AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election: ಕಡೂರು ಕ್ಷೇತ್ರದಿಂದ ಸಿಎಂ ಧನಂಜಯ್ ಜೆಡಿಎಸ್ ಅಭ್ಯರ್ಥಿ

ಹಾಸನ ಸಂಸದರ ನಿವಾಸದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಅಭ್ಯರ್ಥಿಯ ಆಯ್ಕೆ ನಡೆಯಿತು. ಮಾಜಿ ಸಚಿವ ಎಚ್​ಡಿ ರೇವಣ್ಣ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

Karnataka Assembly Election: ಕಡೂರು ಕ್ಷೇತ್ರದಿಂದ ಸಿಎಂ ಧನಂಜಯ್ ಜೆಡಿಎಸ್ ಅಭ್ಯರ್ಥಿ
ಜೆಡಿಎಸ್ ಪಕ್ಷದ ಚಿಹ್ನೆ
Ganapathi Sharma
|

Updated on: Mar 06, 2023 | 6:23 PM

Share

ಹಾಸನ: ಮುಂಬರುವ ವಿಧಾನಸಭೆ ಚುನಾವಣೆಗೆ ಕಡೂರು (Kadur) ಕ್ಷೇತ್ರದ ಜೆಡಿಎಸ್ (JDS) ಅಭ್ಯರ್ಥಿಯನ್ನಾಗಿ ಸಿಎಂ ಧನಂಜಯ್ (CM Dhananjay) ಅವರನ್ನು ಪಕ್ಷ ಆಯ್ಕೆ ಮಾಡಿದೆ. ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿರುವ ಧನಂಜಯ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಎಂಎಲ್​​ಸಿ ಭೋಜೇಗೌಡ ಸೋಮವಾರ ಘೋಷಣೆ ಮಾಡಿದರು. ಹಾಸನ ಸಂಸದರ ನಿವಾಸದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಅಭ್ಯರ್ಥಿಯ ಆಯ್ಕೆ ನಡೆಯಿತು. ಮಾಜಿ ಸಚಿವ ಎಚ್​ಡಿ ರೇವಣ್ಣ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಕಡೂರು ಕ್ಷೇತ್ರದ ಅಭ್ಯರ್ಥಿ ಬಗ್ಗೆ ಇಂದು ಪ್ರಮುಖರ ಸಭೆ ಕರೆದು ಚರ್ಚೆ ಮಾಡಲಾಗಿದೆ. ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ವರಿಷ್ಠರ ಜೊತೆಗೂ ಚರ್ಚಿಸಲಾಗಿದೆ. ಕುಮಾರಣ್ಣ, ದೇವೇಗೌಡರು, ರಾಜ್ಯ ಅದ್ಯಕ್ಷರ ಅನುಮತಿ ಪಡೆಯಲಾಗಿದೆ. ಒಮ್ಮತದ ಅಭ್ಯರ್ಥಿಯಾಗಿ ಧನಂಜಯ್ ಅವರ ಹೆಸರನ್ನು ಅಂತಿಮ ಗೊಳಿಸಲಾಗಿದೆ. ಇದಕ್ಕೆ ಎಚ್​ಡಿ ಕುಮಾರಸ್ವಾಮಿ ಕೂಡ ಅನುಮತಿ ಕೊಟ್ಟಿದ್ದಾರೆ ಎಂದು ಸಂಸದ ಪ್ರಜ್ವಲ್ ತಿಳಿಸಿದ್ದಾರೆ.

ಕಡೂರು ಕ್ಷೇತ್ರದಲ್ಲಿ ಪಕ್ಷವನ್ನು ಪ್ರತಿನಿಧಿಸುತ್ತಿದ್ದ ವೈಸ್​ವಿ ದತ್ತಾ ಅವರು ಇತ್ತೀಚೆಗೆ ಕಾಂಗ್ರೆಸ್​​ ಸೇರಿದ್ದರು. ಈ ವಿಚಾರವಾಗಿ ದತ್ತಾ ವಿರುದ್ಧ ಇತ್ತೀಚೆಗೆ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಮತ್ತೊಂದೆಡೆ, ಹಾಸನ ಜಿಲ್ಲೆಯಲ್ಲಿ ಜೆಡಿಎಸ್​​ ಪಕ್ಷದಲ್ಲಿ ಗೊಂದಲ ಮುಂದುವರಿದಿದೆ. ಹಾಸನ ಕ್ಷೇತ್ರದ ಟಿಕೆಟ್​ ವಿಚಾರವಾಗಿ ಪಕ್ಷದಲ್ಲಿ ಭಿನ್ನಮತ ಇನ್ನೂ ಪೂರ್ಣ ಶಮನವಾಗಿಲ್ಲ. ಈ ಮಧ್ಯೆಯೇ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಪಕ್ಷ ತೊರೆಯುವುದು ಖಚಿತ ಎಂದು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಕಡೂರು ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್