AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲೆ ಚುಕ್ಕಿ, ಹಳದಿ ರೋಗಕ್ಕೆ ಲ್ಯಾಬ್ ಓಪನ್ ಮಾಡುವ‌ ಪ್ರಕ್ರಿಯೆ ಚಾಲ್ತಿಯಲ್ಲಿದೆ: ಜೆ.ಪಿ.ನಡ್ಡಾ

Karnataka Election 2023: 1982 ರಲ್ಲೇ 62 ಕಿ.ಮೀ. ಪದಾಯಾತ್ರೆ ಮಾಡಿದ್ದು ಯಡಿಯೂರಪ್ಪ. ಅಡಕೆ ಬೆಳೆಗಾರರ ಬಗ್ಗೆ ಪಾದಯಾತ್ರೆ ಮಾಡಿದ ಏಕೈಕ ನಾಯಕ ಎಂದರೆ ಅದು ಯಡಿಯೂರಪ್ಪ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಎಲೆ ಚುಕ್ಕಿ, ಹಳದಿ ರೋಗಕ್ಕೆ ಲ್ಯಾಬ್ ಓಪನ್ ಮಾಡುವ‌ ಪ್ರಕ್ರಿಯೆ ಚಾಲ್ತಿಯಲ್ಲಿದೆ: ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾImage Credit source: IANS Photo
Rakesh Nayak Manchi
Rakesh Nayak Manchi|

Updated on:Feb 20, 2023 | 7:16 PM

Share

ಚಿಕ್ಕಮಗಳೂರು: ಅಡಕೆ (Arecanut) ಕೃಷಿಗೆ ಭಾದಿಸಿದ ಎಲೆ ಚುಕ್ಕಿ, ಹಳದಿ ರೋಗಕ್ಕೆ (Arecanut diseases) ಲ್ಯಾಬ್ ಓಪನ್ ಮಾಡುವ‌ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P.Nadda) ಹೇಳಿದರು. ಜಿಲ್ಲೆಯ ಕೊಪ್ಪದಲ್ಲಿ ನಡೆದ ಅಡಕೆ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಎಲೆಚುಕ್ಕಿ ರೋಗದ ನಿಯಂತ್ರಣಕ್ಕೆ ಕರ್ನಾಟಕ ಬಜೆಟ್​ನಲ್ಲಿ 25 ಕೋಟಿ ಅನುದಾನ ಮೀಸಲಿಟ್ಟು, ಸಂಶೋಧನೆ ಆರಂಭಿಸದ್ದೇವೆ. ತೀರ್ಥಹಳ್ಳಿ-ಶೃಂಗೇರಿಗೆ 10 ಕೋಟಿ ಹಣ ನೀಡಿ ರೋಗದ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿದ್ದೇವೆ. ಅಡಕೆ ಹಾಗೂ ನಿಮ್ಮ ರಕ್ಷಣೆಗೆ ಎಲ್ಲಾ‌ ಸಮಯದಲ್ಲೂ ನಿಮ್ಮ ಜೊತೆ ಇರುತ್ತವೆ ಎಂದು ಭರವಸೆ ನೀಡಿದರು. ಅಲ್ಲದೆ, ನಮ್ಮ ದೇಶದಲ್ಲಿ ಕಳ್ಳ ಅಡಕೆ ಮಾರಾಟಕ್ಕೆ ಅವಕಾಶ ಇಲ್ಲ ಎಂದರು.

1982 ರಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಡಕೆ ಬೆಳೆಗಾರರ ಬಗ್ಗೆ 62 ಕಿ.ಮೀ. ಪದಾಯಾತ್ರೆ ನಡೆಸಿದ್ದರು. ಹೀಗೆ ಅಡಕೆ ಬೆಳೆಗಾರರ ಬಗ್ಗೆ ಪಾದಯಾತ್ರೆ ಮಾಡಿದ ಏಕೈಕ ನಾಯಕನೆಂದರೆ ಅದು ಯಡಿಯೂರಪ್ಪ ಮಾತ್ರ ಎಂದು ಹಾಡಿಹೊಗಳಿದ ನಡ್ಡಾ, 2014ರಲ್ಲಿ ನಾವು ಕೇವಲ 2 ಮೆಗಾ ಪಾರ್ಕ್‌ ಹೊಂದಿದ್ದೆವು. ಇಂದು 22 ಮೆಗಾ ಪಾರ್ಕ್ ಗಳಿವೆ. ಕರ್ನಾಟಕದಲ್ಲಿ 2017ರಲ್ಲಿ 2 ಲಕ್ಷದ 79 ಸಾವಿರ ಎಕರೆ ಅಡಕೆ ಇತ್ತು. ಇಂದು 5 ಲಕ್ಷ 41 ಸಾವಿರ ಎಕರೆಯಲ್ಲಿ ಅಡಕೆ ಬೆಳೆಯುತ್ತಿದ್ದಾರೆ. ಅದರಂತೆ ಶೇಕಡ 78 ರಷ್ಟು ಅಡಿಕೆ ಬೆಳೆಗಾರರ ಸಂಖ್ಯೆ ಹೆಚ್ಚಾಗಿದೆ ಎಂದರು.

ಇದನ್ನೂ ಓದಿ: ಹೇಳಿದ್ದನ್ನು ಮಾಡುವ ತಾಕತ್ತು ಬಿಜೆಪಿ ಜನಪ್ರತಿನಿಧಿಗಳಿಗೆ ಮಾತ್ರ ಇದೆ: ಉಡುಪಿಯಲ್ಲಿ ಜೆ.ಪಿ.ನಡ್ಡಾ ಹೇಳಿಕೆ

ನಾವು ಏನೇ ಮಾತನಾಡಿದರು ಅಂಕಿ ಅಂಶಗಳ ಆಧಾರದ ಮೇಲೆ ಮಾತನಾಡುತ್ತೇವೆ. ಮಾಧ್ಯಮದವರು ಇದ್ದಾರೆ ನಾವು ಅಂಕಿಅಂಶಗಳ ಆಧಾರದ ಮೇಲೆ ಮಾತನಾಡಬೇಕು ಎಂದು ಹೇಳಿದ ನಡ್ಡಾ, ಅಡಕೆ ಬೆಳೆಗಾರರ ಬೆನ್ನಿಗೆ ನಿಂತಿರುವುದು ಕೇವಲ ಬಿಜೆಪಿ ಮಾತ್ರ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಡಕೆ ಬೆಳೆಗಾರರ ಪರ ಇದೆ. ಕೆಲವರು ನಾವು ರೈತರು, ಕಿಸಾನ್ ಮುಖಂಡರು ಎಂದು ಹೇಳುತ್ತಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪ್ರಧಾನಿ ನರೇಂದ್ರ ಮೋದಿ ನಿಜವಾದ ರೈತ ಮುಖಂಡ ಎಂದರು. ಕೊಪ್ಪಕ್ಕೆ ಬಂದಿರುವುದು ನನ್ನ ಸೌಭಾಗ್ಯ. ಇಲ್ಲಿನ ವಾತಾವರಣ ತುಂಬಾ ಚೆನ್ನಾಗಿದೆ. ಈ ಪವಿತ್ರ ಸ್ಥಳಕ್ಕೆ ಬಂದಿರುವುದು ನನ್ನ ಪುಣ್ಯ. ಶೃಂಗೇರಿ ಶಾರದಾಂಭೆ ಪಾದಗಳಿಗೂ ನಮಿಸುತ್ತೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Mon, 20 February 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ