AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಹಣವೇ ಪ್ರಧಾನ ಆಗಿದ್ದರೆ ಬೈಂದೂರು, ಸುಳ್ಯದಲ್ಲಿ ಬಡ ಕಾರ್ಯಕರ್ತರಿಗೆ ಟಿಕೆಟ್ ಸಿಗುತ್ತಿರಲಿಲ್ಲ: ಸಿಟಿ ರವಿ

ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಪಡೆದು ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಂಚನೆ ಎಸಗಿರುವ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಆಡಳಿತರೂಢ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮಾಜಿ ಶಾಸಕ ಸಿಟಿ ರವಿ, ಹಣವೇ ಬಿಜೆಪಿಯಲ್ಲಿ ಪ್ರಧಾನವಾಗಿದ್ದರೆ ಬೈಂದೂರು ಮತ್ತು ಸುಳ್ಯ ಕ್ಷೇತ್ರಗಳ ಟಿಕೆಟ್ ಬಡ ಕಾರ್ಯಕರ್ತರಿಗೆ ಸಿಗುತ್ತಿರಲಿಲ್ಲ ಎಂದಿದ್ದಾರೆ.

ಬಿಜೆಪಿಯಲ್ಲಿ ಹಣವೇ ಪ್ರಧಾನ ಆಗಿದ್ದರೆ ಬೈಂದೂರು, ಸುಳ್ಯದಲ್ಲಿ ಬಡ ಕಾರ್ಯಕರ್ತರಿಗೆ ಟಿಕೆಟ್ ಸಿಗುತ್ತಿರಲಿಲ್ಲ: ಸಿಟಿ ರವಿ
ಸಿಟಿ ರವಿ ಮತ್ತು ಚೈತ್ರಾ ಕುಂದಾಪುರ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Sep 16, 2023 | 12:06 PM

Share

ಮಂಗಳೂರು, ಸೆ.16: ಬೈಂದೂರು ಬಿಜೆಪಿ ಟಿಕೆಟ್​​ಗಾಗಿ ಚೈತ್ರಾ ಕುಂದಾಪುರ (Chaitra Kundapur) ಡೀಲ್ ಪ್ರಕರಣ ಸಂಬಂಧ ಮಾತನಾಡಿದ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi), ಹಣವೇ ಬಿಜೆಪಿಯಲ್ಲಿ ಪ್ರಧಾನ ಆಲ್ಲ, ಹಾಗಿದ್ದರೆ ನೂರಾರು ಬಡ ಕಾರ್ಯಕರ್ತರು ನಮ್ಮಲ್ಲಿ ಸಂಸದರು, ಶಾಸಕರು ಆಗುತ್ತಿರಲಿಲ್ಲ ಎಂದರು.

ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಸಿಗುತ್ತಿರಲಿಲ್ಲ. ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಅವರು ನಾಯಕರಾಗುತ್ತಿರಲಿಲ್ಲ ಎಂದರು.

ಇದನ್ನೂ ಓದಿ: ಚೈತ್ರಾ ಕುಂದಾಪುರ ಮತ್ತು ಗೋವಿಂದ ಬಾಬು ಆಪ್ತ ಪ್ರಸಾದ್ ನಡುವೆ ನಡೆದ ಸಂಭಾಷಣೆಯ ಆಡಿಯೋ ಬಹಿರಂಗ

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಮೋಸ‌ ಮಾಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ. ಅವರು‌ ನೇರವಾಗಿ ಫೋನ್ ಮಾಡಿದರೂ ಬಿಜೆಪಿ ನಾಯಕರು ಸಂಪರ್ಕಕ್ಕೆ ಸಿಗುತ್ತಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರ ಜೊತೆ ತುಳು ಭಾಷೆಯಲ್ಲೇ ಮಾತಾಡುತ್ತಿದ್ದರು. ನಳಿನ್ ಕುಮಾರ್ ಕಟೀಲ್, ಕೋಟಾ ಶ್ರೀನಿವಾಸ ಪೂಜಾರಿಯೂ ಮಾತಾಡುತ್ತಿದ್ದರು ಎಂದರು.

ಅವರ ಬಳಿಯೇ ನೇರ ಫೋನ್ ಮಾಡಿ ಮಾತನಾಡುವ ಅವಕಾಶ ಗೋವಿಂದ ಬಾಬು ಪೂಜಾರಿಗೆ ಇತ್ತು. ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಸೂಕ್ತ ತನಿಖೆ ನಡೆದು ಕ್ರಮ ಆಗಲಿ. ಯಾರದ್ದೋ ಹೆಸರು ಕೇಳಿ ಬರುತ್ತಿದೆ ಅನ್ನೋದು ಬೇರೆ. ಮೊದಲು ಸಮಗ್ರ ತನಿಖೆ ಆಗಲಿ ಎಂದರು.

ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯ: ಸಿಟಿ ರವಿ

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಟಿ ರವಿ, ನಾವು ಪರಿಷತ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗುತ್ತಿದೆ, ಆದರೆ ಅಂತಿಮ ಆಗಿಲ್ಲ. ಹಾಗಾಗಿ‌ ಅದು ವರಿಷ್ಠರ ತೀರ್ಮಾನ, ನಾವು ಯಾವುದೇ ಚುನಾವಣೆಗೆ ನಮ್ಮ ಹಂತದಲ್ಲಿ ಸಿದ್ಧವಾಗುತ್ತಿದ್ದೇವೆ. ಈ ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯವಾಗಿದೆ ಎಂದರು.

ಬಿಜೆಪಿಯ ಮಾಜಿ ಕಾರ್ಪೋರೆಟರ್​ಗಳು, ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ. ಬೆಲ್ಲ ಇದ್ದ ಕಡೆ ಇರುವೆ ಹೋಗುವುದು ಸ್ವಾಭಾವಿಕ. ಕೆಲವರು ಅಧಿಕಾರದ ಕಾರಣಕ್ಕೆ ಇಲ್ಲಿಂದ ಅಲ್ಲಿಗೆ ಹೋಗಿದ್ದಾರೆ. ನಾವು ಸಚಿವರು, ಶಾಸಕರನ್ನೇ ಕರೆದುಕೊಂಡು ಹೋದರೂ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಈಗ ಅವರು ಕಾರ್ಪೋರೆಟರ್​ಗಳನ್ನು ಕರೆದುಕೊಂಡು ಏನಾಗುತ್ತದೆ ಎಂದರು.

ಈಗ ಅವರು ಅಪರೇಷನ್ ಹಸ್ತ ಮಾಡಲಿ, ಮುಂದೆ ಜನರೇ ಹಸ್ತವನ್ನು ಅಪರೇಷನ್ ಮಾಡುತ್ತಾರೆ. ಅಧಿಕಾರದ ಆಸೆಗೆ ಯಾರು‌ ಎಲ್ಲೇ ಹೋದರೂ ಅಧಿಕಾರ ಉಳಿಸಿಕೊಳ್ಳಲು ಆಗಲ್ಲ. ನನ್ನ ಸೋಲಿಗೆ ನಾನೇ ಕಾರಣ, ಬೇರೆ ಯಾರಿಗೂ ದೂರಲ್ಲ. ನನ್ನ ದುರ್ಬಲತೆಯೇ ಕಾರಣ, ಅತೀ ಹೆಚ್ಚು ವೋಟ್ ಪಡೆದರೂ ಸೋತಿದ್ದೇನೆ ಎಂದರು.

ಅಂಜುಮನ್ ಇಸ್ಲಾಂ ಕೋರ್ಟ್​ಗೆ ಹೋಗಿದ್ದೇ ತಪ್ಪು: ಸಿಟಿ ರವಿ

ಹುಬ್ಬಳ್ಳಿ ಈದ್ಗಾ ಮೈದಾನ ಅಲ್ಲ, ಅದು ನಗರ ಪಾಲಿಕೆಯ ಮೈದಾನವಾಗಿದೆ. ಅದರ ವಿರುದ್ಧ ಅಂಜುಮನ್ ಇಸ್ಲಾಂ ಹೈಕೋರ್ಟ್​ಗೆ ಹೋಗಿದ್ದೇ ತಪ್ಪು. ಅಲ್ಲಿ‌ ಅನುಮತಿ ಕೊಡುವುದು ಬಿಡುವುದು ಪಾಲಿಕೆಗೆ ಬಿಟ್ಟ ವಿಚಾರ ಎಂದು ಸಿಟಿ ರವಿ ಹೇಳಿದರು. ಕಾಂಗ್ರೆಸ್ ಬಂದಾಗ ಈ ಕೋಮುವಾದಿ ಶಕ್ತಿಗಳು ಎದ್ದು ಕೂರುತ್ತವೆ. ಈ ನಡುವೆ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಡಿ ಅಂತ ಕೋರ್ಟ್‌ಗೆ ಹೋಗಲು ಇವರು ಯಾರು ಎಂದು ಪ್ರಶ್ನಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Sat, 16 September 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ