AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್, ಬಿಜೆಪಿ ತೊರೆದು ಜೆಡಿಎಸ್​ ಸೇರಿದ ಮಾಜಿ ಶಾಸಕ ಬಸವರಾಜ ಮಂಡಿಮಠ

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಕರ್ನಾಟಕದಲ್ಲಿ ಆಗಲೇ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಇದರ ಮಧ್ಯೆ ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಗೆ ಆರಂಭಕ ಆಘಾತವಾಗಿದೆ.

ಚುನಾವಣೆ ಹೊತ್ತಲ್ಲೇ ಕೇಸರಿ ಪಡೆಗೆ ಬಿಗ್ ಶಾಕ್, ಬಿಜೆಪಿ ತೊರೆದು ಜೆಡಿಎಸ್​ ಸೇರಿದ ಮಾಜಿ ಶಾಸಕ ಬಸವರಾಜ ಮಂಡಿಮಠ
ಬಿಜೆಪಿ ಮಾಜಿ ಶಾಸಕ ಬಸವರಾಜ ಮಂಡಿಮಠ ಜೆಡಿಎಸ್ ಸೇರ್ಪಡೆ
TV9 Web
| Edited By: |

Updated on: Jan 29, 2023 | 5:55 PM

Share

ಚಿತ್ರದುರ್ಗ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಸದ್ದಿಲ್ಲದೇ ಪಕ್ಷಾಂತರ ಪರ್ವ ಜೋರಾಗಿದೆ. ಈ ಬಾರಿ ಶತಾಯಗತಾಯವಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಿಕ್ಕೆ ತರಬೇಕೆಂದು ಹೈಕಮಾಂಡ್​ ಭರ್ಜರಿ ತಂತ್ರಗಳನ್ನು ರೂಪಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಕರ್ನಾಟಕದಲ್ಲಿ ಆಗಲೇ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಇದರ ಮಧ್ಯೆ ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಗೆ ಆರಂಭಕ ಆಘಾತವಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಸವರಾಜ ಮಂಡಿಮಠ(Basavaraj Mandimutt) ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಜನವರಿ 29) ಜೆಡಿಎಸ್ ಜಿಲ್ಲಾಧ್ಯಕ್ಷ ಯಶೋಧರ್ ಹಾಗೂ ಚಳ್ಳಕೆರೆ ಅಭ್ಯರ್ಥಿ ರವೀಶ್ ಉಪಸ್ಥಿತಿಯಲ್ಲಿ ಮಾಜಿ ಶಾಸಕ ಬಸವರಾಜ ಮಂಡಿಮಠ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಿದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿ ಮಿಂಚಿನ ಸಂಚಾರ: ಜನ ಬೆಂಬಲ ನೋಡಿ ಬಿಜೆಪಿ ಸೀಕ್ರೆಟ್ ಸಭೆಯಲ್ಲಿ ಅಮಿತ್ ಶಾ ಫುಲ್ ಖುಷ್

1999ರ ಚಳ್ಳಕೆರೆ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಮಂಡಿಮಠ ಅವರು ಬಿಜೆಪಿಯಿಂದ ಸ್ಪರ್ಧಿಸಿ 26517 ಮತಗಳೊಂದಿಗೆ ತಿಪ್ಪೇಸ್ವಾಮಿ ಅವರನ್ನು ಸೋಲಿಸಿದ್ದರು. ಬಳಿಕ 2004ರಲ್ಲಿ ಕಾಂಗ್ರೆಸ್​ನ ಸುಧಾಕರ್ ಡಿ ಅವರ ವಿರುದ್ಧ ಬಸವರಾಜ ಮಂಡಿಮಠ ಸೋಲುಕಂಡಿದ್ದರು. 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್​ನಿಂದ ಅಖಾಡಕ್ಕಿಳಿದಿದ್ದ ನಟ ಶಶಿಕುಮಾರ್ ಅವರನ್ನು ಸೋಲಿಸಿದ್ದರು.

ಇತ್ತೀಚೆಗೆ ನಟ ಶಶಿಕುಮಾರ್ ಅವರು ಬಸವರಾಜ ಮಂಡಿಮಠ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಶಿಕುಮಾರ್ ಮತ್ತೆ ರಾಜಕೀಯಕ್ಕೆ ರೀ ಎಂಟ್ರಿಯಾಗುತ್ತಾರಾ ಎನ್ನುವ ಚರ್ಚೆಗಳು ನಡೆದಿದ್ದವು.

ಇನ್ನು ಕಳೆದ ಅಂದರೆ 2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನ ರಘುಮೂರ್ತಿ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಈ ಚುನಾವಣೆಯಲ್ಲಿ ಜೆಡಿಎಸ್​ನ ರವೀಶ್ ಕುಮಾರ್ ಅವರು 59335 ಮತಗಳನ್ನು ಪಡೆದುಕೊಂಡು ಭಾರೀ ಪೈಪೋಟಿ ನೀಡಿ ಕೊನೆಗೆ 2ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದರು. ಈ ಬಾರಿ ಚಳ್ಳಕೆರೆ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮತ್ತೆ ರವೀಶ್ ಕುಮಾರ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ. ಇದೀಗ ಬಿಜೆಪಿ ಮಾಜಿ ಶಾಸಕ ಬಸವರಾಜ ಮಂಡಿಮಠ ಸಹ ಜೆಡಿಎಸ್​ ಸೇರ್ಪಡೆಯಾಗಿದ್ದು, ರವೀಶ್ ಕುಮಾರ್ ಗೆಲ್ಲುವ ಉತ್ಸಹದಲ್ಲಿದ್ದಾರೆ.

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ