AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಮನ ಗೆಲ್ಲಲು ತಂತ್ರ ಹೂಡಿದ ಡಿಕೆ ಶಿವಕುಮಾರ್!

ಕರ್ನಾಟಕ ಕಾಂಗ್ರೆಸ್ ಅಧಿನಾಯಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬೆಂಬಲ ಸೂಚಿಸಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಒಕ್ಕೂಟಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶೀರ್ವಾದ ದಕ್ಕಿದೆ. ಹೀಗಾಗಿ ಹಿಂದುಳಿದ ವರ್ಗಗಳನ್ನ ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್​ ಹೊಸ ದಾಳ ಪ್ರಯೋಗಿಸಿದ್ದು, ಸಿದ್ದರಾಮಯ್ಯ ಅವರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಮನ ಗೆಲ್ಲಲು ಡಿಕೆಶಿ ತಂತ್ರ ಹೂಡಿದ್ದಾರೆ.

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಮನ ಗೆಲ್ಲಲು ತಂತ್ರ ಹೂಡಿದ ಡಿಕೆ ಶಿವಕುಮಾರ್!
ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಮನ ಗೆಲ್ಲಲು ತಂತ್ರ ಹೂಡಿದ ಡಿಕೆ ಶಿವಕುಮಾರ್!
TV9 Web
| Updated By: ಸಾಧು ಶ್ರೀನಾಥ್​|

Updated on: Sep 04, 2021 | 12:15 PM

Share

ಬೆಂಗಳೂರು: ರಾಜಕೀಯ ನೇತಾರರು ಜಾತಿ ಧರ್ಮದ ಜೇನುಗೂಡಿನತ್ತ ಆಗಾಗ ಕಲ್ಲು ಒಗೆಯುತ್ತಾ ಇರುತ್ತಾರೆ. ಒಟ್ಟಿನಲ್ಲಿ ಅವರಿಗೆ ರಾಜಕೀಯದಲ್ಲಿ ಜಾತಿ ಧರ್ಮದ ಹಣತೆ ದಹಿಸುತ್ತಿರಬೇಕು. ಕಾಂಗ್ರೆಸ್​​ ಪಕ್ಷದ ನಾಯಕರು ಹಿಂದುಳಿದವರ ಮನೆ ಗೆಲ್ಲಲು ಹೊಸ ದಾಳ ಉರುಳಿಸಿದ್ದಾರೆ. ಹಿಂದುಳಿದ ಸಂಘಟನೆಗಳ ವಾರ್ ಕಾಂಗ್ರೆಸ್‌ ಪಕ್ಷದಲ್ಲೇ ಶುರುವಾಗಿದೆ.

ಕರ್ನಾಟಕ ಕಾಂಗ್ರೆಸ್ ಅಧಿನಾಯಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬೆಂಬಲ ಸೂಚಿಸಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಒಕ್ಕೂಟಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶೀರ್ವಾದ ದಕ್ಕಿದೆ. ಹೀಗಾಗಿ ಹಿಂದುಳಿದ ವರ್ಗಗಳನ್ನ ಮುಂದಿಟ್ಟುಕೊಂಡು ಡಿಕೆ ಶಿವಕುಮಾರ್​ ಹೊಸ ದಾಳ ಪ್ರಯೋಗಿಸಿದ್ದು, ಸಿದ್ದರಾಮಯ್ಯ ಅವರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಮನ ಗೆಲ್ಲಲು ಡಿಕೆಶಿ ತಂತ್ರ ಹೂಡಿದ್ದಾರೆ.

ಹಿಂದುಳಿದ ವರ್ಗಗಳ ಮನ ಗೆಲ್ಲಲು ಡಿ.ಕೆ.ಶಿವಕುಮಾರ್‌ ಪ್ಲ್ಯಾನ್‌ ರೂಪಿಸಿದ್ದು ಸಂವಾದ ಕಾರ್ಯಕ್ರಮ ಮೂಲಕ ಸಣ್ಣ ಸಮುದಾಯಕ್ಕೆ ರೀಚ್ ಆಗಲುಯ ಮುಂದಾಗಿದ್ದಾರೆ. ಹೊಸದಾಗಿ ತಲೆ ಎತ್ತಿರುವ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಡಿಕೆಶಿಗೆ ಸಾಥ್ ನೀಡಿದೆ. ವೇದಿಕೆ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆ ಸಣ್ಣ ಸಮುದಾಯಗಳ ಸಂವಾದ ಕಾರ್ಯಕ್ರಮ ಆಯೋಜಿಸ್ತಿದಾರೆ. ಡಿಕೆಶಿ ಪಾಲ್ಗೊಳ್ಳುವ ಪ್ರತಿ ಕಾರ್ಯಕ್ರಮದಲ್ಲೂ ವೇದಿಕೆಯ ನಾಯಕರು ಸಕ್ರಿಯರಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ವೇದಿಕೆಯ ನಾಯಕ ಡಾ. ದ್ವಾರಕಾನಾಥ್‌ರಿಂದಲೇ ಕಾರ್ಯತಂತ್ರ ರೂಪುಗೊಳ್ಳೂತ್ತಿದೆ.

ವೇದಿಕೆ ನಾಯಕ ಡಾ.ದ್ವಾರಕಾನಾಥ್‌ರಿಂದಲೇ ಕಾರ್ಯತಂತ್ರ:

ಇತ್ತಿಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿರುವ ಡಾ. ದ್ವಾರಕಾನಾಥ್‌ ನೇತೃತ್ವದಲ್ಲಿ ಜಾಗೃತ ವೇದಿಕೆ ಹೋರಾಟಗಳಿಗೆ ಡಿಕೆಶಿ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಗಮನಾರ್ಹವೆಂದರೆ ಇದಕ್ಕೆ ಕೌಂಟರ್ ನೀಡಲು ಸಿದ್ದರಾಮಯ್ಯ ಕೂಡ ಪ್ರತಿತಂತ್ರ ರೂಪಿಸಿದ್ದಾರೆ. ಹಿಂದುಳಿದ ವರ್ಗಗಳ ಒಕ್ಕೂಟದಿಂದ ಜಾತಿ ಗಣತಿ ಹೋರಾಟಕ್ಕೆ ಮತ್ತೆ ಒತ್ತು ನೀಡಿದ್ದಾರೆ. ಒಕ್ಕೂಟವು ಸಿದ್ದರಾಮಯ್ಯ ಜತೆ ಈಗಾಗಲೇ ಚರ್ಚೆ ನಡೆಸಿದೆ. ಅತಿ ಹಿಂದುಳಿದ ವರ್ಗಗಳ ವೇದಿಕೆಯಿಂದಲೂ ಹೋರಾಟ ಹಮ್ಮಿಕೊಳ್ಳಲಾಗಿದೆ.

ವೇದಿಕೆಯು ಕೆಲ ದಿನಗಳ ಹಿಂದೆ ಜಾತಿ ಗಣತಿ ಹೋರಾಟ ನಡೆಸಿತ್ತು. ಈಗ ಸಿದ್ದರಾಮಯ್ಯ ಬೆಂಬಲಿತ ಹಿಂದುಳಿದ ಒಕ್ಕೂಟದಿಂದಲೂ ಸಕ್ರಿಯ ಹೋರಾಟ ಆರಂಭವಾಗಿದೆ. ಅತಿ ಹಿಂದುಳಿದ ವರ್ಗಗಳ ವೇದಿಕೆ ಅಖಾಡಕ್ಕೆ ಇಳಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಪರ್ಯಾಯ ಹೋರಾಟ ಆರಂಭ ಪಡೆದಿದೆ. ಒಕ್ಕೂಟದ ಹೋರಾಟಕ್ಕೆ ಸಿಎಲ್‌ಪಿ ನಾಯಕ ಸಿದ್ದರಾಮಯ್ಯರಿಂದ ಸಂಪೂರ್ಣ ಬೆಂಬಲ ಘೋಷಣೆಯಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಲಿಂಗಾಯತ ಧರ್ಮ: ಮತ್ತೆ ಧ್ವನಿ ಎತ್ತಿದ ಎಂಬಿ ಪಾಟೀಲ್​ಗೆ ಶಾಮನೂರು ಶಿವಶಂಕರಪ್ಪ ಗುದ್ದು

(CLP leader siddaramaiah and KPCC President DK Shivakumar fight to gain back ward classes support)

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ