AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ; ಯಾರ‍್ಯಾರಿಗೆ?

ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್​​ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲಾಗಿರಲಿಲ್ಲ. ಇದೀಗ ಕೋಲಾರ(Kolar)ದ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಕೋಲಾರದ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ; ಯಾರ‍್ಯಾರಿಗೆ?
ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 26, 2024 | 4:47 PM

Share

ಕೋಲಾರ, ಜ.26: ಕೋಲಾರ(Kolar)ದ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಬಂಗಾರಪೇಟೆ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿರುವ ಎಸ್.ಎನ್.ನಾರಾಯಣಸ್ವಾಮಿ(SN Narayanaswamy) ಕೆ.ಯು.ಡಿ.ಐ.ಸಿ ಅಂಡ್ ಎಫ್.ಸಿ ಅಧ್ಯಕ್ಷ ಸ್ಥಾನ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಎರಡು ಬಾರಿ‌ ಶಾಸಕಿಯಾಗಿದ್ದ ರೂಪಕಲಾ‌(Roopkala) ಅವರಿಗೆ ಕರಕುಶಲ ಅಭಿವೃದ್ದಿ ಮಂಡಳಿ ಅಧ್ಯಕ್ಷೆಯಾಗಿ ಆದೇಶಿಸಲಾಗಿದೆ.

ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್​​ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿರಲಿಲ್ಲ. ಜೊತೆಗೆ ನಿಗಮ ಮಂಡಳಿ ನೇಮಕ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ನಡುವೆ ಸಂಘರ್ಷ ಮಾರ್ಪಟ್ಟಿತ್ತು. ಇದೀಗ ಕೋಲಾರದ ಇಬ್ಬರು ಶಾಸಕರನ್ನು ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ:ನಿಗಮ ಮಂಡಳಿ ನೇಮಕ ಜಟಾಪಟಿ; ಕೋಳಿಯನ್ನು ಕೇಳಿ ಕೊಯ್ಯುಲು ಆಗುತ್ತಾ ಎಂದು ಪರಮೇಶ್ವರ್​ಗೆ ಟಾಂಗ್ ಕೊಟ್ಟ ವೆಂಕಟೇಶ್

ಇನ್ನು ನಿಗಮ ಮಂಡಳಿ ನೇಮಕಾತಿಗಾಗಿ ಹೈಕಮಾಂಡ್ ಹಾಗೂ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮಧ್ಯೆ ಹಗ್ಗಜಗ್ಗಾಟ ನಡೆದಿತ್ತು. ಹೈಕಮಾಂಡ್​ಗೆ ಕಳುಹಿಸದ ಹೆಸರುಗಳು ನಿಗಮ ಮಂಡಳಿ ನೇಮಕಾತಿ ಪಟ್ಟಿಯಲ್ಲಿ ಎಂಟ್ರಿಯಾಗಿದ್ದು, ಇದು ಸಿಎಂ, ಡಿಸಿಎಂಗೆ ಶಾಕ್ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಅಂಬಿಗರ ಚೌಡಯ್ಯ ಕಾರ್ಯಕ್ರಮಕ್ಕೆ ಹೋಗದೇ ತಾಜ್ ವೆಸ್ಟ್ ಎಂಡ್​ನಲ್ಲಿ ಸೇರಿ ಚರ್ಚಿಸಿದ್ದರು. ಇದೆಲ್ಲದರ ನಡುವೆ ಇದೀಗ ಬಂಗಾರಪೇಟೆ ಹಾಗೂ ಕೆಜಿಎಫ್​ ಶಾಸಕರಿಗೆ ಅಧ್ಯಕ್ಷ ಸ್ಥಾನ ಕೊಡಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Fri, 26 January 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ