AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ ಬೊಮ್ಮಾಯಿ ಕಾರ್ಯವೈಖರಿಗೆ ವರಿಷ್ಠರ ಮೆಚ್ಚುಗೆ, ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ: ಅರುಣ್ ಸಿಂಗ್

Karnataka Politics: ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದರು.

ಬಸವರಾಜ ಬೊಮ್ಮಾಯಿ ಕಾರ್ಯವೈಖರಿಗೆ ವರಿಷ್ಠರ ಮೆಚ್ಚುಗೆ, ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ: ಅರುಣ್ ಸಿಂಗ್
ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 17, 2022 | 10:15 AM

Share

ಬೆಂಗಳೂರು: ಬಿಜೆಪಿಯ ಹೈಕಮಾಂಡ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರ ಕಾರ್ಯವೈಖರಿ ಇಷ್ಟವಾಗಿದೆ. ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಬಿಜೆಪಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ (Arun Singh) ಹೇಳಿದರು. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಎದ್ದಿದ್ದ ಊಹಾಪೋಹಗಳಿಗೆ ತೆರೆ ಎಳೆದರು.

ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ‘ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶದಲ್ಲಿ ‘ಬೊಮ್ಮಾಯಿ ಕಾರ್ಯವೈಖರಿ ಬಗ್ಗೆ ಅವರಿಗೆ (ವರಿಷ್ಠರಿಗೆ) ಮೆಚ್ಚುಗೆ ಇದೆ’ ಎಂದು ಅರುಣ್ ಸಿಂಗ್ ಪುನರುಚ್ಚರಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಹಿಸಲಿರುವ ಪಾತ್ರಗಳು ಏನಾಗಿರುತ್ತವೆ? ಯಾರನ್ನಾದರೂ ಮುಖ್ಯಮಂತ್ರಿ ಮುಖವಾಗಿ ಬಿಂಬಿಸುವ ಆಲೋಚನೆ ಪಕ್ಷಕ್ಕೆ ಇದೆಯೇ ಎಂದು ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಅವರು, ‘ಬೊಮ್ಮಾಯಿ ಬಗ್ಗೆ ಮೆಚ್ಚುಗೆಯಿದೆ’ ಎಂದಷ್ಟೇ ಹೇಳಿದ್ದರು.

‘ಬಿಜೆಪಿಯು ಈ ಬಾರಿ ಕರ್ನಾಟಕದಲ್ಲಿ ತಾನು ಇರಿಸಿಕೊಂಡಿರುವ ಗುರಿ 150ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಲಿದೆ. ಮೋದಿ ಮತ್ತು ಬೊಮ್ಮಾಯಿ ಆಡಳಿತ ಕೊಟ್ಟಿರುವ ಜನಪರ ಯೋಜನೆಗಳಿಗೆ ರಾಜ್ಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ’ ಎಂದು ಅವರು ತಿಳಿಸಿದರು.

‘ಬೊಮ್ಮಾಯಿ ನಾಯಕತ್ವ ಮತ್ತು ಯಡಿಯೂರಪ್ಪ ಮಾರ್ಗದರ್ಶನದಲ್ಲಿಯೇ ಬಿಜೆಪಿ ಚುನಾವಣೆಯನ್ನು ಎದುರಿಸಲಿದೆ’ ಎಂದು ಅವರು ಹೇಳಿದರು. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಕರ್ನಾಟಕದ ಜನಪ್ರಿಯ ನಾಯಕ ಯಡಿಯೂರಪ್ಪ ಅವರು ಈಗ ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರಾಗಿದ್ದಾರೆ.

‘ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವ ನಾವು ಚುನಾವಣೆ ಎದುರಿಸುತ್ತಿದ್ದೇವೆ. ಮುಂದಿನ ಚುನಾವಣೆಗೆ ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಸಾಮಾನ್ಯ ಜನರೊಂದಿಗೆ ಸುಲಭವಾಗಿ ಬೆರೆಯುವ ಬೊಮ್ಮಾಯಿ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ. ಬೊಮ್ಮಾಯಿ ನಮ್ಮವರು ಎಂದು ಕರ್ನಾಟಕದ ಎಲ್ಲ ಜನರೂ ಭಾವಿಸುತ್ತಿದ್ದಾರೆ’ ಎಂದು ಅರುಣ್ ಸಿಂಗ್ ವಿವರಿಸಿದರು.

ಯಡಿಯೂರಪ್ಪ ಅವರನ್ನು ಪಕ್ಷವು ಸದಾ ಗೌರವಿಸುತ್ತದೆ. ಅವರ ಮಾರ್ಗದರ್ಶನದಲ್ಲಿಯೇ ಚುನಾವಣೆ ಎದುರಿಸುತ್ತೇವೆ. ಪಕ್ಷದ ಸಂಘಟನೆಗಾಗಿ ಮತ್ತು ಮತದಾರರನ್ನು ಸೆಳೆಯಲು ಯಡಿಯೂರಪ್ಪ ಶೀಘ್ರ ಕರ್ನಾಟಕ ಪ್ರವಾಸ ಮಾಡಲಿದ್ದಾರೆ. ಅದು ದೊಡ್ಡ ವಿಚಾರ ಎಂದು ಅರುಣ್ ಸಿಂಗ್ ನುಡಿದರು.

ಹಳೇ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಯಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಮತ್ಕಾರವೇ ನಡೆಯಲಿದೆ. ಹಳೇ ಮೈಸೂರು ಮತ್ತು ಕಲ್ಯಾಣ ಕರ್ನಾಟಕ ಭಾಗದ ಜೆಡಿಎಸ್-ಕಾಂಗ್ರೆಸ್​ನ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಇತ್ತೀಚೆಗೆ ಚುನಾವಣೆ ನಡೆದ ಗೋವಾ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಣಿಪುರಗಳಲ್ಲಿ ಕಾಂಗ್ರೆಸ್ ಹೇಳ ಹೆಸರಿಲ್ಲದಂತೆ ನೆಲಕಚ್ಚಿದೆ. ಕಾಂಗ್ರೆಸ್​ ಬಿಡುವ ಅಭಿಯಾನ ಎಲ್ಲೆಡೆ ನಡೆಯುತ್ತಿದೆ. ರಾಹುಲ್ ಗಾಂಧಿ ಅವರ ಜೋಡೋ ಯಾತ್ರೆಯು ಫ್ಲಾಪ್ ಯಾತ್ರೆಯಾಗಿದೆ ಎಂದು ಲೇವಡಿ ಮಾಡಿದರು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಲಿಂಕ್: BJP’s central leadership pleased with Bommai’s performance, to be CM candidate in Karnataka

Published On - 9:47 am, Mon, 17 October 22

ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ