AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ ಬಿಚ್ಚಿದ್ರೆ ಕಟ್ ಮಾಡ್ತೇನೆ, ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ: ಸುಧಾಕರ್​ ಬೆಂಬಲಿಗರಿಗೆ ಪ್ರದೀಪ್ ಈಶ್ವರ್ ಸವಾಲ್

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಚಿವ ಸುಧಾಕರ್ ನಡುವಿನ ವಾಕ್ಸಮರ ಮುಂದುವರಿದಿದ್ದು, ಇದರ ಮಧ್ಯೆ ಸುಧಾಕರ್ ಬೆಂಗಬಲಿಗರಿಗ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಾಲ ಬಿಚ್ಚಿದ್ರೆ ಕಟ್ ಮಾಡ್ತೇನೆ, ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ: ಸುಧಾಕರ್​ ಬೆಂಬಲಿಗರಿಗೆ ಪ್ರದೀಪ್ ಈಶ್ವರ್ ಸವಾಲ್
ಸುಧಾಕರ್-ಪ್ರದೀಪ್ ಈಶ್ವರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 30, 2023 | 4:55 PM

Share

ಚಿಕ್ಕಬಳ್ಳಾಪುರ, (ಜುಲೈ 30): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023 ಮುಗಿದೆ. ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದೂ 2 ತಿಂಗಳೂ ಆಯ್ತು. ಆದ್ರೆ, ಚಿಕ್ಕಬಳ್ಳಾಪುರದಲ್ಲಿ(Chikkaballapur) ಮಾತ್ರ ಶಾಸಕ ವರ್ಸಸ್ ಮಾಜಿ ಸಚಿವರ ನಡುವಿನ ವಾಕ್ಸಮರ ಮಾತ್ರ ನಿಂತಿಲ್ಲ. ಡಾ.ಕೆ.ಸುಧಾಕರ್ (Dr K Sudhakar) ಮತ್ತು ಶಾಸಕ ಪ್ರದೀಪ್ ಈಶ್ವರ್  (Pradeep Eshwar)ನಡುವಿನ ಸವಾಲಿನ ಸಮರ ಜೋರಾಗಿದ್ದು, ಇವತ್ತೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಗುಡುಗಿದ್ದಾರೆ. ಇಂದು (ಜುಲೈ 30) ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು.

ಇದನ್ನೂ ಓದಿ: Chikkaballapur News: ಹಾಲಿ ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕ ಡಾ.ಕೆ.ಸುಧಾಕರ್ ಬೆಂಬಲಿಗರಿಂದ ಪರಸ್ಪರ ದೂರು ದಾಖಲು

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ. ಮಾಜಿ ಸಚಿವ ಕೆ. ಸುಧಾಕರ್ ಗೆ ಶಾಸಕ ಪ್ರದೀಪ್ ಈಶ್ವರ್ ಮತ್ತೆ ಸವಾಲು. ನಾನು ದ್ವೇಷ ರಾಜಕಾರಣ, ಗೂಂಡಾಗಿರಿ ರಾಜಕಾರಣ ಮಾಡಲ್ಲ, ಆದ್ರೆ ಗೂಂಡಾಗಿರಿ ರಾಜಕಾರಣ ಮಾಡುವರನ್ನು ಬಿಡಲ್ಲ. ಕ್ಷೇತ್ರದಲ್ಲಿ ನನಗೆ ಸಿಕ್ಕ ಜನ ಬೆಂಬಲ ನೋಡಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಡಾ.ಕೆ.ಸುಧಾಕರ್​ ಸುಳ್ಳು ದೂರು ಕೊಡಿಸಿ ಗಲಭೆ ಸೃಷ್ಟಿಸುತ್ತಿದ್ದಾರೆ. ಐದು ವರ್ಷದಲ್ಲಿ ಚಿಕ್ಕಬಳ್ಳಾಪುರವನ್ನು ಮಾದರಿ ಕ್ಷೇತ್ರ ಮಾಡುತ್ತೇನೆ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ.​ ಪರ, ವಿರೋಧ ದೂರು ನೀಡಿದ್ದಾರೆ, ತನಿಖೆ ಆಗಿ ಸತ್ಯ ತಿಳಿಯಲಿ ಎಂದು ಸುಧಾಕರ್ ವಿರುದ್ಧ ಮತ್ತೆ ಶಾಸಕ ವಾಗ್ದಾಳಿ ನಡೆಸಿದರು.

ಬೇರೆ ಶಾಸಕರುಗಳ ರೀತಿ ನನಗೆ ರಾಜಕೀಯ ಅಭದ್ರತೆ ಇಲ್ಲ. ನಾನು ಶಾಸಕನಾಗಿದ್ದೆ ಲಾಟರಿ. ನಾನು ಯಾವುದೆ ರಾಜಕೀಯ ಗಿಮಿಕ್ ಮಾಡಲ್ಲ. ಮುಂದೆ ಯಾರಾದರೂ ಒಳ್ಳೆ ಕೆಲಸ ಮಾಡುತ್ತಾರೆ ಅಂದ್ರೆ ಅವರಿಗೆ ಓಟು ಹಾಕಿ ಗೆಲ್ಲಿಸಿ. ನಾನು ಒಳ್ಳೆ ಕೆಲಸ ಮಾಡಿದ್ರೆ ಮುಂದೆ ನನ್ನನ್ನು ಗೆಲ್ಲಿಸಿ. ಬೇರೆಯವರ ರೀತಿ ನಾನು 20-30 ವರ್ಷ ಕಡಿದು ಕಟ್ಟೆ ಹಾಕುತ್ತೇನೆ ಅಂತ ಹೇಳಲ್ಲ. ಕ್ಷೇತ್ರದಲ್ಲಿ ತಪ್ಪು ಯಾರು ಮಾಡಿದರೂ ತಪ್ಪೆ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ. ಪರ ವಿರೋಧ ದೂರು ನೀಡಿದ್ದಾರೆ. ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ