AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆಗಾಗಿ ನಾನು ಪ್ರಯತ್ನ ಮಾಡುತ್ತೇನೆ: ಕುಮಾರಸ್ವಾಮಿ

ಈ ಬಾರಿಯ ಬಜೆಟ್​​ನಲ್ಲಿ ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ನೀಡಿಲ್ಲ, ಅನ್ಯಾಯ ಮಾಡಿದೆ ಎಂದು ರಾಜ್ಯ ಕಾಂಗ್ರೆಸ್​ ನಾಯಕರು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಆರೋಪವನ್ನು ತಳ್ಳಿಹಾಕಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ಮಾಡಿದ್ದರು.

ಮೇಕೆದಾಟು ಯೋಜನೆಗಾಗಿ ನಾನು ಪ್ರಯತ್ನ ಮಾಡುತ್ತೇನೆ: ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on:Jul 28, 2024 | 1:02 PM

Share

ಮೈಸೂರು, ಜುಲೈ 28: ಮೇಕೆದಾಟು ಯೋಜನೆಗಾಗಿ ನಾನು ಪ್ರಯತ್ನ ಮಾಡುತ್ತೇನೆ. ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಮಾಡೋಕೆ ಆಗುತ್ತಾ? ಕರ್ನಾಟಕದ ನಾಲ್ಕು ಜಲಾಶಯಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ. ಕರ್ನಾಟಕದವರೇ ಕಟ್ಟಿರುವುದು. ಕಾವೇರಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಜತೆ ಚರ್ಚೆ ಮಾಡಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ಮಾಡಿದರು. ಈಗ ರಾಜ್ಯದಲ್ಲಿ ಮಳೆಯಾಗಿದ್ದರಿಂದ ಹೆಚ್ಚು ನೀರು ಹೋಗುತ್ತಿದೆ. ಈ ವಿಚಾರಕ್ಕೆ ಟೆಕ್ನಿಕಲ್ ಆಗಿ ಚರ್ಚೆ ಮಾಡಿದರೆ ಒಳ್ಳೆಯದು ಎಂದರು.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ (Union Government) ಬಜೆಟ್​ನಲ್ಲಿ (Budget) ಕರ್ನಾಟಕಕ್ಕೆ ಯಾವುದೇ ವಿಶೇಷ ಅನುದಾನ ಕೊಡುಗೆ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ರಾಜ್ಯ ಕಾಂಗ್ರೆಸ್​ ನಾಯಕರು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ (Congress)​ ನಾಯಕರು ಈ ನಡವಳಿಕೆ ಬದಲಾವಣೆ ಮಾಡಿಕೊಳ್ಳಲಿ. ಮೊದಲು ನಿಮ್ಮ ಸಣ್ಣತನ ಬಿಟ್ಟುಬಿಡಿ. ಕೇಂದ್ರದ ವಿರುದ್ಧ ಸುಮ್ಮನೇ ಆರೋಪ ಮಾಡ್ತಾ ತಿರುಗಾಡುತ್ತಿದ್ದೀರಿ, ನೀವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಕೇಂದ್ರದ ಮುಂದೆ ಸಮರ್ಥವಾಗಿ ಇಡಬೇಕು. ಅದು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಟಾಂಗ್​ ಕೊಟ್ಟರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ಹಣ ಘೋಷಿಸಿದೆ. ಅನುದಾನ ಕೊಟ್ಟಿಲ್ಲ ಅಂತ ಕಾಂಗ್ರೆಸ್​ನವರು ಆರೋಪಿಸುತ್ತಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಅನ್ಯಾಯ ಆಗುತ್ತಿಲ್ಲ. ರಾಜ್ಯವೇ ಅನ್ಯಾಯ ಮಾಡಿಕೊಳ್ಳುತ್ತಿದೆ. ಕೇವಲ ಬೈದಾಡಿಕೊಂಡು ತಿರುಗಾಡುವುದರಿಂದ ಪ್ರಯೋಜನವಾಗಲ್ಲ. ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಪಾಲಿನ ಹಣ ಮೀಸಲಿಡಬೇಕು. ಆಗ ಮಾತ್ರ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ಬಿಡುಗಡೆ ಮಾಡುತ್ತೆ. ಯೋಜನೆಗಳ ಅನುಷ್ಠಾನಕ್ಕೆ ರಾಜ್ಯದ ಪಾಲಿನ ಹಣ ಮೀಸಲಿಡದೆ, ಕೇಂದ್ರದ ವಿರುದ್ಧ ವಿನಾಕಾರಣ ಆರೋಪ ಮಾಡೋದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಯೋಜನೆಗಳಲ್ಲಿ ಏನೇನು ಅಕ್ರಮವಾಗಿದೆ ಅಂತಾ ಸಿಎಜಿ ವರದಿಯನ್ನು ನಾನು ನೋಡಿದ್ದೇನೆ. ರಾಜ್ಯ ಸರ್ಕಾರದವರು ಅಭಿವೃದ್ಧಿ ಯೋಜನೆಗಳಿಗೆ ದುಡ್ಡು ಎಲ್ಲಿಟ್ಟಿದ್ದೀರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಸಂಸತ್​​ ನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ; ಪ್ರಲ್ಹಾದ ಜೋಶಿ ಕಿಡಿ

ಆಂಧ್ರಪ್ರದೇಶ ವಿಭಜನೆಯಾದ ಬಳಿಕ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡಲಾಗುತ್ತಿದೆ. ಆಂಧ್ರದ ಪೋಲಾವರಂ ಯೋಜನೆ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ‌. ಬಿಹಾರದಲ್ಲಿ ಮಳೆಗಾಲದಲ್ಲಿ ನೆರೆಯಿಂದ ಉಂಟಾಗುತ್ತಿರುವ ಹಾನಿ ತಡೆಯುವ ಸಲುವಾಗಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಈ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಬಜೆಟ್​ನಲ್ಲಿ ನಮ್ಮ ರಾಜ್ಯಕ್ಕೆ ವಿಶೇಷ ಆದ್ಯತೆ ನೀಡುವಂತೆ ಮನವಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು ಎಂದು ತಿಳಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಭೀಕರ ಪ್ರವಾಹ ಬಂತು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತು‌. ಸ್ವತಃ ಪ್ರಧಾನಿಯವರೇ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಎಲ್ಲ ರೀತಿಯ ನೆರವು ನೀಡುವ ಭರವಸೆ ನೀಡಿದರು. ಅಂತಹ ವಾತಾವರಣವನ್ನು ನೀವೇಕೆ ಸೃಷ್ಟಿಸಿಕೊಂಡಿಲ್ಲ? ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಏಕೆ ದೂರುತ್ತೀರಿ? ರಾಜ್ಯದ ಸಂಸದರ ಮೇಲೆ ಏಕೆ ಆರೋಪಗಳನ್ನು ಮಾಡುತ್ತೀರಿ? ಹಾಗಾದರೆ ರಾಜ್ಯ ಸರ್ಕಾರದ ಕೆಲಸವಾದರೂ ಏನು? ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನಸಭೆಯ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಶಾಸಕ ಜಿ ಡಿ ಹರೀಶ್ ಗೌಡ, ಎಂಎಲ್​ಸಿಗಳಾದ ಸಿ ಎನ್ ಮಂಜೇಗೌಡ, ವಿವೇಕಾನಂದ, ಮಾಜಿ ಸಚಿವ ಸಾ ರಾ ಮಹೇಶ್, ಮಾಜಿ ಶಾಸಕರಾದ ಕೆ ಮಹದೇವ್, ಅಶ್ವಿನ್ ಕುಮಾರ್ ಭಾಗಿಯಾಗಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:39 pm, Sun, 28 July 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!