AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ಫೆಬ್ರವರಿ 27 ರಂದು ಅರುಣಾಚಲ ಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ

ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ
ಬಿಜೆಪಿ
ರಶ್ಮಿ ಕಲ್ಲಕಟ್ಟ
|

Updated on: Feb 02, 2023 | 1:11 PM

Share

ದೆಹಲಿ: ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು (CEC) ಪಶ್ಚಿಮ ಬಂಗಾಳ (West Bengal) ಮತ್ತು ಅರುಣಾಚಲ ಪ್ರದೇಶದಲ್ಲಿ (Arunachal Pradesh) ನಡೆಯಲಿರುವ ಮುಂಬರುವ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಅರುಣಾಚಲ ಪ್ರದೇಶದ ಲುಮ್ಲಾ (ಎಸ್‌ಟಿ) ಕ್ಷೇತ್ರದಿಂದ ತ್ಸೆರಿಂಗ್ ಲಾಮು ಮತ್ತು ಪಶ್ಚಿಮ ಬಂಗಾಳದ ಸಾಗರ್ದಿಘಿ ಕ್ಷೇತ್ರದಿಂದ ದಿಲೀಪ್ ಸಹಾ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ. ಜನವರಿಯಲ್ಲಿ ಚುನಾವಣಾ ಆಯೋಗವು ಐದು ರಾಜ್ಯಗಳ ಆರು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಫೆಬ್ರವರಿ 27 ರಂದು ಅರುಣಾಚಲ ಪ್ರದೇಶ, ಜಾರ್ಖಂಡ್, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಲಕ್ಷದ್ವೀಪದ ಸಂಸದೀಯ ಕ್ಷೇತ್ರದಲ್ಲಿ ಫೆಬ್ರವರಿ 27 ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ.

ಎಲ್ಲಾ ಉಪಚುನಾವಣೆಗಳ ಮತ ಎಣಿಕೆ ಮಾರ್ಚ್ 2 ರಂದು ನಡೆಯಲಿದೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮೊಹಮ್ಮದ್ ಫೈಜಲ್ ಪಿಪಿ ಅನರ್ಹಗೊಂಡ ಕಾರಣ ಲಕ್ಷದ್ವೀಪ್‌ನ ಸಂಸದೀಯ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಅರುಣಾಚಲ ಪ್ರದೇಶದ ಲುಮ್ಲಾದಲ್ಲಿ ಬಿಜೆಪಿ ನಾಯಕ ಜಂಬೆ ತಾಶಿ ನಿಧನದ ನಂತರ ಸ್ಥಾನ ತೆರವಾಗಿತ್ತು. ಜಾರ್ಖಂಡ್‌ನ ರಾಮಗಢದಲ್ಲಿ ಕಾಂಗ್ರೆಸ್ ನಾಯಕಿ ಮಮತಾ ದೇವಿ ಅವರನ್ನು ಅನರ್ಹಗೊಳಿಸಿದ್ದರಿಂದ ಚುನಾವಣೆ ಅಗತ್ಯವಾಗಿತ್ತು.

ಇದನ್ನೂ ಓದಿ: ಯಾರಾದರು ತಲೆಬಾಗಿ ನಮಸ್ಕಾರ ಮಾಡಿದರೆ ನನಗೆ ಭಯವಾಗುತ್ತದೆ: ಗಾಂಧಿ ಹತ್ಯೆ ನೆನೆದ ಮಾಜಿ ಸ್ಪೀಕರ್ ಕೆ.ಆರ್.ರಮೇಶ್

ತಮಿಳುನಾಡಿನ ಈರೋಡ್ (ಪೂರ್ವ)ದ ಕಾಂಗ್ರೆಸ್ ನಾಯಕ ತಿರು ಇ ತಿರುಮಹನ್ ಎವೆರಾ ಅವರ ನಿಧನದ ನಂತರ ಮತ್ತು ಪಶ್ಚಿಮ ಬಂಗಾಳದ ಸಾಗರ್ದಿಘಿ ಸ್ಥಾನವು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಸುಬ್ರತಾ ಸಹಾ ಅವರ ನಿಧನದ ನಂತರ ತೆರವಾದ ನಂತರ ಈ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದೆ.  ಬಿಜೆಪಿ ನಾಯಕರಾದ ಮುಕ್ತಾ ಶೈಲೇಶ್ ತಿಲಕ್ ಮತ್ತು ಲಕ್ಷ್ಮಣ್ ಪಾಂಡುರಂಗ್ ಜಗತಾಪ್ ಅವರ ನಿಧನದಿಂದಾಗಿ ಮಹಾರಾಷ್ಟ್ರದ ಕಸ್ಬಾ ಪೇಠ್ ಮತ್ತು ಚಿಂಚ್‌ವಾಡ್‌ನಲ್ಲಿ ಚುನಾವಣೆ ನಡೆಯಲಿದೆ.

ಫೆಬ್ರವರಿ 7 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಫೆಬ್ರವರಿ 8 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಫೆಬ್ರವರಿ 10 ಕೊನೆಯ ದಿನ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ