AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thippareddy: ಮಂಜುನಾಥ್ ಮತ್ತು ನನ್ನ ಮಧ್ಯೆ ಮೊದಲಿನಿಂದಲೂ ದ್ವೇಷವಿದೆ, ಆತನಿಗೆ ಬೆದರಿಸುವ ಗುಣ ಇದೆ: ಶಾಸಕ ತಿಪ್ಪಾರೆಡ್ಡಿ

ಚಿತ್ರದುರ್ಗದ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ 25 % ಕಮಿಷನ್ ಆರೋಪ ಮಾಡಲಾಗಿದ್ದು, ಆಡಿಯೋ ಕೂಡ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ತಿಪ್ಪಾರೆಡ್ಡಿ ಅವರು ನೀಡಿದ ಪ್ರತಿಕ್ರಿಯೆ ಇಲ್ಲಿದೆ.

Thippareddy: ಮಂಜುನಾಥ್ ಮತ್ತು ನನ್ನ ಮಧ್ಯೆ ಮೊದಲಿನಿಂದಲೂ ದ್ವೇಷವಿದೆ, ಆತನಿಗೆ ಬೆದರಿಸುವ ಗುಣ ಇದೆ: ಶಾಸಕ ತಿಪ್ಪಾರೆಡ್ಡಿ
ಚಿತ್ರದುರ್ಗ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
TV9 Web
| Updated By: Rakesh Nayak Manchi|

Updated on:Jan 16, 2023 | 4:41 PM

Share

ಚಿತ್ರದುರ್ಗ: ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಮಂಜುನಾಥ್ ಹಾಗೂ ನನ್ನ ನಡುವೆ ಮೊದಲಿನಿಂದಲೂ ದ್ವೇಷವಿದೆ, ವೈಯಕ್ತಿಕ ವಿಚಾರಕ್ಕಾಗಿ ಆತ ಈ ರೀತಿ ಮಾಡಿರುವುದಾಗಿ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ (MLA G.H.Thippareddy) ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿರುದ್ಧ ಭ್ರಷ್ಟಾಚಾರ (Corruption) ಆರೋಪ ಮಾಡಿದ ಹಿನ್ನಲೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಚ್ಚಂಗಿ ಯಲ್ಲಮ್ಮ ದೇಗುಲ ಕಾಮಗಾರಿ ಕಳಪೆಯಾಗಿದೆ. ಅದನ್ನು ಈಗ ಆರೋಪಿಸುವುದು ಸರಿಯಲ್ಲ. ಎಲ್ಲಾ ಕಾಮಗಾರಿ ವೇಳೆ ಆತನೇ ಸುಪ್ರೀಂ ರೀತಿ ವರ್ತನೆ ಮಾಡುತ್ತಾನೆ. ನಾನು ಅಧ್ಯಕ್ಷ ಅಂತ ದೌರ್ಜನ್ಯ ಮಾಡುತ್ತಾರೆ. ಅಷ್ಟು ಕೊಟ್ಟಿದೇನೆ, ಇಷ್ಟು ಕೊಟ್ಟಿದ್ದೇನೆ ಅಂತ ಹೇಳಿದ್ದಾನೆ. ಆದರೆ ಯಾರಿಗೆ ಕೊಟ್ಟಿದ್ದಾನೆ ಅಂತ ಗೊತ್ತಿಲ್ಲ ಎಂದರು.

ಕಂಟ್ರಾಕ್ಟರ್ ಮಂಜುನಾಥ್ ಯಾವುದೇ ಕಾಮಗಾರಿ ಮಾಡಿದರೂ ಆತ ಹೇಳಿದ್ದೇ ಫೈನಲ್ ಆಗಿತ್ತು. ಅಧಿಕಾರಿಗಳಿಗೆ ನಾನು ಜಿಲ್ಲಾ ಅಧ್ಯಕ್ಷ ಅಂತ ಬೆದರಿಸುತ್ತಾನೆ. ಸಣ್ಣಪುಟ್ಟ ಕಂಟ್ರಾಕ್ಟರ್​ಗಳು ಕೆಲಸ‌ ಕೇಳಿದಾಗ ತಾರತಮ್ಯ ಮಾಡುತ್ತಿದ್ದನು. ಯಾರ ಬೆಂಬಲಿಗರು, ಯಾವ ಪಕ್ಷ ಅಂತ ಕೇಳುತ್ತಿದ್ದನು ಎಂದು ಶಾಸಕ ತಿಪ್ಪಾರೆಡ್ಡಿ ಅವರು ಮಂಜುನಾಥ್ ವಿರುದ್ಧ ಆರೋಪ ಮಾಡಿದರು.

ಇದನ್ನೂ ಓದಿ: Thippareddy Audio: ಕೆಲವು ಆಡಿಯೋ ಮಿಮಿಕ್ರಿ ಆಗಿರಲೂ ಬಹುದು ಎಂದ ಶಾಸಕ ಪ್ರೀತಮ್ ಗೌಡ

ಆತ ಯುಜಿಡಿ ಕಾಮಗಾರಿ ವೇಳೆ ಪೈಪ್ ಲೈನ್ ಹೊಡೆದಿದ್ದನು. ಅದನ್ನು ಕೇಳಿದ್ದೆ. ಕೇಳಿರುವುದು ತಪ್ಪಾ ಎಂದು ಪ್ರಶ್ನಿಸಿದ ಶಾಸಕ ತಿಪ್ಪಾರೆಡ್ಡಿ ಅವರು ರಿಯಲ್ ಎಸ್ಟೇಟ್ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರವನ್ನು ‌ಜೊತೆಗೆ ಮಾಡೋಣ ಎಂದು ಮಂಜುನಾಥ್ ನನ್ನ ಬಳಿ ಕೇಳಿದ್ದನು. ಅದನ್ನು ನಾನು ವಿರೋಧಿಸಿದ್ದಕ್ಕೆ ಇದೆಲ್ಲ ಶುರುವಾಗಿದೆ ಎಂದರು.

ಆತನ ಗುಣವೇ ಹೆದರಿಸಿ ಕೆಲಸ‌ ಮಾಡುವುದಾಗಿದೆ. ವೈಯಕ್ತಿಕ ದ್ವೇಷದಿಂದ ಈ ರೀತಿ ಮಾಡಿದ್ದಾರೆ. ಆಸ್ಪತ್ರೆಯ ಕೆಎಚ್​ಎಸ್​ಡಿಪಿ ಯೋಜನೆಯ ಟೆಂಡರ್ ಕೊಡಿಸದ ಹಿನ್ನಲೆಯಲ್ಲಿ ಆರೋಪ ಮಾಡಲಾಗಿದೆ. ಈ ವಿಚಾರದಲ್ಲಿ ಇಬ್ಬರ ಮದ್ಯೆ ಮೌಕಿಕ ಮಾತುಕತೆ ನಡೆದಿತ್ತು ಎಂದು ಶಾಸಕರು ಸ್ಪಷ್ಟನೆ ನೀಡಿದರು.

ತಿಪ್ಪಾರೆಡ್ಡಿ ವಿರುದ್ಧ ಮಂಜುನಾಥ್ ಮಾಡಿದ ಆರೋಪವೇನು?

ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ಮಂಜುನಾಥ್, ಸೂರ್ಯ ಚಂದ್ರ ಇರೋದು ಎಷ್ಟು ಸತ್ಯನೋ ಭ್ರಷ್ಟಾಚಾರ ಇರೋದು ಸತ್ಯ. ನಮ್ಮ ಜಿಲ್ಲೆಯಲ್ಲಿ ಭ್ರಷ್ಟಾಚಾರ ಇರಲಿಲ್ಲ. ಚಿತ್ರದುರ್ಗ ಜಿಲ್ಲೆಯ ಶಾಸಕರು ತಿಪ್ಪಾರೆಡ್ಡಿ ಅವರು ಶುರುಮಾಡಿದ್ದಾರೆ. ಲಂಚ ಶುರುಮಾಡಿದ್ದೇ ಶಾಸಕ ತಿಪ್ಪಾರೆಡ್ಡಿ. ಲೋಕಾಯುಕ್ತಕ್ಕೆ ಅಫಿಡೇವಿಟ್ ಮಾಡಿದ್ದೇವೆ. ಒಟ್ಟು 13 ಜನ ಶಾಸಕರು 4-5 ಜನ ಸಚಿವರ ದಾಖಲೆಗಳು ಇದೆ. ತಿಪ್ಪಾರೆಡ್ಡಿ ಅವರು ಲಂಚ ಪಡೆದಿರುವ ಬಗ್ಗೆ ಆಡಿಯೋ ಇದೆ, ವಾಟ್ಸ್ ಆ್ಯಪ್ ರೆಕಾರ್ಡ್ ಕೂಡಾ ಇದೆ. ಶೇ. 25% ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು.

ಚಿತ್ರದುರ್ಗ ಕ್ಷೇತ್ರದಲ್ಲಿ 700 ಕೋಟಿ ಕಾಮಗಾರಿ ಆಗಿದೆ. ಬಿಲ್ಡಿಂಗ್​ಗೆ ಶೇ15 ಪಡೆಯುತ್ತಾರೆ. ರಸ್ತೆಗೆ ಶೇ 10 ಕಮಿಷನ್ ಬಗ್ಗೆ ಕೈ ನಲ್ಲೇ ಸನ್ನೆ ಮಾಡ್ತಾರೆ. 2019 ರಿಂದ ಇತ್ತೀಚೆಗೆ ನಾನೇ 90 ಲಕ್ಷ ಕಮಿಷನ್ ಕೊಟ್ಟಿದ್ದೇನೆ. ತಿಪ್ಪಾರೆಡ್ಡಿ ಅವರ ಆಡಿಯೋ ರಿಲೀಸ್ ಮಾಡಲಾಗ್ತಿದೆ. ಬಿಡಬ್ಲ್ಯೂಡಿ ಕೇಸ್ ನಲ್ಲಿ ಶಾಸಕ ತಿಪ್ಪಾರೆಡ್ಡಿ ಕಮಿಷನ್ ಕೇಳಿರುವ ಆಡಿಯೋ ರಿಲೀಸ್ ಆಗಿದೆ ಎಂದಿದ್ದಾರೆ. ನಾವು ಕಮಿಷನ್ ಕೊಡಲಿಲ್ಲ ಅಂದ್ರೆ ಇಂಜಿನಿಯರ್ ಗಳಿಗೆ ಒತ್ತಡ ಹಾಕ್ತಾರೆ. ಪಿಡಬ್ಲ್ಯೂಡಿ ಬಿಲ್ಡಿಂಗ್ ಕಟ್ಟಿ ಮೂರು ವರ್ಷ ಆಯಿತು. ಬಿಲ್ ಕೊಡಿ ಅಂದ್ರೆ ಕಮಿಷನ್ ಕೇಳಿದ್ರು. 2.5 ಕೋಟಿ ಕಾಮಗಾರಿಗೆ ಲಕ್ಷಾಂತರ ರೂಪಾಯಿ ಕಮಿಷನ್ ನೀಡಿದ್ದೇನೆ ಎಂದು ಮಂಜುನಾಥ್ ಹೇಳಿದ್ದಾರೆ.

ರಾಜಕೀಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Mon, 16 January 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!