Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ನಿರ್ಧಾರ ಪ್ರಕಟಿಸಿದ ಸಿಎಂ ಇಬ್ರಾಹಿಂ: ಕಾಂಗ್ರೆಸ್​ನಿಂದ ಮುಸ್ಲಿಮರ ನಿರ್ಲಕ್ಷ್ಯ ಆರೋಪ

ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿಯುತ್ತದೆ ಎಂದು ಸಿಎಂ ಇಬ್ರಾಹಿಂ ಹೇಳಿದರು.

ರಾಜೀನಾಮೆ ನಿರ್ಧಾರ ಪ್ರಕಟಿಸಿದ ಸಿಎಂ ಇಬ್ರಾಹಿಂ: ಕಾಂಗ್ರೆಸ್​ನಿಂದ ಮುಸ್ಲಿಮರ ನಿರ್ಲಕ್ಷ್ಯ ಆರೋಪ
ಸಿ.ಎಂ.ಇಬ್ರಾಹಿಂ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 12, 2022 | 2:25 PM

ಬೆಂಗಳೂರು: ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ. ನಮ್ಮನ್ನು ಬಳಸಿಕೊಳ್ಳುತ್ತಿದೆ, ಆದರೆ ಅಧಿಕಾರ ಕೊಡುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ತೊರೆಯಲು, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಸಿ.ಎಂ.ಇಬ್ರಾಹಿಂ ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1995ನೇ ಇಸವಿಯಲ್ಲಿ ಆಗಿದ್ದ ಬೆಳವಣಿಗೆಯೇ ಈಗಲೂ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ನೆಲೆ ಕಳೆದುಕೊಳ್ಳುತ್ತಿದೆ ಎನ್ನುವುದನ್ನು ನಾನು ಹಲವು ದಿನಗಳಿಂದ ಹೇಳುತ್ತಲೇ ಇದ್ದೇನೆ ಎಂದು ಹೇಳಿದರು.

ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿಯುತ್ತದೆ. ಆದರೆ ಕರ್ನಾಟಕವನ್ನ ಉತ್ತರ ಪ್ರದೇಶ ಆಗಲು ನಾವು ಬಿಡುವುದಿಲ್ಲ. ಇದು ಬಸವಣ್ಣ, ಸರ್ವಜ್ಞ, ಕನಕದಾಸ, ಪುರಂದರದಾಸ, ರಾಘವೇಂದ್ರ ಸ್ವಾಮಿಗಳ ಪುಣ್ಯಸ್ಥಳ. ಹೀಗಾಗಿ ನಾನಿವತ್ತು ಕಾಂಗ್ರೆಸ್ ಪಕ್ಷ ತೊರೆದು ನನ್ನ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು.

ನಾನು ಸ್ವಾಭಿಮಾನದಿಂದ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೆ ಕಳಿಸುತ್ತೇನೆ. ರಾಜೀನಾಮೆ ಅಂಗೀಕಾರ ಮಾಡುವುದು ಅವರಿಗೆ ಸೇರಿದ್ದು. ನಾನು ನನ್ನ ಜವಾಬ್ದಾರಿಯಿಂದ ಮುಕ್ತನಾಗಿದ್ದೇನೆ. ನಾನು ಮುಂದೆ ಯಾವ ನಿರ್ಧಾರ ಬೇಕಿದ್ದರೂ ತೆಗೆದುಕೊಳ್ಳಬೇಕು. ನೀವೂ ಪಕ್ಷ ತೊರೆಯಬೇಡಿ ಅಂತಾ ಜನರನ್ನು ಕಳುಹಿಸಿದ್ರು. ಪಕ್ಷ ತೊರೆಯಬೇಡಿ ಎಂದು ನನ್ನನ್ನು ಬೈಯಿಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ, ಸಿದ್ದರಾಮಾಯ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ನುಡಿದರು.

ಕೆಲವರನ್ನ ಪಕ್ಷದಿಂದ ಅವರೇ ತಳ್ಳುತ್ತಿದ್ದಾರೆ. ನನ್ನನ್ನು ತಳ್ಳುವ ಮೊದಲೇ ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದೇನೆ. ನನ್ನ ಜೊತೆ ಅನೇಕರು ಬರುತ್ತಾರೆ. ಮುಂದೆ ದೇವೇಗೌಡ, ಕುಮಾರಣ್ಣ, ರೇವಣ್ಣರ ಜೊತೆ ಚರ್ಚೆ ಮಾಡಿ ನಿರ್ಣಯ ಪ್ರಕಟ ಮಾಡುತ್ತೇನೆ ಎಂದರು.

ಇಬ್ರಾಹಿಂ ಜೊತೆ ಚರ್ಚೆ ನಡೆಸಿಲ್ಲ: ದೇವೇಗೌಡ

ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ಸೇರುವ ವಿಚಾರದ ಬಗ್ಗೆ ಹಲವು ತಿಂಗಳುಗಳಿಂದ ಚರ್ಚೆ ನಡೆಯುತ್ತಲೇ ಇದೆ. ಆದರೆ ಈವರೆಗೂ ಅವರು ನನ್ನೊಡನೆ ಚರ್ಚಿಸಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್​.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲಾಗಿದೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ -ಸಿ.ಎಂ.ಇಬ್ರಾಹಿಂ

ಇದನ್ನೂ ಓದಿ: ನನ್ನನ್ನು ಶ್ವಾನಕ್ಕೆ ಹೋಲಿಸುವ ಇಬ್ರಾಹಿಂ ತಮ್ಮನ್ನು ವಿಧಾನ ಪರಿಷತ್ ಸದಸ್ಯ ಮಾಡಿದವರಿಗೆ ನಿಷ್ಠರಾಗಿದ್ದಾರೆಯೇ? ವಿಎಸ್ ಉಗ್ರಪ್ಪ

Published On - 2:20 pm, Sat, 12 March 22

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!