AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಕಲ್ಲು, ದೊಣ್ಣೆಗಳಿಂದ ಹೊಡೆದಾಡಿಕೊಂಡ ಹೊಳಲ್ಕೆರೆ ಪುರಸಭೆ ಸದಸ್ಯರು, ಬೆಂಬಲಿಗರು

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪುರಸಭೆ ಸದಸ್ಯರು ಹಾಗೂ ಬೆಂಬಲಿಗರ ನಡುವೆ ಸಿನಿಮಾ ಶೈಲಿಯಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ. ನೀರಿನ ಟ್ಯಾಂಕ್ ವಿಚಾರವಾಗಿ ಪುರಸಭೆ ಸದಸ್ಯರಾದ ಕೆ.ಸಿ ರಮೇಶ್ ಹಾಗೂ ಸುಧಾ ಬಸವರಾಜ್ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕೆಲ ದಿನಗಳ ಹಿಂದೆ ನಡೆದ ಘರ್ಷಣೆಯ ವಿಡಿಯೋ ವೈರಲ್ ಆಗುತ್ತಿದೆ.

ಚಿತ್ರದುರ್ಗ: ಕಲ್ಲು, ದೊಣ್ಣೆಗಳಿಂದ ಹೊಡೆದಾಡಿಕೊಂಡ ಹೊಳಲ್ಕೆರೆ ಪುರಸಭೆ ಸದಸ್ಯರು, ಬೆಂಬಲಿಗರು
ಕಲ್ಲು, ದೊಣ್ಣೆಗಳಿಂದ ಹೊಡೆದಾಡಿಕೊಂಡ ಹೊಳಲ್ಕೆರೆ ಪುರಸಭೆ ಸದಸ್ಯರು, ಬೆಂಬಲಿಗರು
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Jan 11, 2024 | 8:32 AM

Share

ಚಿತ್ರದುರ್ಗ, ಜ,11: ಜಿಲ್ಲೆಯ (Chitradurga) ಹೊಳಲ್ಕೆರೆ ಪುರಸಭೆ (Holalkere municipal) ಸದಸ್ಯರು ಹಾಗೂ ಬೆಂಬಲಿಗರ ನಡುವೆ ಸಿನಿಮಾ ಶೈಲಿಯಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ. ನೀರಿನ ಟ್ಯಾಂಕ್ ವಿಚಾರವಾಗಿ ಪುರಸಭೆ ಸದಸ್ಯರಾದ ಕೆ.ಸಿ ರಮೇಶ್ ಹಾಗೂ ಸುಧಾ ಬಸವರಾಜ್ ಬೆಂಬಲಿಗರು ಪರಪಸ್ಪರ ಕಲ್ಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡಿದ್ದಾರೆ.

ಹೊಳಲ್ಕೆರೆ ಪಟ್ಟಣದಲ್ಲಿ ಎರಡು ಗುಂಪುಗಳ ಮಧ್ಯೆ ಕೆಲ ದಿನಗಳ ಹಿಂದೆ ಘರ್ಷಣೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೃಹಮಂಡಳಿ ಲೇಔಟ್​ನಲ್ಲಿರುವ ನೀರಿನ ಟ್ಯಾಂಕ್ ನೆಲಸಮ ಮಾಡುವ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ.

ಇದನ್ನೂ ಓದಿ: ಭಗವಂತ ಖೂಬಾಗೆ ಟಿಕೆಟ್ ವಿರೋಧಸಿದ ಪ್ರಭುಚೌಹಾಣ್; ಗದ್ದಲದ ನಡುವೆ ಬಿಜೆಪಿ ಸಭೆಯಿಂದ ಹೊರನಡೆದ ಖೂಬಾ

ಕೆ.ಸಿ.ರಮೇಶ ಅವರು ಹೊಳಲ್ಕೆರೆ ಮಾಜಿ ಶಾಸಕ ಹೆಚ್.ಆಂಜನೇಯ ಬೆಂಬಲಿಗರಾಗಿದ್ದು, ಬಿಜೆಪಿಯಿಂದ ಗೆದ್ದು ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬೆಂಬಲಿಸಿದ್ದರು. ಸುಧಾ ಬಸವರಾಜ್ ಅವರು ಬಿಜೆಪಿ ಶಾಸಕ‌ ಎಂ.ಚಂದ್ರಪ್ಪ ಬೆಂಬಲಿತರಾಗಿದ್ದಾರೆ. ಸದ್ಯ ಹಾಲಿ, ಮಾಜಿ ಶಾಸಕರ‌ ಬೆಂಬಲಿಗರ ಮುಸುಕಿನ ಗುದ್ದಾಟ ತಾರಕಕ್ಕೇರಿದೆ.

ಹೊಳಲ್ಕೆರೆ ತಹಶೀಲ್ದಾರ್ ಹಾಗೂ ಪುರಸಭೆ ಅಧಿಕಾರಿಗಳ ಎದುರಲ್ಲೇ ಎರಡು ಗುಂಪಿನ ಸದಸ್ಯರು ಹಾಗೂ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ‌ ದೂರು, ಪ್ರತಿದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು