AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾದರೆ ತಿಳಿಸುತ್ತೇನೆ: ಸೈಲೆಂಟ್ ಸುನೀಲ್ ಸ್ಪಷ್ಟನೆ

Karnataka Election 2023: ರಾಜಕೀಯ ಪ್ರವೇಶ ಹಾಗೂ ಚುನಾವಣೆ ಸ್ಪರ್ಧೆ ಸುದ್ದಿಯಷ್ಟೇ. ರಾಜಕೀಯ ಸೇರ್ಪಡೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ತಿಳಿಸುತ್ತೇನೆ ಎಂದು ಸೈಲೆಂಡ್ ಸುನೀಲ್ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾದರೆ ತಿಳಿಸುತ್ತೇನೆ: ಸೈಲೆಂಟ್ ಸುನೀಲ್ ಸ್ಪಷ್ಟನೆ
ಸೈಲೆಂಟ್ ಸುನೀಲ್
TV9 Web
| Updated By: Rakesh Nayak Manchi|

Updated on:Feb 18, 2023 | 10:15 PM

Share

ಚಾಮರಾಜಪೇಟೆ: ಈ ಕ್ಷೇತ್ರದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸುದ್ದಿಯಲ್ಲಿರುವ ಸೈಲೆಂಟ್ ಸುನೀಲ್, ಶಿವರಾತ್ರಿ ಹಿನ್ನಲೆ ಇಂದು ಟೆಂಪಲ್ ರನ್ ಆರಂಭಿಸಿದ್ದಾರೆ. ಮಹದೇಶ್ವರ ದೇಗುಲಕ್ಕೆ ತನ್ನ ಸಹಚರರೊಂದಿಗೆ ಸೈಲೆಂಟ್​ ಸುನೀಲ್ ಭೇಟಿ ನೀಡಿದ್ದು, ಕೇಸರಿ ಶಾಲು ಧರಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇನ್ನು, ಮಹದೇಶ್ವರ ದೇಗುಲದ ಬಳಿ ಸೇರಿದಂತೆ ಚಾಮರಾಜಪೇಟೆ ಕ್ಷೇತ್ರದ ವಿವಿಧ ಕಡೆಗಳಲ್ಲಿ ಸೈಲೆಂಟ್ ಸುನೀಲ್ (Silent Sunil) ಬ್ಯಾನರ್​ಗಳು ಹಾಗೂ ಕಟೌಟ್​ಗಳು ರರಾಜಿಸುತ್ತಿವೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್, ಎಲ್ಲರಿಗೂ ಶಿವರಾತ್ರಿಯ ಶುಭಾಷಯಗಳು. ವಿಶೇಷ ಏನೂ ಇಲ್ಲ, ನಾನು ರಾಜಕೀಯ ಪ್ರವೇಶ ಹಾಗೂ ಚುನಾವಣೆ (Karnataka Assembly Election 2023) ಸ್ಪರ್ಧೆ ಸುದ್ದಿಯಷ್ಟೇ. ರಾಜಕೀಯ ಸೇರ್ಪಡೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ತಿಳಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಟೆಂಪಲ್ ರನ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ಹಿತೈಷಿಗಳು, ಸ್ನೇಹಿತರು ನನ್ನ ಹೆಸರಲ್ಲಿ ಸೇವೆ ಮಾಡುತ್ತಿದ್ದಾರೆ ಎಂದರು.

ರೌಡಿಸಂ ಹಾಗೂ ರಾಜಕಾರಣ ಯಾವಾಗಲೂ ಜೊತೆಜೊತೆಗೆ ಹೆಜ್ಜೆ ಹಾಕುತ್ತವೆ. ರಾಜಕೀಯ ತೆರೆಯ ಮುಂದಿನ ಕೆಲಸ ಮಾಡಿದರೆ, ರೌಡಿಸಂ ತೆರೆಯ ಹಿಂದಿನ ಕೆಲಸ ಮಾಡುತ್ತದೆ. ರೌಡಿಸಂ ಹಿನ್ನೆಲೆಯಿರುವ ಸೋಕಾಲ್ಡ್ ಡಾನ್​ಗಳು ಈಗ ರಾಜಕೀಯಕ್ಕೆ ಬರಲು ಮುಂದಾಗಿದ್ದಾರೆ. ಇಂಥವರ ಪೈಕಿ ಸೈಲೆಂಟ್ ಸುನೀಲ ಸಹ ಒಬ್ಬರು. ಈ ಹಿಂದೆ ಚಾಮರಾಜಪೇಟೆಯಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬಹಿರಂಗವಾಗಿಯೇ ಕಾಣಿಸಿಕೊಂಡಿದ್ದರು. ಸದ್ಯ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್​ನ ಪ್ರಭಾವಿ ಶಾಸಕ ಜಮೀರ್ ಎದುರಿಗೆ ಭವಿಷ್ಯ ಕಟ್ಟಿಕೊಳ್ಳಲು ಸೈಲೆಂಟಾಗಿ ಸುನೀಲ ಸ್ಕೆಚ್ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಏನೇ ಸಮಸ್ಯೆ ಇದ್ರೂ ಕೂತು ಬಗೆಹರಿಸಿಕೊಳ್ಳೋಣ: ರೌಡಿಶೀಟರ್ ಸೈಲೆಂಟ್ ಸುನೀಲನ ಬಾಯಲ್ಲಿ ಶಾಂತಿ ಮಂತ್ರ

ಸೈಲೆಂಟ್ ಸುನೀಲಾ ಈಗ ರಾಜಕೀಯಕ್ಕೆ ಬರಲು ತಯಾರಿ ನಡೆಸುತ್ತಿದ್ದಾರೆ. ಇದೇ ಕಾರಣಕ್ಕೆ ಸುತ್ತಲು ರೌಡಿಗಳನ್ನು ಹಾಕಿಕೊಂಡು ತಿರುಗುತಿದ್ದವರು ಈಗ ಎಂಎಲ್ಎ, ಎಂಪಿಗಳೊಂದಿಗೆ ತಿರುಗುತ್ತಿದ್ದಾರೆ. ತಾನೊಬ್ಬ ರೌಡಿ ಎನ್ನುವ ಪಟ್ಟ ಹೊಂದಿದ್ದರೆ ಪಟ್ಟಿ ಹೊಂದಿದ್ರೆ ಸಮಾಜದಲ್ಲಿ ಕೊನೆಯತನಕವೂ ರೌಡಿಯಾಗಿಯೇ ಇರಬೇಕಾಗುತ್ತದೆ. ಅದರೆ ಅದೇ ರೌಡಿ ಎನ್ನುವ ಹಣೆಪಟ್ಟಿಯ ಬದಲು ರಾಜಕೀಯ ನಾಯಕ ಎಂದು ಬದಲಾದರೆ ಯಾವುದೇ ಆತಂಕ ಇರುವುದಿಲ್ಲ ಎನ್ನುವ ನಿಲುವಿಗೆ ಬಂದಿರುವಂತಿದೆ.

ಆದರೆ ಯಾವಾಗ ಸುನೀಲ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡರೋ ಅಂದಿನಿಂದ ವಿಪಕ್ಷಗಳಿಗೆ ಅಸ್ತ್ರವೊಂದು ಸಿಕ್ಕಂತಾಗಿತ್ತು. ಸೈಲೆಂಟ್ ಸುನೀಲ ಪಕ್ಷ ಸೇರುತ್ತಿರುವ ಬಗ್ಗೆ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರೌಡಿ ಮೋರ್ಚಾ ತೆರೆಯುವುತ್ತಿದ್ದಾರೆ ಎಂಬಿತ್ಯಾದಿ ಟೀಕೆಗಳನ್ನು ಕಾಂಗ್ರೆಸ್ ನಡೆಸಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Sat, 18 February 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು