AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಧಾನ ಸಭೆ ಸಕ್ಸಸ್; ಸಚಿವ ಆನಂದ್ ಸಿಂಗ್​ ಆನಂದದಲ್ಲಿ ಇನ್ನು ವ್ಯತ್ಯಯವಿಲ್ಲ: ಸಿಎಂ ಬೊಮ್ಮಾಯಿ

Karnataka Cabinet: ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಅವರೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಹ ಅವರು ತಿಳಿಸಿದರು.

ಸಂಧಾನ ಸಭೆ ಸಕ್ಸಸ್; ಸಚಿವ ಆನಂದ್ ಸಿಂಗ್​ ಆನಂದದಲ್ಲಿ ಇನ್ನು ವ್ಯತ್ಯಯವಿಲ್ಲ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಮತ್ತು ಆನಂದ್ ಸಿಂಗ್
TV9 Web
| Edited By: |

Updated on:Aug 11, 2021 | 9:25 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ರಾಜೀನಾಮೆ ನೀಡುವ ಬಗ್ಗೆ ನಾನು ಎಂದೂ ಹೇಳಿಲ್ಲ. ಖಾತೆ ಬದಲಾವಣೆಗಾಗಿ ನಾನು ಮನವಿ ಮಾಡಿದ್ದು ನಿಜ. ಸಿಎಂ ಬಸವರಾಜ್‌ ಬೊಮ್ಮಾಯಿ (Basavaraj Bommai) ವರಿಷ್ಠರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ. ಸಿಎಂ ಭರವಸೆಯನ್ನು ಸ್ವೀಕರಿಸಿದ್ದೇನೆ, ಸಹಕರಿಸುತ್ತೇನೆ. ಸಹಕಾರ ತತ್ವದಡಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಪರಿಸತರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಖಾತೆ ಬದಲಾವಣೆಗೆ ಆನಂದ್​ ಸಿಂಗ್ ಒತ್ತಾಯಿಸಿದ್ದು ನಿಜ. ಆದರೆ ನಾವು ಕ್ಲಿಷ್ಟ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ಮಾತುಕತೆ ವೇಳೆ ಅವರಿಗೆ ಮನವರಿಕೆ ಮಾಡಿದ್ದೇನೆ. ವರಿಷ್ಠರ ಗಮನಕ್ಕೆ ತಂದು ಬಗೆಹರಿಸುತ್ತೇವೆ. ಆನಂದ್ ಸಿಂಗ್ ಅಸಮಾಧಾನ ವಿಚಾರ ಸದ್ಯಕ್ಕೆ ಸುಖಾಂತ್ಯವಾಗಿದೆ. ನಾವೆಲ್ಲರೂ ಒಗ್ಗೂಡಿ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇವೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಸಂಧಾನ ಸಭೆಯ ನಂತರ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು. ವಿಜಯನಗರದಲ್ಲಿ ಸಚಿವ ಆನಂದ್ ಸಿಂಗ್ ಅವರೇ ಧ್ವಜಾರೋಹಣ ಮಾಡಲಿದ್ದಾರೆ ಎಂದು ಸಹ ಅವರು ತಿಳಿಸಿದರು.

ಇದನ್ನೂ ಓದಿ: 

ಬ್ಲಾಕ್‌ಮೇಲ್‌ ತಂತ್ರ ಮಾಡುವುದಿಲ್ಲ, ನೇರವಾಗಿ ಕೇಳುತ್ತೇನೆ: ಸಚಿವ ಆನಂದ್ ಸಿಂಗ್

ವಿಮಾ ಮಸೂದೆ ಚರ್ಚೆಗೆ ಒತ್ತಾಯಿಸಿದ ಮಹಿಳಾ ಸದಸ್ಯರ ಮೇಲೆ ರಾಜ್ಯಸಭೆಯಲ್ಲಿ ಹಲ್ಲೆ: ಶರದ್​ ಪವಾರ್

(CM Basavaraj Bommai clarifies meeting with tourism minister Anand Singh is success no more unsatisfaction)

Published On - 9:19 pm, Wed, 11 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!