AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆ ಚುಕ್ಕಿ, ಹಳದಿ ರೋಗಕ್ಕೆ ಲ್ಯಾಬ್ ಓಪನ್ ಮಾಡುವ‌ ಪ್ರಕ್ರಿಯೆ ಚಾಲ್ತಿಯಲ್ಲಿದೆ: ಜೆ.ಪಿ.ನಡ್ಡಾ

Karnataka Election 2023: 1982 ರಲ್ಲೇ 62 ಕಿ.ಮೀ. ಪದಾಯಾತ್ರೆ ಮಾಡಿದ್ದು ಯಡಿಯೂರಪ್ಪ. ಅಡಕೆ ಬೆಳೆಗಾರರ ಬಗ್ಗೆ ಪಾದಯಾತ್ರೆ ಮಾಡಿದ ಏಕೈಕ ನಾಯಕ ಎಂದರೆ ಅದು ಯಡಿಯೂರಪ್ಪ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಎಲೆ ಚುಕ್ಕಿ, ಹಳದಿ ರೋಗಕ್ಕೆ ಲ್ಯಾಬ್ ಓಪನ್ ಮಾಡುವ‌ ಪ್ರಕ್ರಿಯೆ ಚಾಲ್ತಿಯಲ್ಲಿದೆ: ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾImage Credit source: IANS Photo
Rakesh Nayak Manchi
|

Updated on:Feb 20, 2023 | 7:16 PM

Share

ಚಿಕ್ಕಮಗಳೂರು: ಅಡಕೆ (Arecanut) ಕೃಷಿಗೆ ಭಾದಿಸಿದ ಎಲೆ ಚುಕ್ಕಿ, ಹಳದಿ ರೋಗಕ್ಕೆ (Arecanut diseases) ಲ್ಯಾಬ್ ಓಪನ್ ಮಾಡುವ‌ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಹೇಳಿದರು. ಜಿಲ್ಲೆಯ ಕೊಪ್ಪದಲ್ಲಿ ನಡೆದ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಎಲೆಚುಕ್ಕಿ ರೋಗದ ನಿಯಂತ್ರಣಕ್ಕೆ ಕರ್ನಾಟಕ ಬಜೆಟ್​ನಲ್ಲಿ 25 ಕೋಟಿ ಅನುದಾನ ಮೀಸಲಿಟ್ಟು, ಸಂಶೋಧನೆ ಆರಂಭಿಸದ್ದೇವೆ. ತೀರ್ಥಹಳ್ಳಿ-ಶೃಂಗೇರಿಗೆ 10 ಕೋಟಿ ಹಣ ನೀಡಿ ರೋಗದ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದ್ದೇವೆ. ಅಡಕೆ ಹಾಗೂ ನಿಮ್ಮ ರಕ್ಷಣೆಗೆ ಎಲ್ಲಾ‌ ಸಮಯದಲ್ಲೂ ನಿಮ್ಮ ಜೊತೆ ಇರುತ್ತವೆ ಎಂದು ಭರವಸೆ ನೀಡಿದರು. ಅಲ್ಲದೆ, ನಮ್ಮ ದೇಶದಲ್ಲಿ ಕಳ್ಳ ಅಡಕೆ ಮಾರಾಟಕ್ಕೆ ಅವಕಾಶ ಇಲ್ಲ ಎಂದರು.

1982 ರಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಡಕೆ ಬೆಳೆಗಾರರ ಬಗ್ಗೆ 62 ಕಿ.ಮೀ. ಪದಾಯಾತ್ರೆ ನಡೆಸಿದ್ದರು. ಹೀಗೆ ಅಡಕೆ ಬೆಳೆಗಾರರ ಬಗ್ಗೆ ಪಾದಯಾತ್ರೆ ಮಾಡಿದ ಏಕೈಕ ನಾಯಕನೆಂದರೆ ಅದು ಯಡಿಯೂರಪ್ಪ ಮಾತ್ರ ಎಂದು ಹಾಡಿಹೊಗಳಿದ ನಡ್ಡಾ, 2014ರಲ್ಲಿ ನಾವು ಕೇವಲ 2 ಮೆಗಾ ಪಾರ್ಕ್‌ ಹೊಂದಿದ್ದೆವು. ಇಂದು 22 ಮೆಗಾ ಪಾರ್ಕ್ ಗಳಿವೆ. ಕರ್ನಾಟಕದಲ್ಲಿ 2017ರಲ್ಲಿ 2 ಲಕ್ಷದ 79 ಸಾವಿರ ಎಕರೆ ಅಡಕೆ ಇತ್ತು. ಇಂದು 5 ಲಕ್ಷ 41 ಸಾವಿರ ಎಕರೆಯಲ್ಲಿ ಅಡಕೆ ಬೆಳೆಯುತ್ತಿದ್ದಾರೆ. ಅದರಂತೆ ಶೇಕಡ 78 ರಷ್ಟು ಅಡಿಕೆ ಬೆಳೆಗಾರರ ಸಂಖ್ಯೆ ಹೆಚ್ಚಾಗಿದೆ ಎಂದರು.

ಇದನ್ನೂ ಓದಿ: ಹೇಳಿದ್ದನ್ನು ಮಾಡುವ ತಾಕತ್ತು ಬಿಜೆಪಿ ಜನಪ್ರತಿನಿಧಿಗಳಿಗೆ ಮಾತ್ರ ಇದೆ: ಉಡುಪಿಯಲ್ಲಿ ಜೆ.ಪಿ.ನಡ್ಡಾ ಹೇಳಿಕೆ

ನಾವು ಏನೇ ಮಾತನಾಡಿದರು ಅಂಕಿ ಅಂಶಗಳ ಆಧಾರದ ಮೇಲೆ ಮಾತನಾಡುತ್ತೇವೆ. ಮಾಧ್ಯಮದವರು ಇದ್ದಾರೆ ನಾವು ಅಂಕಿಅಂಶಗಳ ಆಧಾರದ ಮೇಲೆ ಮಾತನಾಡಬೇಕು ಎಂದು ಹೇಳಿದ ನಡ್ಡಾ, ಅಡಕೆ ಬೆಳೆಗಾರರ ಬೆನ್ನಿಗೆ ನಿಂತಿರುವುದು ಕೇವಲ ಬಿಜೆಪಿ ಮಾತ್ರ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಡಕೆ ಬೆಳೆಗಾರರ ಪರ ಇದೆ. ಕೆಲವರು ನಾವು ರೈತರು, ಕಿಸಾನ್ ಮುಖಂಡರು ಎಂದು ಹೇಳುತ್ತಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪ್ರಧಾನಿ ನರೇಂದ್ರ ಮೋದಿ ನಿಜವಾದ ರೈತ ಮುಖಂಡ ಎಂದರು. ಕೊಪ್ಪಕ್ಕೆ ಬಂದಿರುವುದು ನನ್ನ ಸೌಭಾಗ್ಯ. ಇಲ್ಲಿನ ವಾತಾವರಣ ತುಂಬಾ ಚೆನ್ನಾಗಿದೆ. ಈ ಪವಿತ್ರ ಸ್ಥಳಕ್ಕೆ ಬಂದಿರುವುದು ನನ್ನ ಪುಣ್ಯ. ಶೃಂಗೇರಿ ಶಾರದಾಂಭೆ ಪಾದಗಳಿಗೂ ನಮಿಸುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Mon, 20 February 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ