AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತಿಗೆ ಬೆಲೆ ಬರಬೇಕಾದರೆ ಭಾಷೆ ಬಹಳ ಮುಖ್ಯ; ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಸಂದರ್ಭಕ್ಕನುಗುಣವಾಗಿ ಕ್ರಮ ಕೈಗೊಂಡಿದ್ದೇವೆ ಎಂದು ಮಾತನಾಡಿದ ಸಿಎಂ, ಶಿವಮೊಗ್ಗ ಘಟನೆಯಾದಾಗ ಕ್ರಮ ತೆಗೆದುಕೊಂಡಿದ್ದೇವೆ. ಧಾರವಾಡ ಘಟನೆ ಆದಾಗ ಕ್ರಮ ತೆಗೆದುಕೊಂಡಿದ್ದೇವೆ. ಕೋಲಾರ ಘಟನೆ ಸಂದರ್ಭ ಕ್ರಮ ತೆಗೆದುಕೊಂಡಿದ್ದೇವೆ.

ಮಾತಿಗೆ ಬೆಲೆ ಬರಬೇಕಾದರೆ ಭಾಷೆ ಬಹಳ ಮುಖ್ಯ; ಸಿದ್ದರಾಮಯ್ಯ, ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು
TV9 Web
| Updated By: sandhya thejappa|

Updated on:Apr 12, 2022 | 10:52 AM

Share

ಉಡುಪಿ: ಜಿಲ್ಲೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ತಿರುಗೇಟು ನೀಡಿದರು. ‘ನಾವು ಸರ್ಕಾರದಲ್ಲಿರುವವರು, ಕೆಲಸ ಮಾಡುವ ಸ್ಥಳದಲ್ಲಿದ್ದೇವೆ. ಮಾತಿಗೆ ಬೆಲೆ ಬರಬೇಕಾದರೆ ಭಾಷೆ ಬಹಳ ಮುಖ್ಯ. ಸಿದ್ದರಾಮಯ್ಯ, ಕುಮಾರಸ್ವಾಮಿಗೆ ತೊಂದರೆಯಾಗಿದೆ. ನನ್ನ ಮೌನ ಅವರಿಗೆ ತೊಂದರೆ ಆದರೆ ನಾನೇನು ಮಾಡಲಿ. ಸಿದ್ದರಾಮಯ್ಯ, ಹೆಚ್​ಡಿಕೆ ಬಾಯಿಗೆ ಬಂದಂಗೆ ಮಾತಾಡ್ತಾರೆ’ ಎಂದು ಮಣಿಪಾಲದಲ್ಲಿ ಸಿಎಂ ಹೇಳಿಕೆ ನೀಡಿದ್ದಾರೆ.

ಸಂದರ್ಭಕ್ಕನುಗುಣವಾಗಿ ಕ್ರಮ ಕೈಗೊಂಡಿದ್ದೇವೆ ಎಂದು ಮಾತನಾಡಿದ ಸಿಎಂ, ಶಿವಮೊಗ್ಗ ಘಟನೆಯಾದಾಗ ಕ್ರಮ ತೆಗೆದುಕೊಂಡಿದ್ದೇವೆ. ಧಾರವಾಡ ಘಟನೆ ಆದಾಗ ಕ್ರಮ ತೆಗೆದುಕೊಂಡಿದ್ದೇವೆ. ಕೋಲಾರ ಘಟನೆ ಸಂದರ್ಭ ಕ್ರಮ ತೆಗೆದುಕೊಂಡಿದ್ದೇವೆ. ಇವರ ಹಾಗೆ ಓಲೈಸುವ ರಾಜಕಾರಣ ಮಾಡಿಲ್ಲ, ಮಾಡದು ಇಲ್ಲ ಹೇಳಿದರು.

ಅಭಿಯಾನಕ್ಕೆ ಸಿಎಂ ಚಾಲನೆ: ಇನ್ನು ಉಡುಪಿಯಲ್ಲಿ ಸದ್ಗುರು ಜಗ್ಗಿ ವಾಸುದೇವ್ ಆರಂಭಿಸಿರುವ ಮಣ್ಣು ಉಳಿಸಿ ಅಭಿಯಾನಕ್ಕೆ ಸಿಎಂ ಚಾಲನೆ ನೀಡಿದರು. ನಿಸರ್ಗದ ರಕ್ಷಣೆಗಾಗಿ ಸದ್ಗುರುರಿಂದ ದೊಡ್ಡ ಅಭಿಯಾನ ಕೈಗೊಂಡಿದ್ದಾರೆ. ಚಾಲನೆ ನೀಡಿದ ಮಾತನಾಡಿದ ಸಿಎಂ, ತಾಯಿ ಗರ್ಭ ಮತ್ತು ಭೂಗರ್ಭ ಬಹಳ ಪವಿತ್ರವಾದದ್ದು. ಭೂಗರ್ಭವನ್ನು ಕಾಪಾಡಲು ಮಣ್ಣಿನ ರಕ್ಷಣೆ ಅವಶ್ಯಕ. ಭೂಮಿ, ಮಣ್ಣು ಕಾಪಾಡುವುದು ಮನುಷ್ಯನ ಆದ್ಯ ಕರ್ತವ್ಯ ಎಂದು ನುಡಿದರು.

ಇದೇ ವೇಳೆ ಕೊವಿಡ್ ಮಾರ್ಗಸೂಚಿ ಬಗ್ಗೆಯೂ ಮಾತನಾಡಿದರು. ಮುಂಜಾಗರೂಕತೆಯಿಂದ ಕ್ರಮವಾಗಿ ಕೈಗೊಳ್ತಿದ್ದೇವೆ. ನಿಯಮ ಪಾಲಿಸಿದರೆ ಯಾವುದೇ ಪರಿಸ್ಥಿತಿ ಎದುರಿಸಬಹುದು ಎಂದರು.

ಇದನ್ನೂ ಓದಿ

ಜೆಡಿಎಸ್​ಗೆ ಬಹುಮತ ಕೊಡಿ, 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ; ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಇ-ಮೇಲ್ ಪ್ರಕರಣ; VPN ಬಳಸಿ ಮೇಲ್ ಮಾಡಿರೋ ಶಂಕೆ

Published On - 10:48 am, Tue, 12 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ