AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ

MLA Zameer Ahmed Khan: ತಮ್ಮ ಪರಮಾಪ್ತನಿಂದ ಇಂತಹ ಮಾತುಗಳು ಕೇಳಿಬಂದಿದ್ದೇ ತಡ ಸಿದ್ದರಾಮಯ್ಯನವರು ಬೇಸರದ ವೇಳೆ ದುಡುಕಿನ ನಿರ್ಧಾರ ಮಾಡುವುದು ಸರಿ ಅಲ್ಲ. ನಿನ್ನ ಜೊತೆ ನಾನು ಗಟ್ಟಿಯಾಗಿದ್ದೇನೆ ಎಂದು ಜಮೀರ್​ಗೆ ಧೈರ್ಯ ತುಂಬಿ ಕಳಿಸಿದ್ದಾರೆ. ಆದರೆ ರಜಾನ್ ಬಳಿಕ ಜಮೀರ್​ ಅಹ್ಮದ್ ರಾಜಕೀಯ ನಡೆ ಎನೋ ಎಂತೋ ಎಂಬಂತಿದೆ.

ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ
ಸರ್! ನೀವು ಇದ್ದೀರಿ ಅನ್ನುವ ಏಕಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ
TV9 Web
| Edited By: |

Updated on: Apr 07, 2022 | 4:13 PM

Share

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್​ ಶಾಸಕ, ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಟ್ಟಾಳು ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್​ ಪಕ್ಷ ಬಿಡುವ ಬಗ್ಗೆ ವದಂತಿಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಜಮೀರ್ ಖಾನ್​ರನ್ನು ಎರಡು ದಿನಗಳ ಹಿಂದೆ ಮನೆಗೆ ಕರೆಸಿಕೊಂಡಿದ್ದ ಸಿದ್ದರಾಮಯ್ಯ ಅವರುರಾಜಕೀಯ ವಲಯದಲ್ಲಿ ನಿನ್ನ ಬಗ್ಗೆ ಹಲವು ವಿಷಯ ಹರಿದಾಡ್ತಿದೆ. ನಿನ್ನ ನಿಲುವೇನು? ರಾಹುಲ್ ಪ್ರವಾಸ ವೇಳೆ ಏಕೆ ದೂರವಾಗಿದ್ದೆ? ಬೇಸರವಾಗಿದ್ದರೆ ಏನೆಂದು ಹೇಳು ಎಂದು ಜಮೀರ್​ ಅಹ್ಮದ್​ಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಸಿದ್ದರಾಮಯ್ಯನವರ ಪ್ರಶ್ನೆಗಳಿಗೆ ಜಮೀರ್ ಅಹ್ಮದ್ ಅಲ್ಲೇ ಪ್ರತಿಕ್ರಿಯೆ ನೀಡಿದ್ದು, ಸರ್.. ನೀವು ಇದ್ದೀರಾ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿ ಇದ್ದೇನೆ. ಇಲ್ಲವಾಗಿದ್ದರೆ ಇಷ್ಟೊತ್ತಿಗಾಗಲೇ ಬೇರೆ ನಿರ್ಧಾರ ಕೈಗೊಳ್ಳುತ್ತಿದ್ದೆ. ಸದ್ಯಕ್ಕೆ ನಾನು ಯಾವ ವಿಚಾರವನ್ನೂ ನಿಮಗೆ ಹೇಳುವುದಿಲ್ಲ. ರಂಜಾನ್ ಹಬ್ಬ ಕಳೆದ ಬಳಿಕ ನಾನು ನಿಮ್ಮ ಬಳಿ ಮಾತಾಡುವೆ. ರಂಜಾನ್ ಬಳಿಕ ಎಲ್ಲವನ್ನೂ ತಿಳಿಸುವೆ ಎಂದು ಜಮೀರ್ ಕ್ಲುಪ್ತವಾಗಿ ತಮ್ಮ ಬಾಸ್​ಗೆ ಉತ್ತರಿಸಿದ್ದಾರೆ.

ತಮ್ಮ ಪರಮಾಪ್ತನಿಂದ ಇಂತಹ ಮಾತುಗಳು ಕೇಳಿಬಂದಿದ್ದೇ ತಡ ಸಿದ್ದರಾಮಯ್ಯನವರು ಬೇಸರದ ವೇಳೆ ದುಡುಕಿನ ನಿರ್ಧಾರ ಮಾಡುವುದು ಸರಿ ಅಲ್ಲ. ನಿನ್ನ ಜೊತೆ ನಾನು ಗಟ್ಟಿಯಾಗಿದ್ದೇನೆ ಎಂದು ಜಮೀರ್​ಗೆ ಧೈರ್ಯ ತುಂಬಿ ಕಳಿಸಿದ್ದಾರೆ. ಆದರೆ ರಜಾನ್ ಬಳಿಕ ಜಮೀರ್​ ಅಹ್ಮದ್ ರಾಜಕೀಯ ನಡೆ ಎನೋ ಎಂತೋ ಎಂಬಂತಿದೆ.

Also Read: ಬೆಳಗಾವಿ ಅಜ್ಜಿ ಬಳ್ಳಾರಿ ಕಾಲೇಜಿಗೆ ದೇಹ ದಾನ ಮಾಡಿ ಸಾರ್ಥಕತೆ ಮೆರೆದರು ! ಇದಕ್ಕೆ ಪ್ರೇರಣೆ ಯಾರು? ಇಲ್ಲಿದೆ ಕ್ರಾಂತಿಕಾರಿ ಸ್ಟೋರಿ!

Also Read: ಬೆಂಗಳೂರಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಆಗಮನ ಹಿನ್ನೆಲೆ; ರಾಘವೇಂದ್ರ ಸ್ವಾಮಿ ಮಠಕ್ಕೆ ಸಿಎಂ ಭೇಟಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು