AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.  

ಸೋಲಿನ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ
ಸಿ.ಎಂ.ಇಬ್ರಾಹಿಂ
ಗಂಗಾಧರ​ ಬ. ಸಾಬೋಜಿ
|

Updated on:May 24, 2023 | 4:37 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬುಧವಾರ ಸಿ.ಎಂ.ಇಬ್ರಾಹಿಂ (CM Ibrahim) ರಾಜೀನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತು ದೇವೆಗೌಡ್ರು ಹಿರಿಯರು, ಮುಖಂಡರು ಎಲ್ಲರನ್ನ ಕರೆದಿದ್ದಾರೆ. ಫಲಿತಾಂಶ ಬಂದ ಮರುದಿನ ಸೋಲಿನ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ‌ ಸಲ್ಲಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ನಡೆಗೆ ಸಿ.ಎಂ.ಇಬ್ರಾಹಿಂ ಟೀಕೆ  

ಹೊಸ ಸರ್ಕಾರ ರಚನೆಯಾಗಿದೆ ಶುಭವಾಗಲಿ. ಕಾಂಗ್ರೆಸ್‌ನಲ್ಲಿದ್ದರೆ ಮಂತ್ರಿಯಾಗುತ್ತಿದ್ರಿ ಎಂಬ ಪ್ರಶ್ನೆಗೆ ಉತ್ತರಿಸಿ, ಗೌರವ ಇಲ್ಲದ ಕಡೆ ಸ್ಥಾನಕ್ಕೆ ಹೋಗಲ್ಲ, ಮಾನಕ್ಕೆ ಹೋಗುತ್ತೇವೆ. ಯು.ಟಿ.ಖಾದರ್‌ನ ಡಿಸಿಎಂ ಮಾಡಬಹುದಿತ್ತಲ್ಲ. ಈಗ ಅವರು ಎದ್ದೇಳುವ ಹಾಗೂ ಇಲ್ಲ, ಮಾತನಾಡುವ ಹಾಗೂ ಇಲ್ಲ. ಯು‌.ಟಿ.ಖಾದರ್ ಸ್ಪೀಕರ್ ಮಾಡಿದ ಕಾಂಗ್ರೆಸ್ ನಡೆಗೆ ಟೀಕೆ ಮಾಡಿದರು.

ಇದನ್ನೂ ಓದಿ: ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ಇಲ್ಲ ಎಂದ ನೂತನ ಸಚಿವ ಎಂಬಿ ಪಾಟೀಲ್

ರಾಜ್ಯದಲ್ಲಿ 60 ಲಕ್ಷ ಮತ ಪಡೆದಿದ್ದೇವೆ

ಬಿಜೆಪಿ ವಿರೋಧಿ ಅಲೆ ಲಾಭ ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೂ ನಾವು ರಾಜ್ಯದಲ್ಲಿ 60 ಲಕ್ಷ ಮತ ಪಡೆದಿದ್ದೇವೆ. ಜಿಪಂ, ತಾಪಂ ಚುನಾವಣೆಗೆ ಸಜ್ಜಾಗಿ ಅಂತ ಕಾರ್ಯಕರ್ತರಿಗೆ ಹೇಳುತ್ತೇನೆ. ಈ ಸರ್ಕಾರದ ಮೂರು ತಿಂಗಳ ಹನಿಮೂನ್ ಪಿರ್ಯಾಡ್ ನೋಡುತ್ತೇವೆ. ನಮ್ಮಲ್ಲಿ ಮತ ಪರಿವರ್ತನೆಗಾಗಿ ಸಿದ್ದತೆ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇವೆ. ಕೊನೆಯ ನಾಲ್ಕು ದಿನದ ತಂತ್ರಗಾರಿಕೆಯಲ್ಲಿ ವಿಫಲವಾಗಿದ್ದೇವೆ ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:21 pm, Wed, 24 May 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ