AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆಗಾಗಿ ನಾನು ಪ್ರಯತ್ನ ಮಾಡುತ್ತೇನೆ: ಕುಮಾರಸ್ವಾಮಿ

ಈ ಬಾರಿಯ ಬಜೆಟ್​​ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ನೀಡಿಲ್ಲ, ಅನ್ಯಾಯ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್​ ನಾಯಕರು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಆರೋಪವನ್ನು ತಳ್ಳಿಹಾಕಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದ್ದರು.

ಮೇಕೆದಾಟು ಯೋಜನೆಗಾಗಿ ನಾನು ಪ್ರಯತ್ನ ಮಾಡುತ್ತೇನೆ: ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Jul 28, 2024 | 1:02 PM

Share

ಮೈಸೂರು, ಜುಲೈ 28: ಮೇಕೆದಾಟು ಯೋಜನೆಗಾಗಿ ನಾನು ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಮಾಡೋಕೆ ಆಗುತ್ತಾ? ಕರ್ನಾಟಕದ ನಾಲ್ಕು ಜಲಾಶಯಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ. ಕರ್ನಾಟಕದವರೇ ಕಟ್ಟಿರುವುದು. ಕಾವೇರಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಜತೆ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ಮಾಡಿದರು. ಈಗ ರಾಜ್ಯದಲ್ಲಿ ಮಳೆಯಾಗಿದ್ದರಿಂದ ಹೆಚ್ಚು ನೀರು ಹೋಗುತ್ತಿದೆ. ಈ ವಿಚಾರಕ್ಕೆ ಟೆಕ್ನಿಕಲ್ ಆಗಿ ಚರ್ಚೆ ಮಾಡಿದರೆ ಒಳ್ಳೆಯದು ಎಂದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ (Union Government) ಬಜೆಟ್​ನಲ್ಲಿ (Budget) ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ಕೊಡುಗೆ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ (Congress)​ ನಾಯಕರು ಈ ನಡವಳಿಕೆ ಬದಲಾವಣೆ ಮಾಡಿಕೊಳ್ಳಲಿ. ಮೊದಲು ನಿಮ್ಮ ಸಣ್ಣತನ ಬಿಟ್ಟುಬಿಡಿ. ಕೇಂದ್ರದ ವಿರುದ್ಧ ಸುಮ್ಮನೇ ಆರೋಪ ಮಾಡ್ತಾ ತಿರುಗಾಡುತ್ತಿದ್ದೀರಿ, ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಟಾಂಗ್​ ಕೊಟ್ಟರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ಹಣ ಘೋಷಿಸಿದೆ. ಅನುದಾನ ಕೊಟ್ಟಿಲ್ಲ ಅಂತ ಕಾಂಗ್ರೆಸ್​ನವರು ಆರೋಪಿಸುತ್ತಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗುತ್ತಿಲ್ಲ. ರಾಜ್ಯವೇ ಅನ್ಯಾಯ ಮಾಡಿಕೊಳ್ಳುತ್ತಿದೆ. ಕೇವಲ ಬೈದಾಡಿಕೊಂಡು ತಿರುಗಾಡುವುದರಿಂದ ಪ್ರಯೋಜನವಾಗಲ್ಲ. ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಪಾಲಿನ ಹಣ ಮೀಸಲಿಡಬೇಕು. ಆಗ ಮಾತ್ರ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆ ಮಾಡುತ್ತೆ. ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಪಾಲಿನ ಹಣ ಮೀಸಲಿಡದೆ, ಕೇಂದ್ರದ ವಿರುದ್ಧ ವಿನಾಕಾರಣ ಆರೋಪ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಯೋಜನೆಗಳಲ್ಲಿ ಏನೇನು ಅಕ್ರಮವಾಗಿದೆ ಅಂತಾ ಸಿಎಜಿ ವರದಿಯನ್ನು ನಾನು ನೋಡಿದ್ದೇನೆ. ರಾಜ್ಯ ಸರ್ಕಾರದವರು ಅಭಿವೃದ್ಧಿ ಯೋಜನೆಗಳಿಗೆ ದುಡ್ಡು ಎಲ್ಲಿಟ್ಟಿದ್ದೀರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಂಸತ್​​ ನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ; ಪ್ರಲ್ಹಾದ ಜೋಶಿ ಕಿಡಿ

ಆಂಧ್ರಪ್ರದೇಶ ವಿಭಜನೆಯಾದ ಬಳಿಕ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡಲಾಗುತ್ತಿದೆ. ಆಂಧ್ರದ ಪೋಲಾವರಂ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ‌. ಬಿಹಾರದಲ್ಲಿ ಮಳೆಗಾಲದಲ್ಲಿ ನೆರೆಯಿಂದ ಉಂಟಾಗುತ್ತಿರುವ ಹಾನಿ ತಡೆಯುವ ಸಲುವಾಗಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಈ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಬಜೆಟ್​ನಲ್ಲಿ ನಮ್ಮ ರಾಜ್ಯಕ್ಕೆ ವಿಶೇಷ ಆದ್ಯತೆ ನೀಡುವಂತೆ ಮನವಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು ಎಂದು ತಿಳಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಭೀಕರ ಪ್ರವಾಹ ಬಂತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತು‌. ಸ್ವತಃ ಪ್ರಧಾನಿಯವರೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದರು. ಅಂತಹ ವಾತಾವರಣವನ್ನು ನೀವೇಕೆ ಸೃಷ್ಟಿಸಿಕೊಂಡಿಲ್ಲ? ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಏಕೆ ದೂರುತ್ತೀರಿ? ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ? ಹಾಗಾದರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಶಾಸಕ ಜಿ ಡಿ ಹರೀಶ್ ಗೌಡ, ಎಂಎಲ್​ಸಿಗಳಾದ ಸಿ ಎನ್ ಮಂಜೇಗೌಡ, ವಿವೇಕಾನಂದ, ಮಾಜಿ ಸಚಿವ ಸಾ ರಾ ಮಹೇಶ್, ಮಾಜಿ ಶಾಸಕರಾದ ಕೆ ಮಹದೇವ್, ಅಶ್ವಿನ್ ಕುಮಾರ್ ಭಾಗಿಯಾಗಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:39 pm, Sun, 28 July 24

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್