AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಮೊಮ್ಮಗ ಚಂದ್ರಬೋಸ್ ಬಿಜೆಪಿಗೆ ರಾಜೀನಾಮೆ

Chandra Bose: ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಅವರ ಮೊಮ್ಮಗ ಚಂದ್ರಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಹೇಳಿದ್ದಾರೆ.

ನೇತಾಜಿ ಸುಭಾಷ್​​​ ಚಂದ್ರ ಬೋಸ್​​ ಮೊಮ್ಮಗ ಚಂದ್ರಬೋಸ್ ಬಿಜೆಪಿಗೆ ರಾಜೀನಾಮೆ
ಚಂದ್ರ ಬೋಸ್​​
ಅಕ್ಷಯ್​ ಪಲ್ಲಮಜಲು​​
|

Updated on:Sep 06, 2023 | 5:33 PM

Share

ದೆಹಲಿ, ಸೆ.6: ನೇತಾಜಿ ಸುಭಾಷ್​​​ ಚಂದ್ರ ಬೋಸ್ (Subhas chandra Bose)​​ ಅವರ ಮೊಮ್ಮಗ ಚಂದ್ರಬೋಸ್  (Chandra Bose) ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ (BJP) ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆಗಳನ್ನು ಈಡೇರಿಸಲಿಲ್ಲ ಎಂದು ಹೇಳಿದ್ದಾರೆ. ಚಂದ್ರಬೋಸ್ ಅವರು 2016ರಲ್ಲಿ ಬಿಜೆಪಿ ಸೇರಿದ್ದರು ಮತ್ತು 2016ರ ವಿಧಾನಸಭೆ ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಎರಡು ಬಾರಿ ಸ್ಪರ್ಧಿಸಿದ್ದರು. ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರನ್ನು ಒಳಗೊಳ್ಳುವ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ ಈ ಬಗ್ಗೆ ಪಕ್ಷದ ನಾಯಕರು ಯಾವುದೇ ರೀತಿಯ ಬೆಂಬಲವನ್ನು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

2016ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ  ಚಂದ್ರ ಬೋಸ್ ಅವರನ್ನು 2020ರ ಸಾಂಸ್ಥಿಕ ಪುನರ್​​ ರಚನೆ ಸಮಯದಲ್ಲಿ ಅವರನ್ನು ಇದರಿಂದ ಕೈಬಿಡಲಾಯಿತು. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಚಂದ್ರ ಬೋಸ್​​, ನನ್ನ ಚರ್ಚೆಗಳು (ಬಿಜೆಪಿಯೊಂದಿಗೆ) ಆಗ ಬೋಸ್ ಸಹೋದರರ (ನೇತಾಜಿ ಮತ್ತು ಅವರ ಹಿರಿಯ ಸಹೋದರ ಶರತ್ ಚಂದ್ರ ಬೋಸ್, ಸ್ವಾತಂತ್ರ್ಯ ಹೋರಾಟಗಾರ) ಅಂತರ್ಗತ ಸಿದ್ಧಾಂತದ ಮೇಲೆ ಕೇಂದ್ರೀಕೃತವಾಗಿತ್ತು. ಆಗ ಮತ್ತು ನಂತರ, ನಾನು ಈ ಸಿದ್ಧಾಂತವನ್ನು ಎಲ್ಲೆಡೆ ಪ್ರಚಾರ ಮಾಡುತ್ತೇನೆ ಎಂಬುದನ್ನು ಹೇಳಿ ಬಿಜೆಪಿಗೆ ಸೇರಿದ್ದೆ, ಜತೆಗೆ ಇದು  ನನ್ನ ಪ್ರಮುಖ ಕಾರ್ಯವಾಗಿತ್ತು. ಬಿಜೆಪಿ ವೇದಿಕೆಯಲ್ಲಿ ದೇಶ, ಧರ್ಮ, ಜಾತಿ ಮತ್ತು ಪಂಥದ ಭೇದವಿಲ್ಲದೆ ಎಲ್ಲಾ ಸಮುದಾಯಗಳನ್ನು ಭಾರತೀಯರಾಗಿ ಒಗ್ಗೂಡಿಸುವ ನೇತಾಜ್ ಅವರ ಸಿದ್ಧಾಂತವನ್ನು ಪ್ರಚಾರ ಮಾಡುವ ಪ್ರಾಥಮಿಕ ಉದ್ದೇಶದೊಂದಿಗೆ ಬಿಜೆಪಿಯ ಚೌಕಟ್ಟಿನೊಳಗೆ ಆಜಾದ್ ಹಿಂದ್ ಮೋರ್ಚಾವನ್ನು ರಚಿಸಲು ನಿರ್ಧರಿಸಲಾಯಿತು. ಆದರೆ ನನಗೆ ಈ ಯಾವುದಕ್ಕೂ ಅವಕಾಶಗಳನ್ನು ಬಿಜೆಪಿ ಸರಿಯಾಗಿ ನೀಡಿಲ್ಲ ಮತ್ತು ಬೆಂಬಲವನ್ನು ಕೊಟ್ಟಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ದೆಹಲಿಯಲ್ಲಿ ಇಂದು ಸಂಜೆ ಪ್ರಧಾನಿ ಮೋದಿಯಿಂದ ಕರ್ತವ್ಯ ಪಥ ಉದ್ಘಾಟನೆ; ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

ದೇಶವನ್ನು ಒಗ್ಗೂಡಿಸುವ ದೃಷ್ಟಿಯಿಂದ ಈ ನಿರ್ಧಾರ ಅಗತ್ಯ ಎಂದು ಹೇಳಿದ್ದಾರೆ. ಇನ್ನು ನನ್ನ ಈ ವಿಚಾರಧಾರೆಗಳ ಪ್ರಚಾರಕ್ಕೆ ಬಿಜೆಪಿಯಿಂದ, ಕೇಂದ್ರ ಅಥವಾ ಪಶ್ಚಿಮ ಬಂಗಾಳದ ರಾಜ್ಯ ಮಟ್ಟದಲ್ಲಿ ಯಾವುದೇ ಬೆಂಬಲವನ್ನು ಪಡೆದಿಲ್ಲ. ಜನರನ್ನು ತಲುಪಲು ಬಂಗಾಳದ ಕಾರ್ಯತಂತ್ರವನ್ನು ಸೂಚಿಸುವ ವಿವರವಾದ ಪ್ರಸ್ತಾಪವನ್ನು ನಾನು ಮುಂದಿಟ್ಟಿದ್ದೇನೆ. ಆದರೆ ರಾಜ್ಯ ಬಿಜೆಪಿ ನನ್ನ ಈ ಪ್ರಸ್ತಾಪಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ಚಂದ್ರ ಬೋಸ್ ಅವರ ಹಲವಾರು ವಿಷಯಗಳ ಬಗ್ಗೆ ರಾಜ್ಯ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಚಂದ್ರ ಬೋಸ್​​ ಅವರ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ವಕ್ತಾರ ಸಮಿಕ್ ಭಟ್ಟಾಚಾರ್ಯ ಅವರು ಚಂದ್ರ ಬೋಸ್​​ ಅವರು 2019ರಲ್ಲಿ ಸಿಎಎಯನ್ನು ವಿರೋಧಿಸಿದ್ದಾರೆ. ಪಕ್ಷದ ನೀತಿ ನಿಯಮಗಳ ರೇಖೆಗೆ ವಿರುದ್ಧವಾಗಿದ್ದಾರೆ. ಸಾಕಷ್ಟು ಸಮಯದಿಂದ ಅವರು ಪಕ್ಷದ ಕಾರ್ಯಚಟುವಟಿಕೆಯಿಂದ ದೂರವಿದ್ದರು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Wed, 6 September 23

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ