AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ಹಾಗೂ ಪಕ್ಷದ ವರಿಷ್ಠರ ಮೇಲೆ ಮುನಿಸಿಕೊಂಡಿರುವ ಸಿ.ಎಂ.ಇಬ್ರಾಹಿಂ ಅವರನ್ನು ಇದೀಗ ಅಧಿಕೃತವಾಗಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇವರೊಂದಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸಿಕೆ ನಾಣು ಅವರನ್ನೂ ಉಚ್ಚಾಟಿಸಲಾಗಿದೆ. ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್
ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on:Dec 09, 2023 | 3:47 PM

Share

ಬೆಂಗಳೂರು, ಡಿ.9: ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ (CM Ibrahim) ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು (CK Nanu) ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ. ಇಂದು ಜೆಡಿಎಸ್ (JDS) ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಎಲ್ಲಾ ಸದಸ್ಯರು, ಇತರ ರಾಜ್ಯ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ, ತಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ತನ್ನನ್ನು ಪರಿಗಣಿಸದೆ ದೆಹಲಿಗೆ ತೆರಳಿ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಅಲ್ಲದೆ, ಮೈತ್ರಿ ಮಾಡಿಕೊಳ್ಳದಂತೆ ಒತ್ತಡ ಹೇರುತ್ತಲೇ ಇದ್ದರು.

ಇದನ್ನೂ ಓದಿ: ನಮ್ಮ ಮಾತನ್ನು ಕೇಳದಿದ್ದರೆ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ: ಸಿಎಂ ಇಬ್ರಾಹಿಂ

ಅದಾಗ್ಯೂ, ಜೆಡಿಎಸ್​​ ಪಕ್ಷದಿಂದ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಅವರು ಇತ್ತೀಚೆಗೆ ಆದೇಶಿಸಿದ್ದರು. ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು ಮತ್ತು ಇನ್ನೂ ಕೆಲವು ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದರು.

ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ.

ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Sat, 9 December 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ