AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ

ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ ಆರೋಪಿಸಿದ್ದಾರೆ.

ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ: ಹೆಚ್​. ಡಿ ಕುಮಾರಸ್ವಾಮಿ ವಿರುದ್ಧ ಅಶ್ವತ್​ ನಾರಾಯಣ ಕಿಡಿ
ಸಚಿವ ಸಿ ಎನ್ ಅಶ್ವತ್​ನಾರಾಯಣ
TV9 Web
| Edited By: ವಿವೇಕ ಬಿರಾದಾರ|

Updated on:Oct 01, 2022 | 4:11 PM

Share

ಬೆಂಗಳೂರು: ನಮ್ಮ ರಾಮನಗರ ಜಿಲ್ಲೆಯಲ್ಲಿ ನಮ್ಮ ಬಿಜೆಪಿ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳನ್ನು ತಡೆಯಲು ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ವಾಮ ಮಾರ್ಗ ಅನುಸರಿಸುತ್ತಿರುವುದು ಖಂಡನೀಯ ಎಂದು ರಾಮನಗರ ಉಸ್ತುವಾರಿ ಸಚಿವ ಡಾ. ಸಿ ಎನ್​ ಅಶ್ವನಾರಾಯಣ (C N Ashwathnarayan) ಆರೋಪಿಸಿದ್ದಾರೆ. “ಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು ಎಂಬ ಸಿದ್ಧಾಂತಕ್ಕೆ ಕಟ್ಟುಬೀಳುವ ಬದಲು ನಾವು ಮಾಡುತ್ತಿರುವ ಜನಪರ ಕಾರ್ಯಗಳನ್ನು ಬೆಂಬಲಿಸಿ. ಮಾನ್ಯ ಕುಮಾರಸ್ವಾಮಿ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ. ಇದ್ದಷ್ಟು ದಿನ ಎಷ್ಟು ಜನಪರ ಕೆಲಸ ಮಾಡಿದ್ದೇವೆ ಎಂಬುದಷ್ಟೇ ಶಾಶ್ವತವಾಗಿ ಉಳಿಯುತ್ತದೆ ” ಎಂದು ಖಾರವಾಗಿ ಟ್ವೀಟ್​ ಮಾಡಿದ್ದಾರೆ.

ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿವೆ ಎಂಬುದು ನಿಮಗೂ ತಿಳಿದಿದೆ. ಆತ್ಮ ಸಾಕ್ಷಿಗೆ ವಿರುದ್ಧವಾದ ದ್ವೇಷದ ರಾಜಕಾರಣ ಬೇಡ ಎಂದು ಹೇಳಿದರು.

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ : ಸಿಎಂ ಬೊಮ್ಮಾಯಿ

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆದಿದ್ದು ಸರಿಯಲ್ಲ. ಈ ದಾಳಿಯನ್ನು ಕಟುವಾಗಿ ಖಂಡಿಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಭೈರಾಪಟ್ಟಣ ಬಳಿ ಬಿಜೆಪಿ ಎಂಎಲ್​ಸಿ ಯೋಗೇಶ್ವರ್​ ಕಾರಿನ ಮೇಲೆ ದಾಳಿ ಮಾಡಲಾಗಿದೆ. ವಿಷಯಗಳು ಏನೇ ಇರಲಿ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕು. ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಟ್ವೀಟ್​ ಮೂಲಕ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Sat, 1 October 22

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ