AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ, ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ; ಸಚಿವ ಆರ್ ಅಶೋಕ್

ಅಮಿತ್ ಶಾ ಬಂದಿದ್ದಾರೆ ಎಂದರೆ ಗೆಲುವು ನಮ್ಮದೆ. ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ. ಹೊರಟ್ಟಿ ಬಿಜೆಪಿ ಸೇರಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕದಲ್ಲಿ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ, ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ; ಸಚಿವ ಆರ್ ಅಶೋಕ್
ಸಚಿವ ಆರ್.ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on:May 03, 2022 | 11:57 AM

Share

ಬೆಂಗಳೂರು: ಕರ್ನಾಟಕದಲ್ಲಿ ಸಿಎಂ (Karnataka CM) ಬದಲಾವಣೆಯ ಪ್ರಶ್ನೆಯೇ ಇಲ್ಲ. ಯಾರೂ ಮುಖ್ಯಮಂತ್ರಿಯಾಗುವ ಕನಸು ಕಾಣಬೇಡಿ ಎಂದು ಬೆಂಗಳೂರಿನಲ್ಲಿ ಟಿವಿ9ಗೆ ಸಚಿವ ಆರ್. ಅಶೋಕ್ (R Ashok) ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಮಿತ್ ಶಾ ಬಂದಿದ್ದಾರೆ ಎಂದರೆ ಗೆಲುವು ನಮ್ಮದೆ. ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ. ಹೊರಟ್ಟಿ ಬಿಜೆಪಿ ಸೇರಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಸಿಎಂ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ. ಸಿಎಂ ಬೊಮ್ಮಾಯಿಗೆ ಕೇಂದ್ರದ ಸಂಪೂರ್ಣ ಸಹಕಾರ ಇದೆ. ಸಿಎಂ ಬದಲಾವಣೆ ಬಗ್ಗೆ ಯಾರೂ ಹಗಲುಗನಸು ಕಾಣಬೇಡಿ. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸ್ತೇವೆ ಎಂದು ಹೇಳಿಕ ನೀಡಿದ ಅಶೋಕ್, ಸಿಎಂ ಬದಲಾವಣೆ ಎನ್ನುವವರಿಗೆ ಟಾಂಗ್ ಕೊಟ್ಟಿದ್ದಾರೆ.

ಇವತ್ತು ಬಸವ ಜಯಂತಿ ದಿನ ಬಸವರಾಜ ಹೊರಟ್ಟಿಯವರು ಬಿಜೆಪಿ ಸೇರುವ ಮನಸ್ಸು ಮಾಡಿದ್ದಾರೆ. 7 ಬಾರಿ ಎಂಎಲ್ಎ ಆಗಿ ಹಲವು ಹುದ್ದೆಗಳನ್ನ ನಿಭಾಯಿಸಿದ್ದಾರೆ. ಹೊರಟ್ಟಿ ಸರಳ ಸಜ್ಜನ ರಾಜಕಾರಣಿ ಇವರಿಂದ ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ. ಎಸ್ಎಂ ಕೃಷ್ಣಾರಂತವರು ಬಂದಿದ್ದಾರೆ. ಇವತ್ತು ಮತ್ತೊಬ್ಬ ಮುತ್ಸದ್ದಿ ಸೇರಿದ್ದಾರೆ. ಮುಂದಿನ ಚುನಾವಣೆಗೆ ಇದು ದಿಕ್ಸೂಚಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಬೇಕು ಅಂತಾ ಜನ ಪರ್ವ ಶುರುಮಾಡಿದ್ದಾರೆ. ಹೊರಟ್ಟಿಯವರು ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಶಿ, ಬೊಮ್ಮಾಯಿಯವರನ್ನ ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಇದೊಂದು ಸಂದೇಶ ರಾಜ್ಯದ ಜನತೆಗೆ ಬಿಜೆಪಿ ದಿಕ್ಕನ್ನ ತೋರಿಸುತ್ತದೆ. ಅವರ ಸ್ಥಾನಮಾನದ ಬಗ್ಗೆ ಇನ್ನು ಚರ್ಚೆ ಇಲ್ಲ. ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

ಕಟೀಲು ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಬಿ.ಎಲ್​.ಸಂತೋಷ್​ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ ಅಂತ ಸಚಿವರು ಹೇಳಿದರು.

ಇದನ್ನೂ ಓದಿ

ಹಣ ದುಪ್ಪಟ್ಟು ಮಾಡುವುದಾಗಿ ಹೇಳಿ ಹುಬ್ಬಳ್ಳಿ ವೈದ್ಯೆಗೆ 50 ಲಕ್ಷ ರೂ. ವಂಚನೆ!

Jodhpur Clash: ಈದ್ ವೇಳೆ ಜೋಧ್​ಪುರದಲ್ಲಿ 2 ಸಮುದಾಯಗಳ ನಡುವೆ ಘರ್ಷಣೆ, ಕಲ್ಲು ತೂರಾಟ; ಇಂಟರ್ನೆಟ್​ ಸೇವೆ ಸ್ಥಗಿತ

Published On - 11:42 am, Tue, 3 May 22

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ