AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ಉಪ ಚುನಾವಣೆ: ಹೆಚ್​ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್​

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಚಾರ ರಂಗೇರಿದೆ. ರಾಜ್ಯದ ಹಲವಾರು ನಾಯಕರು ತಂಡೋಪ ತಂಡವಾಗಿ ಚನ್ನಪಟ್ಟಣಕ್ಕೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ರವಿವಾರ ರಾತ್ರಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಚಿವ ಜಮೀರ್ ಅಹ್ಮದ್​ ​ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Nov 11, 2024 | 10:05 AM

Share

ರಾಮನಗರ, ನವೆಂಬರ್​ 11: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಚಿವ ಬಿ. ಝಡ್​. ಜಮೀರ್​ ಅಹ್ಮದ್​ ಖಾನ್ (Zameer Ahmed)​​ ಅವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾಷಣದ ಮಧ್ಯೆ “ಕರಿಯ ಕುಮಾರಸ್ವಾಮಿ” ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.

ರವಿವಾರ ರಾತ್ರಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ಇಳಿದಿದ್ದರು. ಪ್ರಚಾರ ಭಾಷಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್​​” ಎಂದು ಉರ್ದುವಿನಲ್ಲಿ ಹೇಳಿದರು.

ಇದನ್ನೂ ಓದಿ: ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಕುಮಾರಸ್ವಾಮಿ, ದೇವೇಗೌಡರಿಗೆ ಡಿಕೆಶಿ ಟಾಂಗ್​

ಜಮೀರ್ ಹೇಳಿಕೆ

“ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ‌ ಜೆಡಿಎಸ್​ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡೆ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ” ಎಂದು ವಾಗ್ದಾಳಿ ಮಾಡಿದ್ದಾರೆ.

ಜಮೀರ್​ ಅಹ್ಮದ್​ ಈ ಹಿಂದೆಯೂ ಇದೇ ರೀತಿಯಾದ ಹೇಳಿಕೆ ನೀಡಿದ್ದರು. 2021ರಲ್ಲಿ ಬೀದರ್​ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಬಹಿರಂಗ ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಜಮೀರ್​ ಅಹ್ಮದ್​ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:01 am, Mon, 11 November 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!