AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಮಾಧಾನ ಶಮನಕ್ಕೆ ಮುಂದಾದ ಸಿಎಂ, ಡಿಸಿಎಂ: ಸೋಮವಾರ ಆರು ಜಿಲ್ಲೆಗಳ ಸಚಿವರು, ಶಾಸಕರ ಜೊತೆ ಸಭೆ

ಸೋಮವಾರದಿಂದ ಮೂರು ದಿನಗಳ ಕಾಲ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಜಿಲ್ಲಾವಾರು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಶಾಸಕರ ದೂರು, ಅಹವಾಲನ್ನು ಆಲಿಸಲಿದ್ದಾರೆ.

ಅಸಮಾಧಾನ ಶಮನಕ್ಕೆ ಮುಂದಾದ ಸಿಎಂ, ಡಿಸಿಎಂ: ಸೋಮವಾರ ಆರು ಜಿಲ್ಲೆಗಳ ಸಚಿವರು, ಶಾಸಕರ ಜೊತೆ ಸಭೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​
ಪ್ರಸನ್ನ ಗಾಂವ್ಕರ್​
| Edited By: |

Updated on: Aug 06, 2023 | 10:05 AM

Share

ಬೆಂಗಳೂರು: ಸೋಮವಾರ (ಆ.07) ರಿಂದ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಜಿಲ್ಲಾವಾರು ಸಭೆ ನಡೆಸಲಿದ್ದಾರೆ. ಮೂರು ದಿನಗಳ ಕಾಲ ಕಾಂಗ್ರೆಸ್ ಶಾಸಕರ (Congress MLA) ದೂರು, ಅಹವಾಲನ್ನು ಆಲಿಸಲಿದ್ದಾರೆ. ಮೊದಲ ದಿನ 6 ಜಿಲ್ಲೆಗಳ 31 ಶಾಸಕರು ಹಾಗೂ ಸಚಿವರ ಜೊತೆ ಸಭೆ ನಡೆಸಲಿದ್ದಾರೆ.

ಶಾಸಕರು ಇತ್ತೀಚೆಗೆ ನಡೆದಿದ್ದ ಶಾಸಕಾಂಗ ಸಭೆಯಲ್ಲಿ ಸಚಿವರು ಗೌರವ ಕೊಡ್ತಿಲ್ಲವೆಂದು ಅಸಮಾಧಾನ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ತಾವೇ ಖುದ್ದು ಅಹವಾಲು ಕೇಳುವುದಾಗಿ ಸಭೆಯಲ್ಲಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಗಳು ನಡೆಯಲಿವೆ.

ಸೋಮವಾರ ಬೆಳಗ್ಗೆ 11ರಿಂದ 12ರವರೆಗೆ ತುಮಕೂರು ಸಭೆ: ಬೆಳಗ್ಗೆ 11 ಗಂಟೆಗೆ ಗೃಹ ಸಚಿವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಸಚಿವಎನ್‌.ರಾಜಣ್ಣ, ಶಾಸಕರಾದ ಟಿ.ಬಿ.ಜಯಚಂದ್ರ, ಕೆ.ಷಡಕ್ಷರಿ, ಡಾ.ಎಚ್.ಡಿ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಎಚ್.ಬಿ.ವೆಂಕಟೇಶ್, ಪರಿಷತ್‌ ಸದಸ್ಯ ಆರ್.ರಾಜೇಂದ್ರ ರಾಜಣ್ಣ ಅವರೊಂದಿಗೆ ಸಭೆ.

ಇದನ್ನೂ ಓದಿ: ನಾವು ನುಡಿದಂತೆ ನಡೆಯುತ್ತೇವೆ, ಇದುವೇ ಕರ್ನಾಟಕ ಮಾದರಿ ಆಡಳಿತ: ಸಿಎಂ ಸಿದ್ದರಾಮಯ್ಯ

ಮಧ್ಯಾಹ್ನ 12 ರಿಂದ 1 ಗಂಟೆವರೆಗೆ ಯಾದಗಿರಿ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸುರಪುರ ಶಾಸಕ ರಾಜಾ ವೆಂಕಟಪ್ಪನಾಯಕ, ಯಾದಗಿರಿ ಶಾಸಕ ಚೆನ್ನಾರೆಡ್ಡಿ, ಪಾಟೀಲ್‌ ತನ್ನೂರು ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1ರಿಂದ 2 ಗಂಟೆವರೆಗೆ ಚಿತ್ರದುರ್ಗ ಸಭೆ: ಸಭೆಯಲ್ಲಿ ಜಿಲ್ಲಾ ಉಸ್ತುವಾರಿಸಚಿವಡಿ.ಸುಧಾಕರ್, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ. ಗೋವಿಂದಪ್ಪ ಅವರಿಗೆ ಭಾಗವಹಿಸಲು ಆಹ್ವಾನ ನೀಡಲಾಗಿದೆ.

ಸಂಜೆ 4 ರಿಂದ ಬಾಗಲಕೋಟಿ ಸಭೆ: ಸಂಜೆ 4 ಗಂಟೆಯಿಂದ 5 ಗಂಟೆವರೆಗೆ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ .ಬಿ.ತಿಮ್ಮಾಪುರ, ಶಾಸಕರಾದ ಜೆ.ಟಿ.ಪಾಟೀಲ್, ಬಿ.ಬಿ.ಚಿಮ್ಮನಕಟ್ಟಿ, ಎಚ್.ವೈ.ಮೇಟಿ, ವಿಜಯಾನಂದ ಕಾಶಪ್ಪನವರ್ ಅವರೊಂದಿಗೆ ಮುಖ್ಯ ಮಂತ್ರಿಗಳು ಸಭೆ ನಡೆಸಲಿದ್ದಾರೆ.

ಸಂಜೆ 5 ರಿಂದ ಬಳ್ಳಾರಿ ಸಭೆ: ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ ಅವರು ಬಳ್ಳಾರಿ ಶಾಸಕರ ಅಹವಾಲು ಆಲಿಸುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6ರಿಂದ ಧಾರವಾಡ ಸಭೆ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ನವಲಗುಂದ ಶಾಸಕ ಕೋನರೆಡ್ಡಿ, ಧಾರವಾಡದ ವಿನಯ್ ಕುಲಕರ್ಣಿ, ಹುಬ್ಬಳ್ಳಿ-ಧಾರವಾಡ ಪೂರ್ವ ಅಬ್ಬಯ್ಯ ಪ್ರಸಾದ್, ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಧಾರವಾಡ ಸಭೆಯಲ್ಲಿ ಹಾಜರಿದ್ದು ಅಹವಾಲು ಹೇಳಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್