾಗಿದೆ ಎಂಬುದನ್ನು ಅವರ ಮುಖ ಚಹರೆ ನೋಡಿ ಊಹಿಸಬಹುದಾಗಿದೆ. ಆದರೆ ಅಂದು ವೇಣುಸ್ವಾಮಿ ನುಡಿದಿದ್ದ ಭವಿಷ್ಯ ಈಗ ನಿಜವಾಗಿದೆ. ಆದರೆ ವಿಡಿಯೋನಲ್ಲಿ ವೇಣುಸ್ವಾಮಿ, ಡಿಕೆಶಿಯನ್ನು ಕಿಂಗ್ ಎಂದಿಲ್ಲ, ಬದಲಗೆ ಕಿಂಗ್ ಮೇಕರ್ ಎಂದಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗುವುದಿಲ್ಲವೇ ಎಂಬ ಅನುಮಾನ ಮೂಡಿಸುತ್ತಿದೆ ವೇಣುಸ್ವಾಮಿಯ ಆ ಕೊನೆಯ ಕೆಲ ಪದಗಳು.

ಡಿಕೆ.ಶಿವಕುಮಾರ್ ಅವರೊಟ್ಟಿಗಿನ ವಿಡಿಯೋ ಮಾತ್ರವೇ ಅಲ್ಲದೆ ಕೆಲವು ಹಳೆಯ ಫೋಟೊಗಳನ್ನು ಸಹ ವೇಣುಸ್ವಾಮಿ ಹಂಚಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ ಆರಾಮ ಕುರ್ಚಿಯಲ್ಲಿ ಕುಳಿತು ಮಾತನಾಡುತ್ತಿರುವ ಚಿತ್ರ, ಅವರೊಟ್ಟಿಗೆ ವಾಕಿಂಗ್ ಮಾಡುತ್ತಿರುವ ಚಿತ್ರಗಳನ್ನು ವೇಣುಸ್ವಾಮಿ ಶೇರ್ ಮಾಡಿದ್ದಾರೆ. ಇದರ ಜೊತೆಗೆ ರಾಹುಲ್ ಗಾಂಧಿ ತಲೆ ಮೇಲೆ ಅಕ್ಷತೆ ಹಾಕುತ್ತಿರುವ ಫೋಟೊವನ್ನು ಸಹ ವೇಣುಸ್ವಾಮಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನ; ಪಟ್ಟುಬಿಡದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರು ಹೇಳೋದೇನು ನೋಡಿ

ವೇಣುಸ್ವಾಮಿ, ತೆಲುಗಿನ ಜನಪ್ರಿಯ ಜ್ಯೋತಿಷಿಗಳಲ್ಲಿ ಒಬ್ಬರು. ಸಾಮಾಜಿಕ ಜಾಲತಾಣದಲ್ಲಿ ಬಹಳ ಮಂದಿ ಫಾಲೋವರ್​ಗಳು ವೇಣುಸ್ವಾಮಿಗೆ ಇದ್ದಾರೆ. ಬಹಳ ಸಣ್ಣ ವಯಸ್ಸಿನಿಂದಲೂ ಪೂಜೆ, ಪುನಸ್ಕಾರಗಳಲ್ಲಿ ತೊಡಗಿಕೊಂಡಿರುವ ವೇಣುಸ್ವಾಮಿ ಬಹಳ ಹಿಂದೆಯೇ ಸಿನಿಮಾ ಮುಹೂರ್ತಗಳಲ್ಲಿ ಪೂಜೆಗಳನ್ನು ಮಾಡುತ್ತಿದ್ದವರು. ಮಹೇಶ್ ಬಾಬು ತಂದೆ ಕೃಷ್ಣ, ಸೀನಿಯರ್ ಎನ್​ಟಿಆರ್, ಚಿರಂಜೀವಿಯವರ ಆರಂಭದ ಸಿನಿಮಾಗಳ ಮುಹೂರ್ತ ಪೂಜೆಗಳನ್ನು ವೇಣುಸ್ವಾಮಿ ಮಾಡಿದ್ದಾರೆ. ಆ ಅಪರೂಪದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ, ಸರ್ಕಾರದ ದೊಡ್ಡ ಕಾಮಗಾರಿಗಳ ಶಂಕುಸ್ಥಾಪನೆ ಪೂಜೆಯನ್ನು ವೇಣುಸ್ವಾಮಿ ಮಾಡಿದ್ದಾರೆ. ಅವುಗಳ ಚಿತ್ರಗಳೂ ಸಹ ವೇಣುಸ್ವಾಮಿಯ ಇನ್​ಸ್ಟಾಗ್ರಾಂ ಖಾತೆಯಲ್ಲಿವೆ.

ರಾಜಮೌಳಿ ಚಿತ್ರರಂಗದಲ್ಲಿ ದೊಡ್ಡ ಹಂತಕ್ಕೆ ಬೆಳೆಯುವ ಬಗ್ಗೆ, ಸಮಂತಾ ಹಾಗೂ ನಾಗ ಚೈತನ್ಯ ವಿಚ್ಛೇದನದ ಬಗ್ಗೆ, ಜೂ ಎನ್​ಟಿಆರ್ ದೊಡ್ಡ ಸ್ಟಾರ್ ಆಗುವ ಬಗ್ಗೆ ಇನ್ನೂ ಕೆಲವರ ಬಗ್ಗೆ ವೇಣುಸ್ವಾಮಿ ಭವಿಷ್ಯ ನುಡಿದಿದ್ದಾರೆ. ಆ ವಿಡಿಯೋಗಳನ್ನು ಯೂಟ್ಯೂಬ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಬಗ್ಗೆಯೂ ವೇಣುಸ್ವಾಮಿ ಭವಿಷ್ಯ ನುಡಿದಿದ್ದು, ಡಿಕೆ ಶಿವಕುಮಾರ್ ಕಿಂಗ್ ಆಗುತ್ತಾರೋ ಕಿಂಗ್ ಮೇಕರ್ ಆಗುತ್ತಾರೋ ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!