AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಕತ್​ ಇದ್ರೆ ಎಫ್​ಸಿಐ ಬಗ್ಗೆ ಚರ್ಚೆಗೆ ಬನ್ನಿ: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್

ಅಕ್ಕಿಗಾಗಿ ರಾಜಕೀಯ ಕಿತ್ತಾಟ ಮುಂದುವರಿದಿದ್ದು, ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್​ ತಿರುಗೇಟು ಕೊಟ್ಟಿದ್ದಾರೆ. ಅಲ್ಲದೇ ಅವರನ್ನು ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ.

ತಾಕತ್​ ಇದ್ರೆ ಎಫ್​ಸಿಐ ಬಗ್ಗೆ ಚರ್ಚೆಗೆ ಬನ್ನಿ: ಪ್ರತಾಪ್ ಸಿಂಹಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್
ಪ್ರತಾಪ್ ಸಿಂಹ- ಪ್ರದೀಪ್​ ಈಶ್ವರ್​
Follow us
ರಮೇಶ್ ಬಿ. ಜವಳಗೇರಾ
|

Updated on:Jun 23, 2023 | 12:16 PM

ಚಿಕ್ಕಬಳ್ಳಾಫುರ: ಮೊದಲ ಬಾರಿಗೆ ಗೆದ್ದಿರುವ ಶಾಸಕರಿಗೆ, ಗೊತ್ತಿಲ್ಲದವರಿಗೆ ಹಿರಿಯ ಶಾಸಕರು ಒರಿಯಂಟೇಶನ್ ಪ್ರೋಗ್ರಾಂ ನಡೆಸುವ ಅಗತ್ಯವಿದೆ ಎಂದಿದ್ದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ(Pratap Simha) ಚಿಕ್ಕಬಳ್ಳಾಫುರ ಶಾಸಕ ಪ್ರದೀಪ್​ ಈಶ್ವರ್​ (Pradeep Eshwar) ತಿರುಗೇಟು ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು(ಜೂನ್ 23) ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ (Siddaramaiah), ಎಂ.ಬಿ.ಪಾಟೀಲ್ (MB Patil)ಬಗ್ಗೆ ವೈಯಕ್ತಿಕ ಹೇಳಿಕೆ ಕೊಡುತ್ತಿದ್ದಾರೆ. ವಿಷಯಾಧಾರಿತ ಬಿಟ್ಟು ವೈಯಕ್ತಿಕ ವಿಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಾಪ್ ಸಿಂಹ ಅವರೇ ನೀವು ಪತ್ರಕರ್ತರಾಗಿದ್ದಾಗ ಸ್ವಲ್ಪ ಓದುತ್ತಿದ್ರಿ. ಸಂಸದರಾದ ಮೇಲೆ ಓದುವುದೇ ಬಿಟ್ಟಿದ್ದೀರಿ. ನಿಮಗೆ ತಾಕತ್​ ಇದ್ದರೆ ಎಫ್​ಸಿಐ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು​ ಹಾಕಿದರು.

ಇದನ್ನೂ ಓದಿ: ಕೇಂದ್ರ ಗೃಹ ಅಮಿತ್​ ಶಾ ಭೇಟಿಯಾಗಿ ಒಂದು ಪ್ರಮುಖ ಬೇಡಿಕೆ ಇಟ್ಟ ಸಿದ್ದರಾಮಯ್ಯ: ಏನದು?

ಸೋಲಿನ ಭೀತಿಯಿಂದ ಪ್ರತಾಪ್ ಸಿಂಹ ಏನೇನೋ ಮಾತನಾಡುತ್ತಾರೆ. ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಆಗುತ್ತೇನ್ರಿ? ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡೇ ಗೆದ್ದಿದ್ದೀರಿ. ನಿಮ್ಮ ವೈಯಕ್ತಿಕ ವರ್ಚಸ್ಸು ಏನು, ನಿಮ್ಮ ಸಾಧನೆ ಏನು ಹೇಳಿ? ನೀವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಮಾತನಾಡುತ್ತೀರಿ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಪ್ರತಾಪ್ ಏನೇನೋ ಮಾತನಾಡುತ್ತಿದ್ದಾರೆ ಶಾಸಕ ಪ್ರದೀಪ್​ ಈಶ್ವರ್​ ವಾಗ್ದಾಳಿ ನಡೆಸಿದರು.

ಫುಡ್ ಕಾರ್ಪೊರೇಷನ್ ಇಂಡಿಯಾಗೆ ಒಂದು ಇತಿಹಾಸ ಇದೆ. ಅದಕ್ಕೆ ದೊಡ್ಡ ವ್ಯವಸ್ಥೆ ಇದೆ. ಅಲ್ಲಿ ಶೇಖರಣೆಯಾಗುವ ದವಸ ಧಾನ್ಯ ಬಡವರಿಗೆ ತಲುಪಿಸಬೇಕಾಗಿರುವುದು ಅದರ ಜವಾಬ್ದಾರಿ. ಅದೆ ರೀತಿಯಾಗಿ ಫುಡ್ ಕಾರ್ಪೊರೇಷನ್ ಇಂಡಿಯಾ ಹಕ್ಕಿ ಕೊಡುತ್ತೇವೆ ಎಂದು ಹೇಳಿತ್ತು. ಅದಕ್ಕೆ ಹಣ ಕಟ್ಟಿ ಅಂತ ಹೇಳಿತ್ತು, ಇದನ್ನು ಗೊಡನ್ನಾ ಎಂದು ಕರಿತರಲ್ಲ ಇಂಥವರಿಗೆ ಏನು ಹೇಳಬೇಕು. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಬೈದರೆ ಸ್ಥಾನಮಾನ ಸಿಗುತ್ತದೆ ಎಂಬ ಭ್ರಮೆಯಲ್ಲಿ ಪ್ರತಾಪ್​​ಸಿಂಹ ಇದ್ದಾರೆ. ಹಾಗಾಗಿ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್​​ರನ್ನು ಬೈಯ್ಯುತ್ತಿದ್ದಾರೆ ಎಂದು ಕಿಡಿಕಾರಿದರು.

ಪುಡ್ ಕಾರ್ಪೋರೇಷನ್ ಆಪ್ ಇಂಡಿಯಾ ಅಕ್ಕಿ ಕೊಡದಿರುವುದರ ಹಿಂದೆ ರಾಜ್ಯ ಬಿಜೆಪಿ ನಾಯಕರ ಕೈವಾಡ ಇದೆ. ರಾಜ್ಯ ಸರ್ಕಾರ ಜನರಿಗೆ ಅಕ್ಕಿ ಕೊಟ್ಟರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತೆ. ರಾಜಕೀಯ ಕುತಂತ್ರದಿಂದ ಕೇಂದ್ರದ ಅಕ್ಕಿ ರಾಜ್ಯಕ್ಕೆ ಬರದಿರುವಂತೆ ತಡೆಯಲಾಗಿದೆ. ರಾಜ್ಯ ಸರ್ಕಾರ ಅಕ್ಕಿ ಕೊಡಬಾರದು ಬಿಜೆಪಿಯವರ ಪ್ರತಿಭಟನೆ ಯಶಸ್ವಿಯಾಗಬೇಕು ಎನ್ನುವುದು ಅವರ ಧೋರಣೆ. ಇದರ ಹಿಂದೆ ರಾಜ್ಯ ಬಿಜೆಪಿ ಸಂಸದರ ಕುತಂತ್ರ ಇದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುವ ಭಿತಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ಇದೇ ವೇಳೆ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರವನ್ನ ಸಿಂಗಾಪುರ ಮಾಡುವುದಕ್ಕೆ ಆಗಲ್ಲ. ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರ ಆಗುವುದಕ್ಕೆ ಇನ್ನೂ 20 ವರ್ಷಗಳು ಬೇಕು. ಚಿಕ್ಕಬಳ್ಳಾಪುರದಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಇಷ್ಟು ವರ್ಷಗಳ ಕಾಲ ಶಾಸಕರು ಆಗಿದ್ದವರು ಏನ್ ಮಾಡಿದ್ದಾರೋ ಗೊತ್ತಿಲ್ಲ. ಹಿಂದಿನ ಶಾಸಕರ ಭ್ರಷ್ಟಾಚಾರ ಮಾಡಿದ್ದಕ್ಕೆ ನನ್ನನ್ನು ಜೈಲಿಗೆ ಹಾಕಿಸಿದ್ದರು. ನನಗೆ ಟಾರ್ಚರ್ ಕೊಟ್ಟಿದ್ದಕ್ಕೆ ಇಂದು ನಾನು ಶಾಸಕ ಆಗಿದ್ದೇನ. ನನ್ನಂತವರು ಸಮಾಜದಲ್ಲಿ ತುಂಬಾ ವಿರಳ. ನಗರದಲ್ಲಿರುವ ಒಂದೊಂದೆ ಸಮಸ್ಯೆಗಳನ್ನು ಬಗೆಯರಿಸುತ್ತೇನೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:14 pm, Fri, 23 June 23

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?