AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ಹಾಗೂ ಪಕ್ಷದ ವರಿಷ್ಠರ ಮೇಲೆ ಮುನಿಸಿಕೊಂಡಿರುವ ಸಿ.ಎಂ.ಇಬ್ರಾಹಿಂ ಅವರನ್ನು ಇದೀಗ ಅಧಿಕೃತವಾಗಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇವರೊಂದಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸಿಕೆ ನಾಣು ಅವರನ್ನೂ ಉಚ್ಚಾಟಿಸಲಾಗಿದೆ. ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ, ರಾಷ್ಟ್ರೀಯ ಉಪಾಧ್ಯಕ್ಷರಿಗೂ ಗೇಟ್​ಪಾಸ್
ಜೆಡಿಎಸ್​ನಿಂದ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಉಚ್ಚಾಟನೆ
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on:Dec 09, 2023 | 3:47 PM

Share

ಬೆಂಗಳೂರು, ಡಿ.9: ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ (CM Ibrahim) ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ. ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು (CK Nanu) ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ. ಇಂದು ಜೆಡಿಎಸ್ (JDS) ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ.

ಜೆಡಿಎಸ್ ಕಚೇರಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಎಲ್ಲಾ ಸದಸ್ಯರು, ಇತರ ರಾಜ್ಯ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ, ತಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದರೂ ತನ್ನನ್ನು ಪರಿಗಣಿಸದೆ ದೆಹಲಿಗೆ ತೆರಳಿ ಮೈತ್ರಿ ಮಾತುಕತೆ ನಡೆಸಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಅಲ್ಲದೆ, ಮೈತ್ರಿ ಮಾಡಿಕೊಳ್ಳದಂತೆ ಒತ್ತಡ ಹೇರುತ್ತಲೇ ಇದ್ದರು.

ಇದನ್ನೂ ಓದಿ: ನಮ್ಮ ಮಾತನ್ನು ಕೇಳದಿದ್ದರೆ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ: ಸಿಎಂ ಇಬ್ರಾಹಿಂ

ಅದಾಗ್ಯೂ, ಜೆಡಿಎಸ್​​ ಪಕ್ಷದಿಂದ ಇಬ್ರಾಹಿಂ ಅವರನ್ನು ಅಮಾನತುಗೊಳಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​​ಡಿ ದೇವೇಗೌಡ ಅವರು ಇತ್ತೀಚೆಗೆ ಆದೇಶಿಸಿದ್ದರು. ಕರ್ನಾಟಕ ರಾಜ್ಯ ಘಟಕದ ಪ್ರಸ್ತುತ ಕಾರ್ಯಕಾರಿ ಸಮಿತಿಯು ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿರುವುದಿಲ್ಲ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಇದು ಮತ್ತು ಇನ್ನೂ ಕೆಲವು ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಆದೇಶದಲ್ಲಿ ತಿಳಿಸಿದ್ದರು.

ಅಲ್ಲದೆ ಪಕ್ಷದ ಹಿತದೃಷ್ಟಿಯಿಂದ ಮತ್ತು ಪಕ್ಷವನ್ನು ಸಂಘಟನೆ ಮಾಡಲು, ಬಲವರ್ಧಿಸಲು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಜತೆ ಮೈತ್ರಿ/ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ. ಈ ಹೊಂದಾಣಿಕ ಬಗ್ಗೆ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲು ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಗಿದೆ.

ಈ ವಿಚಾರವಾಗಿ ನಡೆದ ಸಭೆಗಳಲ್ಲಿ ಸಿಎಂ ಇಬ್ರಾಹಿಂ ಅವರು ಉಪಸ್ಥಿತರಿದ್ದು ಚರ್ಚೆಯಲ್ಲಿ ಮತ್ತು ತೀರ್ಮಾನದಲ್ಲಿ ಪಾಲುದಾರರಾಗಿದ್ದರು. ತದನಂತರ ಈ ತೀರ್ಮಾನದ ವಿರುದ್ಧ ವಿರೋಧಭಾಸ ಹೇಳಿಕೆ ನೀಡುತ್ತಿರುವುದಾಗಿ ವರದಿಯಾಗಿದೆ. ಈ ಕಾರಣಗಳಿಗಾಗಿ ರಾಜ್ಯಾಧ್ಯಕ್ಷರನ್ನೊಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಜೆಡಿಎಸ್ ಸಂವಿಧಾನದ ಸೆಕ್ಷನ್ 10ರ ಅನ್ವಯ ನವೆಂಬರ್ 19ರಿಂದ ಅನ್ವಯವಾಗುವಂತೆ ವಿಸರ್ಜನೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ದೇವೇಗೌಡರು ತಿಳಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Sat, 9 December 23

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ