AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ವೈಎಸ್ ಶರ್ಮಿಳಾ ಬೆಂಬಲಿಗರು ಮತ್ತು ಕೆಸಿಆರ್ ಕಾರ್ಯಕರ್ತರ ನಡುವೆ ಘರ್ಷಣೆ

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರ ಬೆಂಬಲಿಗರು ಮತ್ತು ಕೆಸಿಆರ್ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

Andhra Pradesh: ವೈಎಸ್ ಶರ್ಮಿಳಾ ಬೆಂಬಲಿಗರು ಮತ್ತು ಕೆಸಿಆರ್ ಕಾರ್ಯಕರ್ತರ ನಡುವೆ ಘರ್ಷಣೆ
Clash between YS Sharmila supporters and KCR activists
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 28, 2022 | 7:53 PM

ತೆಲಂಗಾಣ: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರ ಬೆಂಬಲಿಗರು ಮತ್ತು ಕೆಸಿಆರ್ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆಯ ನಂತರ ಬಂಧನ ಮಾಡಲಾಗಿದೆ. ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಶರ್ಮಿಳಾ ಅವರ ಬೆಂಬಲಿಗರು ಮತ್ತು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಕರ್ತರ ನಡುವೆ ಘರ್ಷಣೆಯ ನಂತರ ಬಂಧಿಸಲಾಗಿದೆ. ಶರ್ಮಿಳಾ ಅವರು ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ನೀವು ನನ್ನನ್ನು ಏಕೆ ಬಂಧಿಸುತ್ತಿದ್ದೀರಿ ಎಂದು ಪೊಲೀಸರ ಬಳಿ ಕೇಳಿದ್ದಾರೆ.

ಅಕ್ಟೋಬರ್‌ನಿಂದ ಶರ್ಮಿಳಾ ಅವರು ತಮ್ಮ ಬೆಂಬಲಿಗರೊಂದಿದೆ 3,500 ಕಿ.ಮೀ ಪಾದಯಾತ್ರೆ ನಡೆಸುತ್ತಿದ್ದಾರೆ. ನಿನ್ನೆ ನರಸಂಪೇಟೆಯಲ್ಲಿದ್ದ ಅವರು ಸ್ಥಳೀಯ ಟಿಆರ್‌ಎಸ್ ಶಾಸಕ ಪೆದ್ದಿ ಸುದರ್ಶನ್ ರೆಡ್ಡಿ ಅವರನ್ನು ಟೀಕಿಸಿದರು. ಈ ಟೀಕೆ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ (ಕೆಸಿಆರ್) ಪಕ್ಷದ ಕಾರ್ಯಕರ್ತರನ್ನು ಕೆರಳಿಸಿದೆ, ಶರ್ಮಿಳಾ ಅವರ ‘ಪಾದಯಾತ್ರೆ’ ಸಮಯದಲ್ಲಿ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದರು. ಇದು ಶರ್ಮಿಳಾ ಅವರ ಬೆಂಬಲಿಗರನ್ನು ಕೆರಳಿಸಿತು ಇದೀಗ ಇಬ್ಬರ ನಡುವೆ ಮಾರಾಮಾರಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನು ಓದಿ: ಆಂಧ್ರ ಪ್ರದೇಶದ ಸಿಎಂ ಜಗನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾರಿಂದ ಇಂದು ನೂತನ ರಾಜಕೀಯ ಪಕ್ಷಕ್ಕೆ ಚಾಲನೆ

ನನ್ನನ್ನು ಏಕೆ ಬಂಧಿಸುತ್ತಿದ್ದೀರಿ? ನಾನು ಬಲಿಪಶು, ನಾನು ಇಲ್ಲಿ ಆರೋಪಿಯಲ್ಲ ಎಂದು ಶರ್ಮಿಳಾ ಅವರು ತಮ್ಮ ಬೆಂಬಲಿಗರೊಂದಿಗೆ ಅವರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಕೂಗಾಡಿದ್ದಾರೆ. ಶರ್ಮಿಳಾ ಅವರ ಪಾದಯಾತ್ರೆ ವೈಎಸ್‌ಆರ್‌ಟಿಪಿ ಮತ್ತು ಆಡಳಿತಾರೂಢ ಟಿಆರ್‌ಎಸ್ ನಡುವೆ ಸಾಕಷ್ಟು ರಾಜಕೀಯ ಉದ್ವಿಗ್ನತೆಯನ್ನು ಉಂಟು ಮಾಡಿದೆ. ತೆಲಂಗಾಣ ಪೊಲೀಸರು ಸಾರ್ವಜನಿಕ ಸಭೆಗೆ ಅನುಮತಿ ನಿರಾಕರಿಸಿದರು. ಭೈಂಸಾದಲ್ಲಿ ನಡೆದ ‘ಪಾದಯಾತ್ರೆ’ ಕೋಮು ಸೂಕ್ಷ್ಮವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Published On - 5:06 pm, Mon, 28 November 22

Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ