AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ಕೈಗೊಂಡ ನಿರ್ಧಾರ ಮತ್ತು ಹೇಳಿಕೆ ನನಗೆ ಸಮಾಧಾನ, ಖುಷಿ ತಂದಿದೆ: ಸಚಿವ ಈಶ್ವರಪ್ಪ

ಯಡಿಯೂರಪ್ಪ ನಾಲ್ಕು ಮಂದಿ ಶಾಸಕರಿದ್ದಾಗಿನಿಂದ ಪಕ್ಷ ಕಟ್ಟಿ ಬೆಳೆಸಿದವರು. ರೈತ ರೈತ ರೈತ ಅಂತ ಜಪ ಮಾಡಿದವರು ದೇವೇಗೌಡರನ್ನು ಬಿಟ್ಟರೆ ಯಡಿಯೂರಪ್ಪ ಮಾತ್ರ. ಸಿಎಂ ವಿರುದ್ಧ ಮೊದಲು ಮಾತಾಡಿದ್ದೇ ಲಿಂಗಾಯತ ಶಾಸಕರು. ಆಗ ಯಾಕೆ ಸ್ವಾಮೀಜಿಗಳು ಅಂಥ ಶಾಸಕರಿಗೆ ಬುದ್ಧಿ ಹೇಳಲಿಲ್ಲ?: ಸಚಿವ ಕೆ ಎಸ್ ಈಶ್ವರಪ್ಪ

ಸಿಎಂ ಯಡಿಯೂರಪ್ಪ ಕೈಗೊಂಡ ನಿರ್ಧಾರ ಮತ್ತು ಹೇಳಿಕೆ ನನಗೆ ಸಮಾಧಾನ, ಖುಷಿ ತಂದಿದೆ: ಸಚಿವ ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ ಮತ್ತು ಬಿ ಎಸ್ ಯಡಿಯೂರಪ್ಪ
TV9 Web
| Edited By: |

Updated on: Jul 22, 2021 | 2:54 PM

Share

ಬೆಂಗಳೂರು: ಸಿಎಂ ಯಡಿಯೂರಪ್ಪ (CM BS Yediyurappa)  ಕೈಗೊಂಡ ನಿರ್ಧಾರ, ಹೇಳಿಕೆ ನನಗೆ ಸಮಾಧಾನ ಮತ್ತು ಖುಷಿ ತಂದಿದೆ. ಅವರು ರಾಜೀನಾಮೆ ಕೊಡ್ತಾರೆ ಎಂದು ಯಾರೂ ಹೇಳಿಲ್ಲ. ಅದು ಯಡಿಯೂರಪ್ಪ, ಹೈಕಮಾಂಡ್ ನಡುವಿನ ವಿಚಾರ. ಅದನ್ನು ಅವರಿಬ್ಬರೇ ತೀರ್ಮಾನ ಮಾಡ್ತಾರೆ. ಅವರು ಇರ್ತಾರೋ ಬಿಡ್ತಾರೋ ಅದೆಲ್ಲ ಮುಂದಿನ ವಿಚಾರ. ಆ ಬಗ್ಗೆ ಮಾತಾಡೋಕೆ ಮಧ್ಯದಲ್ಲಿ ನಾವೂ ನೀವು ಯಾರು? ಆದರೆ ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದ ಮಾತು ಸರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸ್ವಾಮೀಜಿಗಳ ವಿರುದ್ಧವೂ ಸಚಿವ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಯಡಿಯೂರಪ್ಪ ನಾಲ್ಕು ಮಂದಿ ಶಾಸಕರಿದ್ದಾಗಿನಿಂದ ಪಕ್ಷ ಕಟ್ಟಿ ಬೆಳೆಸಿದವರು. ರೈತ ರೈತ ರೈತ ಅಂತ ಜಪ ಮಾಡಿದವರು ದೇವೇಗೌಡರನ್ನು ಬಿಟ್ಟರೆ ಯಡಿಯೂರಪ್ಪ ಮಾತ್ರ. ಸಿಎಂ ವಿರುದ್ಧ ಮೊದಲು ಮಾತಾಡಿದ್ದೇ ಲಿಂಗಾಯತ ಶಾಸಕರು. ಆಗ ಯಾಕೆ ಸ್ವಾಮೀಜಿಗಳು ಅಂಥ ಶಾಸಕರಿಗೆ ಬುದ್ಧಿ ಹೇಳಲಿಲ್ಲ? ಈಗ ಶ್ರೀಗಳು ಬಂದು ಪಕ್ಷ ಸರ್ವನಾಶ ಆಗುತ್ತೆ ಅಂತಿದ್ದಾರೆ. ಲಿಂಗಾಯತ ಶಾಸಕರೇ ಬಿಎಸ್‌ವೈ ವಿರುದ್ಧ ಹೇಳಿಕೆ ನೀಡಿದ್ದರು. ಆಗ ಏಕೆ ಕರೆದು ಸ್ವಾಮೀಜಿಗಳು ಬುದ್ಧಿ ಹೇಳಲಿಲ್ಲ ಎಂದು ಸ್ವಾಮೀಜಿಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.

ಯಡಿಯೂರಪ್ಪ ಏನೇ ಹೇಳಲಿ ಸೂಕ್ತವಾಗಿಯೇ ಹೇಳಿದ್ದಾರೆ. ಅವರೂ ಸಿದ್ದರಾಮಯ್ಯ ತರಹ ಹೇಳಬಹುದಿತ್ತು ನಾನು ಸಿಎಂ ಆಗಲಿ ಅಂತ ನಾನು ಹೇಳಿಲ್ಲ ಬೇರೆಯವರು ಹೇಳಿದ್ದಾರೆ ಅಂತ. ಆದರೆ ಯಡಿಯೂರಪ್ಪ ಹಾಗೆ ಮಾಡಲಿಲ್ಲ. ಯಡಿಯೂರಪ್ಪ ಪಕ್ಷ ಮಾತೃ ಸಮಾನ ಅಂದಿದ್ದಾರೆ ಯಡಿಯೂರಪ್ಪ ಮುಂದುವರೆಯೋಕೆ ಬಿಡಲ್ಲ ಅಂತ ಯಾರು ಹೇಳಿದ್ದು? ಕೆಜೆಪಿ ಕಟ್ಟುವಾಗ ಯಡಿಯೂರಪ್ಪ ಸುತ್ತಲಿದ್ದವರೇ ಅವರನ್ನು ಹಾಳು ಮಾಡಿದ್ದರು. ಅವರಿಗೇ ಏನೇನೋ ಹೇಳಿ ಉಡಾವ್ ಚಡಾವ್ ಮಾಡಿ ತಲೆ ಕೆಡಿಸಿದ್ದರು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಈಶ್ವರಪ್ಪ ಹೇಳಿದ್ದಾರೆ.

ಇದನ್ನೂ ಓದಿ: 

ಬಿಎಸ್​ವೈ ಬಿಜೆಪಿ ತೊರೆದಾಗ ಪಕ್ಷ ಉಳಿಸಿದ ಈಶ್ವರಪ್ಪಗೆ ಸಿಎಂ ಹುದ್ದೆ ಕೊಡಿ: ಹಾಲುಮತ ಮಹಾಸಭಾದಿಂದ ಬಿಜೆಪಿಗೆ ಎಚ್ಚರಿಕೆ

ನಾಳಿದ್ದು ರಾಜಿನಾಮೆ ನೀಡ್ತಾರಂತೆ ಆದ್ರೆ ಸಿಎಂ ಯಡಿಯೂರಪ್ಪ ತರಾತುರಿಯಲ್ಲಿ ಸಾವಿರಾರು ಕೋಟಿ ಯೋಜನೆಗೆ ಅನುಮತಿ ನೀಡ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ ಆತಂಕ

(CM BS Yediyurappas decision and statement made me very happy says Minister KS Eshwarappa )

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್