AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ರಾಜಕೀಯದಲ್ಲಿ ಶಿವಾಜಿ ಮೂರ್ತಿ ಸಂಘರ್ಷ, ರಮೇಶ್ ಜಾರಕಿಹಜೊಳಿ ತಂತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿತಂತ್ರ

ಶಿವಾಜಿ ಮೂರ್ತಿ ಉದ್ಘಾಟನೆ ಕಾರ್ಯಕ್ರಮ ಬೆಳಗಾವಿ ರಾಜಕೀಯದಲ್ಲಿ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದು, ಇದೀಗ ಸಾಹುಕಾರ್​ ತಂತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿತಂತ್ರ ಹೆಣೆದಿದ್ದಾರೆ.

ಬೆಳಗಾವಿ ರಾಜಕೀಯದಲ್ಲಿ ಶಿವಾಜಿ ಮೂರ್ತಿ ಸಂಘರ್ಷ, ರಮೇಶ್ ಜಾರಕಿಹಜೊಳಿ ತಂತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿತಂತ್ರ
ರಮೇಶ್ ಜಾರಕಿಹಜೊಳಿ, ಲಕ್ಷ್ಮೀ ಹೆಬ್ಬಾಳ್ಕರ್​
ರಮೇಶ್ ಬಿ. ಜವಳಗೇರಾ
|

Updated on:Mar 02, 2023 | 8:07 AM

Share

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ(Belagavi)  ಶಿವಾಜಿ ಮೂರ್ತಿ (shivaji statue) ಉದ್ಘಾಟನೆಗೆ ಮಹಾಯುದ್ಧವೇ ಸ್ಫೋಟವಾಗಿದೆ. ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ(Ramesh Jarkiholi)  ನಾನಾ ನೀನಾ ಎನ್ನುವ ಸಮರ ಸಾರಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ನಿರ್ಮಾಣವಾಗಿರುವ ಶಿವಾಜಿ ಮೂರ್ತಿ ಕ್ರೆಡಿಟ್ ತೆಗೆದುಕೊಳ್ಳಲು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಾಹುಕಾರ್ ನಡುವೆ ಜಿದ್ದಾಜಿದ್ದಿ ಶುರುವಾಗಿದ್ದು, ಅಂತಿಮವಾಗಿ ರಮೇಶ್ ಜಾರಕಿಹೊಳಿ ಜಿಲ್ಲಾಡಳಿತದ ವತಿಯಿಂದ ಉದ್ಘಾಟನೆ ಕಾರ್ಯಕ್ರಮ ನಡೆಯಲಿ ಎಂದು ಹೇಳಿದ್ದರು. ಅದರಂತೆ ಇಂದು(ಮಾರ್ಚ್ 02) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಶಿವಾಜಿ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​​ ಸಹ ಸಾಹುಕಾರನ ತಂತ್ರಕ್ಕೆ ಪ್ರತಿತಂತ್ರ ಹೆಣೆದಿದ್ದಾರೆ.

ಇದನ್ನೂ ಓದಿ: Prajadhvani Yatre: ಬಡವರು ಹಾಲು ಮೊಸರಿನ ಮೇಲೆ ಜಿಎಸ್ ಟಿ ಕೊಡ್ತಾರೆ; ಪ್ರಧಾನಿ ಮೋದಿ ರೂ. 8,000 ಕೋಟಿ ವಿಮಾನದಲ್ಲಿ ಓಡಾಡುತ್ತಾರೆ: ಸತೀಶ್ ಜಾರಕಿಹೊಳಿ

ಜಾರಕಿಹೊಳಿ ಹೇಳಿದಂತೆ ಜಿಲ್ಲಾಡಳಿತದಿಂದ ಕಾರ್ಯಕ್ರಮ

ಇಂದು ಸರ್ಕಾರದಿಂದ ಶಿವಾಜಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬೊಮ್ಮಾಯಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಇದಕ್ಕಾಗಿಯೇ ಇಂದು ಬೆಳಗ್ಗೆ 9.15ಕ್ಕೆ ಬೆಳಗಾವಿ ಸಾಂಬ್ರಾ ಏರ್​​ಪೋರ್ಟ್​ಗೆ ಆಗಮಿಸಲಿರುವ ಬೊಮ್ಮಾಯಿ, ಬಳಿಕ ರಸ್ತೆ ಮಾರ್ಗವಾಗಿ ರಾಜಹಂಸಗಡ ಕೋಟೆಗೆ ಭೇಟಿ ನೀಡಿ ಕೋಟೆ ಅಭಿವೃದ್ಧಿ ಹಾಗೂ 43 ಅಡಿ ಎತ್ತರದ ಬೃಹತ್ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಉದ್ಘಾಟಿಸಲಿದ್ದಾರೆ. ಇದೇ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡಲಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಆರ್‌ಐಡಿಎಲ್ ಬೆಳಗಾವಿ ಸಹಯೋಗದಲ್ಲಿ 4.5 ಕೋಟೆ ವೆಚ್ಚದಲ್ಲಿ ರಾಜಹಂಸಗಡ ಕೋಟೆಯಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ಕೋಟೆ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಕ್ರೆಡಿಟ್ ಫೈಟ್ ನಡೆದಿದೆ.

ರಮೇಶ್ ಜಾರಕಿಹಜೊಳಿ ತಂತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿತಂತ್ರ

ಅತ್ತ ರಮೇಶ್ ಜಾರಕಿಹೊಳಿ ಜಿಲ್ಲಾಡಳಿತ ವತಿಯಿಂದ ಕಾರ್ಯಕ್ರಮ ಆಯೋಜಿಸಿ ಸಿಎಂ ಬೊಮ್ಮಾಯಿ ಅವರಿಂದ ಶಿವಾಜಿ ಪ್ರತಿಮೆ ಉದ್ಘಾಟನೆ ಮಾಡಿಸುತ್ತಿದ್ದರೆ, ಇತ್ತ ಸಾಹುಕಾರ್​ಗೆ ಸೆಡ್ಡು ಹೊಡೆದಿರುವ ಕಾಂಗ್ರೆಸ್ ಶಾಸಕಿ ಹೆಬ್ಬಾಳ್ಕರ್, ಮಾರ್ಚ್ 5ರಂದು ಶಿವಾಜಿ ಪ್ರತಿಮೆ ಉದ್ಘಾಟಿಸ್ತೀನಿ ಎಂದು ಟಕ್ಕರ್ ಕೊಟ್ಟಿದ್ದಾರೆ..

ಹೌದು.. ಮಾ. 5ರಂದು ಮತ್ತೊಮ್ಮೆ 20 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಶಿವಾಜಿ ಮೂರ್ತಿ ಉದ್ಘಾಟನೆಗೆ ಪ್ಲ್ಯಾನ್ ಮಾಡಿದ್ದು, ಈ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಟಕ್ಕರ್ ಕೊಡಲು ತಯಾರಿ ನಡೆಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮರಾಠಿ ಭಾಷಿಕರು ಇದ್ದಾರೆ. ಈ ಹಿನ್ನೆಲೆಯಲ್ಲಿ ಶಿವಾಜಿ ಹೆಸರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಭರ್ಜರಿ ರಾಜಕೀಯ ನಡೆದಿದೆ.

ಒಟ್ಟಿನಲ್ಲಿ ಬೆಳಗಾವಿ ಗ್ರಾಮೀಣ ಮತಭೂಮಿಯಲ್ಲಿ ಶಿವಾಜಿ ಪ್ರತಿಮೆ ಕ್ರೆಡಿಟ್ ವಾರ್ ದೊಡ್ಡ ಸಮರಕ್ಕೆ ಕಾರಣವಾಗಿದ್ದು, ಚುನಾವಣೆಯಲ್ಲಿ ಇಬ್ಬರಲ್ಲಿ ಈ ಮೂರ್ತಿ ಯುದ್ಧ ಯಾರಿಗೆ ವರವಾಗುತ್ತೆ ಎಂದು ಕಾದು ನೋಡಬೇಕು.

ಬೆಳಗಾವಿ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:07 am, Thu, 2 March 23

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..