AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ ಬಿಚ್ಚಿದ್ರೆ ಕಟ್ ಮಾಡ್ತೇನೆ, ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ: ಸುಧಾಕರ್​ ಬೆಂಬಲಿಗರಿಗೆ ಪ್ರದೀಪ್ ಈಶ್ವರ್ ಸವಾಲ್

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಚಿವ ಸುಧಾಕರ್ ನಡುವಿನ ವಾಕ್ಸಮರ ಮುಂದುವರಿದಿದ್ದು, ಇದರ ಮಧ್ಯೆ ಸುಧಾಕರ್ ಬೆಂಗಬಲಿಗರಿಗ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬಾಲ ಬಿಚ್ಚಿದ್ರೆ ಕಟ್ ಮಾಡ್ತೇನೆ, ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ: ಸುಧಾಕರ್​ ಬೆಂಬಲಿಗರಿಗೆ ಪ್ರದೀಪ್ ಈಶ್ವರ್ ಸವಾಲ್
ಸುಧಾಕರ್-ಪ್ರದೀಪ್ ಈಶ್ವರ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ರಮೇಶ್ ಬಿ. ಜವಳಗೇರಾ|

Updated on: Jul 30, 2023 | 4:55 PM

Share

ಚಿಕ್ಕಬಳ್ಳಾಪುರ, (ಜುಲೈ 30): ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023 ಮುಗಿದೆ. ಕಾಂಗ್ರೆಸ್​ ಸರ್ಕಾರ ಅಸ್ತಿತ್ವಕ್ಕೆ ಬಂದೂ 2 ತಿಂಗಳೂ ಆಯ್ತು. ಆದ್ರೆ, ಚಿಕ್ಕಬಳ್ಳಾಪುರದಲ್ಲಿ(Chikkaballapur) ಮಾತ್ರ ಶಾಸಕ ವರ್ಸಸ್ ಮಾಜಿ ಸಚಿವರ ನಡುವಿನ ವಾಕ್ಸಮರ ಮಾತ್ರ ನಿಂತಿಲ್ಲ. ಡಾ.ಕೆ.ಸುಧಾಕರ್ (Dr K Sudhakar) ಮತ್ತು ಶಾಸಕ ಪ್ರದೀಪ್ ಈಶ್ವರ್  (Pradeep Eshwar)ನಡುವಿನ ಸವಾಲಿನ ಸಮರ ಜೋರಾಗಿದ್ದು, ಇವತ್ತೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಗುಡುಗಿದ್ದಾರೆ. ಇಂದು (ಜುಲೈ 30) ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು.

ಇದನ್ನೂ ಓದಿ: Chikkaballapur News: ಹಾಲಿ ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕ ಡಾ.ಕೆ.ಸುಧಾಕರ್ ಬೆಂಬಲಿಗರಿಂದ ಪರಸ್ಪರ ದೂರು ದಾಖಲು

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ. ಮಾಜಿ ಸಚಿವ ಕೆ. ಸುಧಾಕರ್ ಗೆ ಶಾಸಕ ಪ್ರದೀಪ್ ಈಶ್ವರ್ ಮತ್ತೆ ಸವಾಲು. ನಾನು ದ್ವೇಷ ರಾಜಕಾರಣ, ಗೂಂಡಾಗಿರಿ ರಾಜಕಾರಣ ಮಾಡಲ್ಲ, ಆದ್ರೆ ಗೂಂಡಾಗಿರಿ ರಾಜಕಾರಣ ಮಾಡುವರನ್ನು ಬಿಡಲ್ಲ. ಕ್ಷೇತ್ರದಲ್ಲಿ ನನಗೆ ಸಿಕ್ಕ ಜನ ಬೆಂಬಲ ನೋಡಿ ಸಹಿಸಿಕೊಳ್ಳಲು ಆಗುತ್ತಿಲ್ಲ. ಡಾ.ಕೆ.ಸುಧಾಕರ್​ ಸುಳ್ಳು ದೂರು ಕೊಡಿಸಿ ಗಲಭೆ ಸೃಷ್ಟಿಸುತ್ತಿದ್ದಾರೆ. ಐದು ವರ್ಷದಲ್ಲಿ ಚಿಕ್ಕಬಳ್ಳಾಪುರವನ್ನು ಮಾದರಿ ಕ್ಷೇತ್ರ ಮಾಡುತ್ತೇನೆ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ.​ ಪರ, ವಿರೋಧ ದೂರು ನೀಡಿದ್ದಾರೆ, ತನಿಖೆ ಆಗಿ ಸತ್ಯ ತಿಳಿಯಲಿ ಎಂದು ಸುಧಾಕರ್ ವಿರುದ್ಧ ಮತ್ತೆ ಶಾಸಕ ವಾಗ್ದಾಳಿ ನಡೆಸಿದರು.

ಬೇರೆ ಶಾಸಕರುಗಳ ರೀತಿ ನನಗೆ ರಾಜಕೀಯ ಅಭದ್ರತೆ ಇಲ್ಲ. ನಾನು ಶಾಸಕನಾಗಿದ್ದೆ ಲಾಟರಿ. ನಾನು ಯಾವುದೆ ರಾಜಕೀಯ ಗಿಮಿಕ್ ಮಾಡಲ್ಲ. ಮುಂದೆ ಯಾರಾದರೂ ಒಳ್ಳೆ ಕೆಲಸ ಮಾಡುತ್ತಾರೆ ಅಂದ್ರೆ ಅವರಿಗೆ ಓಟು ಹಾಕಿ ಗೆಲ್ಲಿಸಿ. ನಾನು ಒಳ್ಳೆ ಕೆಲಸ ಮಾಡಿದ್ರೆ ಮುಂದೆ ನನ್ನನ್ನು ಗೆಲ್ಲಿಸಿ. ಬೇರೆಯವರ ರೀತಿ ನಾನು 20-30 ವರ್ಷ ಕಡಿದು ಕಟ್ಟೆ ಹಾಕುತ್ತೇನೆ ಅಂತ ಹೇಳಲ್ಲ. ಕ್ಷೇತ್ರದಲ್ಲಿ ತಪ್ಪು ಯಾರು ಮಾಡಿದರೂ ತಪ್ಪೆ. ಸುಧಾಕರ್ ರೀತಿಯಲ್ಲಿ ನಾನು ತಪ್ಪು ಮಾಡಲ್ಲ. ಪರ ವಿರೋಧ ದೂರು ನೀಡಿದ್ದಾರೆ. ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್