Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ ಬಿಚ್ಚಿದ್ರೆ ಕಟ್ ಮಾಡ್ತೇನೆ, ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ: ಸುಧಾಕರ್​ ಬೆಂಬಲಿಗರಿಗೆ ಪ್ರದೀಪ್ ಈಶ್ವರ್ ಸವಾಲ್

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಚಿವ ಸುಧಾಕರ್ ನಡುವಿನ ವಾಕ್ಸಮರ ಮುಂದುವರಿದಿದ್ದು, ಇದರ ಮಧ್ಯೆ ಸುಧಾಕರ್ ಬೆಂಗಬಲಿಗರಿಗ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಾಲ ಬಿಚ್ಚಿದ್ರೆ ಕಟ್ ಮಾಡ್ತೇನೆ, ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ: ಸುಧಾಕರ್​ ಬೆಂಬಲಿಗರಿಗೆ ಪ್ರದೀಪ್ ಈಶ್ವರ್ ಸವಾಲ್
ಸುಧಾಕರ್-ಪ್ರದೀಪ್ ಈಶ್ವರ್
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ

Updated on: Jul 30, 2023 | 4:55 PM

ಚಿಕ್ಕಬಳ್ಳಾಪುರ, (ಜುಲೈ 30): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023 ಮುಗಿದೆ. ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದೂ 2 ತಿಂಗಳೂ ಆಯ್ತು. ಆದ್ರೆ, ಚಿಕ್ಕಬಳ್ಳಾಪುರದಲ್ಲಿ(Chikkaballapur) ಮಾತ್ರ ಶಾಸಕ ವರ್ಸಸ್ ಮಾಜಿ ಸಚಿವರ ನಡುವಿನ ವಾಕ್ಸಮರ ಮಾತ್ರ ನಿಂತಿಲ್ಲ. ಡಾ.ಕೆ.ಸುಧಾಕರ್ (Dr K Sudhakar) ಮತ್ತು ಶಾಸಕ ಪ್ರದೀಪ್ ಈಶ್ವರ್  (Pradeep Eshwar)ನಡುವಿನ ಸವಾಲಿನ ಸಮರ ಜೋರಾಗಿದ್ದು, ಇವತ್ತೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಗುಡುಗಿದ್ದಾರೆ. ಇಂದು (ಜುಲೈ 30) ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು.

ಇದನ್ನೂ ಓದಿ: Chikkaballapur News: ಹಾಲಿ ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕ ಡಾ.ಕೆ.ಸುಧಾಕರ್ ಬೆಂಬಲಿಗರಿಂದ ಪರಸ್ಪರ ದೂರು ದಾಖಲು

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ. ಮಾಜಿ ಸಚಿವ ಕೆ. ಸುಧಾಕರ್ ಗೆ ಶಾಸಕ ಪ್ರದೀಪ್ ಈಶ್ವರ್ ಮತ್ತೆ ಸವಾಲು. ನಾನು ದ್ವೇಷ ರಾಜಕಾರಣ, ಗೂಂಡಾಗಿರಿ ರಾಜಕಾರಣ ಮಾಡಲ್ಲ, ಆದ್ರೆ ಗೂಂಡಾಗಿರಿ ರಾಜಕಾರಣ ಮಾಡುವರನ್ನು ಬಿಡಲ್ಲ. ಕ್ಷೇತ್ರದಲ್ಲಿ ನನಗೆ ಸಿಕ್ಕ ಜನ ಬೆಂಬಲ ನೋಡಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಡಾ.ಕೆ.ಸುಧಾಕರ್​ ಸುಳ್ಳು ದೂರು ಕೊಡಿಸಿ ಗಲಭೆ ಸೃಷ್ಟಿಸುತ್ತಿದ್ದಾರೆ. ಐದು ವರ್ಷದಲ್ಲಿ ಚಿಕ್ಕಬಳ್ಳಾಪುರವನ್ನು ಮಾದರಿ ಕ್ಷೇತ್ರ ಮಾಡುತ್ತೇನೆ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ.​ ಪರ, ವಿರೋಧ ದೂರು ನೀಡಿದ್ದಾರೆ, ತನಿಖೆ ಆಗಿ ಸತ್ಯ ತಿಳಿಯಲಿ ಎಂದು ಸುಧಾಕರ್ ವಿರುದ್ಧ ಮತ್ತೆ ಶಾಸಕ ವಾಗ್ದಾಳಿ ನಡೆಸಿದರು.

ಬೇರೆ ಶಾಸಕರುಗಳ ರೀತಿ ನನಗೆ ರಾಜಕೀಯ ಅಭದ್ರತೆ ಇಲ್ಲ. ನಾನು ಶಾಸಕನಾಗಿದ್ದೆ ಲಾಟರಿ. ನಾನು ಯಾವುದೆ ರಾಜಕೀಯ ಗಿಮಿಕ್ ಮಾಡಲ್ಲ. ಮುಂದೆ ಯಾರಾದರೂ ಒಳ್ಳೆ ಕೆಲಸ ಮಾಡುತ್ತಾರೆ ಅಂದ್ರೆ ಅವರಿಗೆ ಓಟು ಹಾಕಿ ಗೆಲ್ಲಿಸಿ. ನಾನು ಒಳ್ಳೆ ಕೆಲಸ ಮಾಡಿದ್ರೆ ಮುಂದೆ ನನ್ನನ್ನು ಗೆಲ್ಲಿಸಿ. ಬೇರೆಯವರ ರೀತಿ ನಾನು 20-30 ವರ್ಷ ಕಡಿದು ಕಟ್ಟೆ ಹಾಕುತ್ತೇನೆ ಅಂತ ಹೇಳಲ್ಲ. ಕ್ಷೇತ್ರದಲ್ಲಿ ತಪ್ಪು ಯಾರು ಮಾಡಿದರೂ ತಪ್ಪೆ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ. ಪರ ವಿರೋಧ ದೂರು ನೀಡಿದ್ದಾರೆ. ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್