AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udhayanidhi Stalin: ತಮಿಳುನಾಡಿನ ಸಚಿವರಾಗಿ ನಾಳೆ ಸಿಎಂ ಸ್ಟಾಲಿನ್ ಮಗ ಉದಯನಿಧಿ ಪ್ರಮಾಣವಚನ ಸ್ವೀಕಾರ

ಪ್ರಮಾಣ ವಚನ ಸ್ವೀಕಾರ ಸಮಾರಂಭವು ಡಿಸೆಂಬರ್ 14ರಂದು ಚೆನ್ನೈನ ರಾಜಭವನದ ದರ್ಬಾರ್ ಹಾಲ್‌ನಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ತಿಳಿಸಿದೆ.

Udhayanidhi Stalin: ತಮಿಳುನಾಡಿನ ಸಚಿವರಾಗಿ ನಾಳೆ ಸಿಎಂ ಸ್ಟಾಲಿನ್ ಮಗ ಉದಯನಿಧಿ ಪ್ರಮಾಣವಚನ ಸ್ವೀಕಾರ
Image Credit source: Twitter
TV9 Web
| Edited By: |

Updated on: Dec 13, 2022 | 10:54 AM

Share

ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ (MK Stalin) ಪುತ್ರ ಉದಯನಿಧಿ ನಾಳೆ (ಬುಧವಾರ) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿ. 14ರಂದು ಬೆಳಗ್ಗೆ 9.30ಕ್ಕೆ ಉದಯನಿಧಿ ಸ್ಟಾಲಿನ್ (Udhayanidhi Stalin) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಉದಯನಿಧಿ ಸ್ಟಾಲಿನ್ ಅವರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸುವಂತೆ ತಮಿಳುನಾಡು ರಾಜ್ಯಪಾಲರಾದ ಆರ್.ಎನ್ ರವಿ ಅವರಿಗೆ ಶಿಫಾರಸು ಮಾಡಿದ್ದಾರೆ. ರಾಜ್ಯಪಾಲರು ಆ ಶಿಫಾರಸಿಗೆ ಅನುಮೋದನೆ ನೀಡಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭವು ಡಿಸೆಂಬರ್ 14ರಂದು ಚೆನ್ನೈನ ರಾಜಭವನದ ದರ್ಬಾರ್ ಹಾಲ್‌ನಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ ಎಂದು ರಾಜಭವನದ ಅಧಿಕೃತ ಪ್ರಕಟಣೆ ತಿಳಿಸಿದೆ. ಡಿಎಂಕೆ ಮೂಲಗಳು ಮೊದಲ ಬಾರಿಗೆ ಸಚಿವರಾಗುತ್ತಿರುವ ಉದಯನಿಧಿ ಸ್ಟಾಲಿನ್ ಅವರಿಗೆ ಕ್ರೀಡಾ ಖಾತೆಯನ್ನು ನೀಡುವ ಸಾಧ್ಯತೆಯಿದೆ. ಈ ಮೂಲಕ ತಮಿಳುನಾಡಿನಲ್ಲಿ ಕ್ಯಾಬಿನೆಟ್ ಪುನರ್​ರಚನೆ ಆಗುವ ಸಾಧ್ಯತೆಯ ಬಗ್ಗೆ ಸುಳಿವು ನೀಡಲಾಗಿದೆ.

ಇದನ್ನೂ ಓದಿ: Chennai Rain: ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತದ ಅಬ್ಬರ; ತಿರುವಳ್ಳೂರ್, ಕಾಂಚೀಪುರಂನಲ್ಲಿ ಇಂದು ಶಾಲೆಗಳಿಗೆ ರಜೆ

ಡಿಎಂಕೆ ಅಧಿಕಾರಕ್ಕೆ ಬಂದ 1 ವರ್ಷದ ನಂತರ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಮೊದಲ ಸಂಪುಟ ವಿಸ್ತರಣೆ ಇದಾಗಿದೆ. 45 ವರ್ಷದ ಉದಯನಿಧಿ ಸ್ಟಾಲಿನ್ ಕಳೆದ ವರ್ಷ ಚೆಪಾಕ್ ತಿರುವಲ್ಲಿಕೇಣಿ ಕ್ಷೇತ್ರದಿಂದ ವಿಧಾನಸಭೆಗೆ ಚುನಾಯಿತರಾಗಿದ್ದರು. ಈ ಹಿಂದೆ ಅವರ ಅಜ್ಜ ಕರುಣಾನಿಧಿ ಆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಇದನ್ನೂ ಓದಿ: ಚೆನ್ನೈನಲ್ಲಿ ನಡೆದ ಬಂಗಾಳದ ರಾಜ್ಯಪಾಲರ ಮನೆ ಸಮಾರಂಭದಲ್ಲಿ ಒಟ್ಟಾಗಿ ಕಾಣಿಸಿಕೊಂಡ ಮಮತಾ ಬ್ಯಾನರ್ಜಿ, ಸಿಎಂ ಸ್ಟಾಲಿನ್, ರಜನಿಕಾಂತ್

ಉದಯನಿಧಿ ಪ್ರಸ್ತುತ ಡಿಎಂಕೆ ಪಕ್ಷದ ಯುವ ಘಟಕದ ಮುಖ್ಯಸ್ಥರಾಗಿದ್ದಾರೆ. ಈ ಸ್ಥಾನವನ್ನು ದಶಕಗಳಿಂದ ಸ್ಟಾಲಿನ್ ಹೊಂದಿದ್ದರು. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಶಾಸಕ ಮತ್ತು ಮೇಯರ್ ಮಟ್ಟದಿಂದ ಸಿಎಂ ಸ್ಥಾನಕ್ಕೆ ಏರಿದ್ದಾರೆ. ಆಡಳಿತಾರೂಢ ಡಿಎಂಕೆಯು ಚುನಾಯಿತ ಸ್ಥಾನಗಳಲ್ಲಿ ಲೋಕಸಭೆಯ ಸಂಸದರಾದ ಎಂಕೆ ಕನಿಮೋಳಿ ಮತ್ತು ದಯಾನಿಧಿ ಮಾರನ್ ಸೇರಿದಂತೆ ಕರುಣಾನಿಧಿ ಕುಟುಂಬದ ನಾಲ್ವರು ಸದಸ್ಯರು ಅಧಿಕಾರದಲ್ಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ